ಮುಂಬೈನಲ್ಲಿ ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಹೃದಯಾಘಾತದಿಂದ ನಿಧನ

ಮುಂಬೈ: ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಡೀನ್ ಜೋನ್ಸ್ (59) ಅವರು ಗುರುವಾರ ಮುಂಬೈನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2020 ಕ್ರಿಕೆಟ್ ವಿಶ್ಲೇಷಕರಾಗಿ ಸ್ಟಾರ್ ಸ್ಫೋರ್ಟ್ ಕಾಮೆಂಟೆಂಟರಿ ತಂಡದಲ್ಲಿದ್ದ ಮಾಜಿ ಕ್ರಿಕೆಟಿಗ ಡೀನ್ ಜೋನ್ಸ್ ಅವರು ಇಂದು ಖಾಸಗಿ ಹೋಟೆಲ್ ನಲ್ಲಿದ್ದಾಗಲೇ ಹೃದಯಾಘಾತವಾಗಿದೆ ಎನ್ನಲಾಗಿದೆ. ಪ್ರೊ ಡೀನೋ ಹೆಸರಿನಲ್ಲಿ ಹಾಸ್ಯಭರಿತವಾಗಿ ಕ್ರಿಕೆಟ್ ವಿಶ್ಲೇಷಣೆ ಮಾಡುತ್ತಿದ್ದ ಜೋನ್ಸ್ ಅವರು ಭಾರತದಲ್ಲಿ ಜನಪ್ರಿಯರಾಗಿದ್ದರು. ಆಸ್ಟ್ರೇಲಿಯಾ ಪರ 52 ಟೆಸ್ಟ್, 164 ಏಕದಿನ ಅಂತಾರಾಷ್ಟ್ರೀಯ ಪಂದ್ಯ ಹಾಗೂ 245 […]

ಇಂದಿನಿಂದ ಮರಳುನಾಡಿನಲ್ಲಿ ಐಪಿಎಲ್ ಜಾತ್ರೆ ಶುರು: ಉದ್ಘಾಟನಾ ಪಂದ್ಯದಲ್ಲಿ ಮುಂಬೈ- ಚೆನ್ನೈ ತಂಡಗಳ ಸೆಣಸಾಟ

ಅಬುಧಾಬಿ: ಕೊರೊನಾ ಆತಂಕ, ಅಡೆತಡೆಗಳ ನಡುವೆಯೇ ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ಉಣಬಡಿಸಲು ಇಂಡಿಯನ್ ಪ್ರೀಮಿಯರ್‌ ಲೀಗ್‌ ಟಿ20 (ಐಪಿಎಲ್ ) ಕ್ರಿಕೆಟ್ ಟೂರ್ನಿ ಇಂದಿನಿಂದ ಶುರುವಾಗಲಿದೆ. ಅಬುಧಾಬಿಯ ಅಲ್‌ ಝಯೀದ್ ಕ್ರೀಡಾಂಗಣದಲ್ಲಿ ನಡೆಯುವ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಇದರೊಂದಿಗೆ 53 ದಿನಗಳ ಐಪಿಎಲ್‌ ಕ್ರಿಕೆಟ್ ಜಾತ್ರೆಗೆ ಚಾಲನೆ ದೊರೆಯಲಿದೆ. ಪ್ರೇಕ್ಷಕರಿಲ್ಲದ ಜಾತ್ರೆ: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ ಪಂದ್ಯಗಳಿಗೆ ಜನರನ್ನು ನಿರ್ಬಂಧಿಸಲಾಗಿದ್ದು, […]

ನಾಳೆ ಐಪಿಎಲ್ ವೇಳಾಪಟ್ಟಿ ಬಿಡುಗಡೆ

ನವದೆಹಲಿ: ಸೆಪ್ಟೆಂಬರ್‌ 19ರಿಂದ ಯುನೈಟೆಡ್ ಅರಬ್‌ ಎಮಿರೇಟ್ಸ್‌ನಲ್ಲಿ ಆರಂಭವಾಗಲಿರುವ ಐಪಿಎಲ್‌ ಟೂರ್ನಿಯ ವೇಳಾಪಟ್ಟಿಯನ್ನು ನಾಳೆ (ಭಾನುವಾರ) ಬಿಡುಗಡೆ ಮಾಡಲಾಗುವುದು ಎಂದು ಐಪಿಎಲ್ ಆಡಳಿತ ಸಮಿತಿ ಮುಖ್ಯಸ್ಥ ಬ್ರಿಜೇಶ್ ಪಟೇಲ್ ತಿಳಿಸಿದ್ದಾರೆ. ಈ ಬಗ್ಗೆ ವರದಿ ಮಾಡಿರುವ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 53 ದಿನಗಳ ಕಾಲ ನಡೆಯುವ ಐಪಿಎಲ್ ಟೂರ್ನಿಯು ಸೆ. 19 ಆರಂಭಗೊಂಡು ನವೆಂಬರ್ 10ಕ್ಕೆ ಮುಕ್ತಾಯವಾಗಲಿದೆ.

ಸಿಎಸ್‌ಕೆಗೆ ಬಿಗ್ ಶಾಕ್: ಐಪಿಎಲ್‌ನಿಂದ ಹೊರನಡೆದ ಮತ್ತೊಬ್ಬ ಸ್ಟಾರ್ ಆಟಗಾರ

ಚೆನ್ನೈ: ಚೆನ್ನೈ ಸೂಪರ್‌ ಕಿಂಗ್ಸ್ ತಂಡಕ್ಕೆ ಮತ್ತೊಂದು ಆಘಾತ ಉಂಟಾಗಿದೆ. ಪ್ರಮುಖ ಸ್ಪಿನ್ನರ್ ಹರಭಜನ್ ಸಿಂಗ್ ವೈಯಕ್ತಿಕ ಕಾರಣ ಮುಂದಿಟ್ಟು ಈ ಬಾರಿಯ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಸ್ಪೋರ್ಟ್‌ ಸ್ಟಾರ್ ವರದಿ ಮಾಡಿದೆ. ಐಪಿಎಲ್‌ ನಿಯಮಗಳ ಪ್ರಕಾರ, ಕೊರೊನಾದ ಈ ಸಂದರ್ಭದಲ್ಲಿ ಯಾವುದೇ ಆಟಗಾರ ಪಂದ್ಯದಲ್ಲಿ ಭಾಗವಹಿಸುವುದಿಲ್ಲ ಎಂದು ಒಮ್ಮೆ ಅಧಿಕಾರಿಗಳಿಗೆ ತಿಳಿಸಿದರೆ ಮತ್ತೆ ಅವರಿಗೆ ಪಾಲ್ಗೊಳ್ಳಲು ಅವಕಾಶವಿಲ್ಲ. ಈಗಾಗಲೇ ತಂಡದ ಪ್ರಮುಖ ಆಟಗಾರರಾದ ದೀಪಕ್ ಚಾಹರ್ ಮತ್ತು ರುತುರಾಜ್ ಗಾಯಕ್‌ವಾಡ್ ಕೊರೊನಾ […]

ಉಸೇನ್ ಬೋಲ್ಟ್ ಸಾಧನೆ ಮುರಿದ ಕಂಬಳ ಓಟಗಾರ ಮಿಜಾರು ಶ್ರೀನಿವಾಸ್ ಗೌಡರಿಗೆ ತರಬೇತಿ :ಕ್ರೀಡಾ ಸಚಿವರ ಟ್ವೀಟ್ ಗೆ ಕರಾವಳಿಗರು ಹರ್ಷ

ಮಂಗಳೂರು:  ಇತ್ತೀಚೆಗೆ ಕಂಬಳದಲ್ಲಿ ವಿಶ್ವದ ಶ್ರೇಷ್ಠ ಆಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದು ಸುದ್ದಿಯಾದ ಕಂಬಳ ಓಟಗಾರರಾದ ಮಿಜಾರು ಶ್ರೀನಿವಾಸ್ ಗೌಡರಿಗೆ ರಾಷ್ಟ್ರೀಯ ಮಟ್ಟದ ತರಬೇತುದಾರರಿ೦ದ ಕೋಚಿ೦ಗ್ ನೀಡುವ ಬಗ್ಗೆ ಕೇಂದ್ರ ಕ್ರೀಡಾ ಸಚಿವ ಕಿರಣ್‌‌ ರಿಜಿಜು ಭರವಸೆ ನೀಡಿರುವುದು ಈಗ ಹೊಸ ಸುದ್ದಿಗಾಗಿ ಕರಾವಳಿಯ ಕಂಬಳ ಪ್ರಿಯರಲ್ಲಿ ಸಂತಸ ಮೂಡಿದೆ. ಟ್ವೀಟರ್ ನಲ್ಲಿ  ಶ್ರೀನಿವಾಸ ಗೌಡರ ಸಾಧನೆಯನ್ನು ಕೊಂಡಾದಿದ ಆನಂದ್ ಮಹೀಂದ್ರ ಅವರು “ಗೌಡರು ಅಸಾಮಾನ್ಯವಾಗಿ ಓಡಿದ್ದಾರೆ. ಈ ವ್ಯಕ್ತಿಯ ಮೈಕಟ್ಟನ್ನು ಗಮನಿಸಿದರೆ ಈ ವ್ಯಕ್ತಿ […]