ಮಂಗಳೂರು ಡ್ರ್ಯಾಗನ್ಸ್ ಜಯಭೇರಿ: ಮಹಾರಾಜ ಟೂರ್ನಿಯಲ್ಲಿ ಮೊದಲ ಶತಕ ಸಿಡಿಸಿದ ಶರತ್

ಬೆಂಗಳೂರು: ಬಿ.ಆರ್.ಶರತ್ ದಾಖಲಿಸಿದ ಅಜೇಯ ಶತಕ (111) ಹಾಗೂ ರೋಹನ್ ಪಾಟೀಲ್ (54) ಅರ್ಧಶತಕದ ನೆರವಿನಿಂದ ಮೈಸೂರು ವಾರಿಯರ್ಸ್ ತಂಡದ ವಿರುದ್ಧ ಮಂಗಳೂರು ಡ್ರ್ಯಾಗನ್ಸ್ 5 ವಿಕೆಟ್ಗಳ ಜಯ ದಾಖಲಿಸಿದೆ. ಮಹಾರಾಜ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿಂದು ಮಂಗಳೂರು ಡ್ರ್ಯಾಗನ್ಸ್ ತಂಡವು ಮೈಸೂರು ನೀಡಿದ್ದ 202 ರನ್ ತಲುಪಿ ಗೆದ್ದು ಬೀಗಿತು.ಮೈಸೂರು ನೀಡಿದ 202 ರನ್ಗಳ ಬೃಹತ್ ಗುರಿಯನ್ನು ಮಂಗಳೂರು ತಂಡ 7 ಎಸೆತ ಬಾಕಿ ಇರುವಂತೆಯೇ ತಲುಪಿತು. ಆದರೆ, 54 ರನ್ ಗಳಿಸಿದ್ದ ರೋಹನ್ ಪಾಟೀಲ್ ಜೆ.ಸುಚಿತ್ಗೆ […]
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮೊಟ್ಟ ಮೊದಲ ಶತಕಕ್ಕೆ 33 ವರ್ಷ!

ನವದೆಹಲಿ: ಇಂದು ಸಚಿನ್ ತೆಂಡೂಲ್ಕರ್ ‘ಕ್ರಿಕೆಟ್ ದೇವರು’ ಎಂದೇ ಕರೆಸಿಕೊಳ್ಳುತ್ತಿದ್ದಾರೆ. ಆದರೆ, 1990ರಲ್ಲಿ 17 ವರ್ಷದ ಈ ಯುವ ಆಟಗಾರನನ್ನು ಎದುರಾಳಿ ತಂಡದ ಬೌಲರ್ಗಳು ಗೇಲಿ ಮಾಡುತ್ತಿದ್ದರು ಎಂಬುದು ಗಮನಾರ್ಹ.’ಶತಕಗಳ ಶತಕ’ ದಾಖಲಿಸಿದ ‘ಜಾಗತಿನ ಕ್ರಿಕೆಟ್ ಮಾಂತ್ರಿಕ’ ಸಚಿನ್ ತೆಂಡೂಲ್ಕರ್ ಅವರ ಬ್ಯಾಟ್ನಿಂದ ಮೊದಲ 100 ರನ್ ದಾಖಲಾಗಿ ಇಂದಿಗೆ 33 ವರ್ಷವಾಗುತ್ತಿದೆ. ಶತಕಗಳ ಶತಕ ದಾಖಲಿಸಿದ ಸಚಿನ್ ತೆಂಡೂಲ್ಕರ್ ಅವರ ಮೊದಲ ಶತಕ 33 ವರ್ಷಗಳ ಹಿಂದೆ ಇದೇ ದಿನ ದಾಖಲಾಗಿತ್ತು. 1990ರ ಆಗಸ್ಟ್ […]
‘ಯಂಗ್ ಇಂಡಿಯಾ’ಗೆ ಬುಮ್ರಾ ಕ್ಯಾಪ್ಟನ್: ಐರ್ಲೆಂಡ್ ಪ್ರವಾಸ

ಹೈದರಾಬಾದ್:ಯುವ ಆಟಗಾರರ ಟೀಂ ವಿಂಡೀಸ್ನಲ್ಲಿ ಯಶಸ್ಸು ಸಾಧಿಸುವಲ್ಲಿ ಎಡವಿತು. ಇನ್ನು, ಇದೇ 18ರಿಂದ ಮೂರು ಟಿ20 ಪಂದ್ಯಗಳ ಸರಣಿಗೆ ಭಾರತ ತಂಡ ಜಸ್ಪ್ರಿತ್ ಬುಮ್ರಾ ನಾಯಕತ್ವದಲ್ಲಿ ಐರ್ಲೆಂಡ್ ಪ್ರವಾಸ ಮಾಡಲಿದೆ. ಗಾಯದಿಂದ ಚೇತರಿಸಿಕೊಂಡು ನೇರವಾಗಿ ಕ್ಯಾಪ್ಟನ್ ಆಗಿ ತಂಡಕ್ಕೆ ಬುಮ್ರಾ ಕಮ್ಬ್ಯಾಕ್ ಮಾಡಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತ ತಂಡ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟಿ20 ಸರಣಿ ಕಳೆದುಕೊಂಡಿತು. ಐರ್ಲೆಂಡ್ ಪ್ರವಾಸದಲ್ಲಿ ರಿಂಕು ಸಿಂಗ್, ಜಿತೇಶ್ ಶರ್ಮಾ ಮತ್ತು ಶಹಬಾಜ್ ಅಹ್ಮದ್ ಪಾದಾರ್ಪಣೆಗೆ ಎದುರು ನೋಡುತ್ತಿದ್ದಾರೆ. ಶಿವಂ […]
ಭಾರತ-ಪಾಕ್ ಸೇರಿ: ಐಸಿಸಿ ಏಕದಿನ ಕ್ರಿಕೆಟ್ 8 ಪಂದ್ಯಗಳ ದಿನ ಬದಲು; ಇದೇ 15ರಿಂದ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ

ದುಬೈ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ವೇಳಾಪಟ್ಟಿಯಲ್ಲಿ ಎಂಟು ಪಂದ್ಯಗಳ ಬದಲಾವಣೆಯಾಗಿದೆ. ಬೆಂಗಳೂರಿನ ಮೈದಾನದಲ್ಲಿ ಭಾರತ- ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಒಂದು ದಿನ ಮುಂದೂಡಲಾಗಿದೆ.ಗುಜರಾತ್ನ ಅಹಮದಾಬಾದ್ನಲ್ಲಿ ನಡೆಯುವ ಭಾರತ-ಪಾಕಿಸ್ತಾನ ಪಂದ್ಯ ಸೇರಿದಂತೆ ಒಟ್ಟು ಎಂಟು ಪಂದ್ಯಗಳ ದಿನ ಬದಲಾಗಿದ್ದು, ಹೊಸ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆಗೊಳಿಸಿತು. ಇತ್ತೀಚೆಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ವೇಳಾಪಟ್ಟಿಯ ಬದಲಾವಣೆಯ ಸಾಧ್ಯತೆಗಳ ಬಗ್ಗೆ ಮಾತನಾಡಿದ್ದರು. ರಾಜ್ಯಗಳ ಕ್ರಿಕೆಟ್ ಸಂಸ್ಥೆಗಳು, ಹಬ್ಬದಂದು ಕ್ರಿಕೆಟ್ ಪಂದ್ಯಗಳು ನಡೆದರೆ ಭದ್ರತಾ ಸಮಸ್ಯೆ ಉಂಟಾಗುವ ಸಮಸ್ಯೆಯಿದೆ ಎಂದು […]
ಐಸಿಸಿ ರ್ಯಾಂಕಿಂಗ್ನಲ್ಲಿ ಗಿಲ್, ಕಿಶನ್ಗೆ ಸಿಹಿ ಸುದ್ದಿ

ದುಬೈ: ಆರಂಭಿಕ ಆಟಗಾರರಾದ ಇಶಾನ್ ಕಿಶನ್ ಮತ್ತು ಶುಭಮನ್ ಗಿಲ್ ತಮ್ಮ ವೃತ್ತಿಜೀವನದ ಅತ್ಯುತ್ತಮ ರ್ಯಾಂಕಿಂಗ್ ಗಿಟ್ಟಿಸಿಕೊಂಡಿದ್ದಾರೆ.ವೆಸ್ಟ್ ಇಂಡೀಸ್ ಪ್ರವಾಸದ ಏಕದಿನ ಪಂದ್ಯಗಳಲ್ಲಿ ಭಾರತ ಕ್ರಿಕೆಟ್ ತಂಡದ ಯುವ ಬ್ಯಾಟರ್ಗಳು ಉತ್ತಮ ಪ್ರದರ್ಶನ ನೀಡಿದ್ದು ಐಸಿಸಿ ಶ್ರೇಯಾಂಕದಲ್ಲಿ ಚೇತರಿಕೆ ಕಂಡಿದ್ದಾರೆ.ಐಸಿಸಿ ಏಕದಿನ ರ್ಯಾಂಕಿಂಗ್ ಬಿಡುಗಡೆಯಾಗಿದೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಮಿಂಚಿದ ಯುವ ಆಟಗಾರರು ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಏಕದಿನ ಕ್ರಿಕೆಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ […]