ವಿಶ್ವಕಪ್ ನಿಂದ ಶಿಖರ್ ಧವನ್ ಔಟ್..! ಬೆರಳಿನ‌ ಗಾಯದ ಸಮಸ್ಯೆ ಹಿನ್ನೆಲೆ

ನವದೆಹಲಿ: ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ತೋರುತ್ತಿರುವ ಸಮಯದಲ್ಲೇ ತಂಡಕ್ಕೆ ದೊಡ್ಡ ಆಘಾತ ಎದುರಾಗಿದ್ದು, ಆರಂಭಿಕ ಆಟಗಾರ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಕಳೆದ ಆಸ್ಟ್ರೇಲಿಯಾ ವಿರುದ್ದದ ಪಂದ್ಯದ ವೇಳೆ ಎಡಗೈ ಹೆಬ್ಬರಳಿಗೆ ಗಾಯವಾಗಿತ್ತು. ಹೀಗಾಗಿ ವೈದ್ಯಾಧಿಕಾರಿಗಳು ಪರೀಕ್ಷೆ ನಡೆಸಿದ್ದು, ಇನ್ನು ಮೂರು ವಾರಗಳ ಕಾಲ ವಿಶ್ರಾಂತಿ ಮಾಡುವಂತೆ ಸೂಚಿಸಿದ್ದಾರೆ. ಬೆರಳಿಗೆ ಆಗಿರುವ ಗಾಯದ ಪ್ರಮಾಣವನ್ನು ಪತ್ತೆ ಹಚ್ಚಲು ಸ್ಕಾನಿಂಗ್ ಮಾಡಲಾಗಿದ್ದು, ಅನಂತರ ವರದಿ ಪರಿಶೀಲಿಸಿದ ವೈದ್ಯರು, ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಆಸ್ಟ್ರೇಲಿಯಾ […]

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ 

ಮುಂಬೈ: ಹಲವು ವರ್ಷಗಳ ಕಾಲ ಟೀಂ ಇಂಡಿಯಾದಲ್ಲಿ ಆಡಿದ, ಟಿ-20 ಕ್ರಿಕೆಟ್‍ನಲ್ಲಿ 6 ಸಿಕ್ಸರ್ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದ ಎಡಗೈ ಸ್ಫೋಟಕ ಆಟಗಾರ 37ರ ಹರೆಯದ ಯುವರಾಜ್ ಸಿಂಗ್ ಎಲ್ಲ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. ಯುವರಾಜ್ ಸೋಮವಾರ ಮುಂಬಯಿ ನ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ನಿವೃತ್ತಿ ನಿರ್ಧಾರ ಪ್ರಕಟಿಸಿದರು.   2011ರ ವಿಶ್ವಕಪ್ ಸರಣಿ ಶ್ರೇಷ್ಠ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದ ಯುವರಾಜ್ ಸದ್ಯ ವಿಶ್ವಕಪ್ ನಡೆಯುತ್ತಿರುವ ಸಂದರ್ಭ ದಲ್ಲೇ ನಿವೃತ್ತಿ ಘೋಷಿಸಿದ್ದಾರೆ. 2019 ರ ಐಸಿಸಿ […]

ಕ್ರಿಕೆಟ್ ತವರಿನಲ್ಲಿ‌ ನಾಳೆಯಿಂದ 12ನೇ ವಿಶ್ವಕಪ್ ಟೂರ್ನಿ ಮೇ.30: ಇಂಗ್ಲೆಂಡ್-ದ.ಆಫ್ರಿಕಾ ಮೊದಲ ಪಂದ್ಯ

ಸ್ಪೋಟ್ಸ್ ಬೀಟ್: ಇಂಗ್ಲೆಂಡ್ ಆತಿಥ್ಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರಿಕೆಟ್​ ಸಂಸ್ಥೆ (ಐಸಿಸಿ)ಯ 2019ರ 12ನೇ ಆವೃತ್ತಿಯ ಏಕದಿನ ವಿಶ್ವಕಪ್ ಟೂರ್ನಿ ಮೇ. 30ರಿಂದ ಅದ್ದೂರಿಯಾಗಿ ಪ್ರಾರಂಭಗೊಳ್ಳಲಿದೆ. ಈ ಭಾರೀ ಇಂಗ್ಲೆಂಡ್ ನ ಆತಿಥ್ಯ ದಲ್ಲಿ‌ ವಿಶ್ವಕಪ್ ನಡಯಲಿದ್ದು, ಮೊದಲ ಪಂದ್ಯದಲ್ಲಿ ಬಲಿಷ್ಟ ತಂಡಗಳಾದ ಅತಿಥೇಯ ಇಂಗ್ಲೆಂಡ್ ಹಾಗೂ‌ ದ.ಆಫ್ರಿಕಾ ತಂಡಗಳು ಮುಖಾಮುಖಿ ಯಾಗಲಿವೆ. 2019ರ ವಿಶ್ವಕಪ್‌ ಕ್ರಿಕೆಟ್ ನಲ್ಲಿ ಭಾಗವಹಿಸುವ 10 ತಂಡಗಳು ಇಂಗ್ಲೆಂಡ್ ನಲ್ಲಿ‌ಬೀಡು ಬಿಟ್ಟಿವೆ. ಅಭ್ಯಾಸ ಪಂದ್ಯಗಳು ಈಗಾಗಲೇ ನಡೆದಿವೆ. ಗುರುವಾರದಿಂದ ಲೀಗ್ ಹಂತದ […]

ಕೋಸ್ಟಲ್ ವುಡ್ ಪ್ರಿಮಿಯರ್ ಲೀಗ್-2019

C.A.T.C.A ಕೋಸ್ಟಲ್ ವುಡ್ ಕಲಾವಿದರ ಹಾಗೂ ತಂತ್ರಜ್ಞರ ಒಕ್ಕೂಟ ಏರ್ಪಡಿಸಿರುವ ಮೂರು ದಿನಗಳ ಕಾಲ 10,11ಹಾಗೂ 12 ರಂದು ಹಗಲಿನ ಕ್ರಿಕೆಟ್ ಪಂದ್ಯಾಕೂಟ C.P.L -2019 ಕ್ಕೆ ಮಂಗಳೂರಿನ ಹುಲ್ಲುಹಾಸಿನ ಸಹ್ಯಾದ್ರಿ ಕ್ರೀಡಾಂಗಣ ಸಜ್ಜಾಗಿ ನಿಂತಿದೆ‌. ಇಂದಿನಿಂದ ಪಂದ್ಯಾಕೂಟಗಳಿಗೆ ತುಳು ಚಿತ್ರ ತಾರೆಯರ ಸಮ್ಮುಖದಲ್ಲಿ ಅದ್ಧೂರಿಯ ಚಾಲನೆ ದೊರಕಲಿದೆ. ಇಂದಿನಿಂದ ಪಂದ್ಯಾಕೂಟಗಳಿಗೆ ತುಳು ಚಿತ್ರ ತಾರೆಯರ ಸಮ್ಮುಖದಲ್ಲಿ ಅದ್ಧೂರಿಯ ಚಾಲನೆ ದೊರಕಲಿದೆ. ಈ ಪಂದ್ಯಾಕೂಟದಲ್ಲಿ 8 ಫ್ರಾಂಚೈಸಿಗಳು ಕೌತುಕದ ಕದನಕ್ಕಿಳಿಯಲಿದ್ದು ಭಾಗವಹಿಸುವ ಫ್ರಾಂಚೈಸಿಗಳ ವಿವರ ಈ ಕೆಳಗಿನಂತಿದೆ. ಬಿರುವೆರ್ […]

ರೋಚಕ‌ ಘಟ್ಟದಲ್ಲಿ ಅಣುಕು ಸಾಮಾನ್ಯ: ಅಶ್ವಿನ್

ಬೆಂಗಳೂರು: ಬುಧವಾರ ನಡೆದ‌ ನನ್ನ ಮತ್ತು ವಿರಾಟ್ ಕೊಹ್ಲಿ ಆವರ ನಡವಳಿಕೆಯು ಆ ಸಂದರ್ಭದ ಒತ್ತಡದಲ್ಲಿ ನಡೆದಿದೆಯಷ್ಟೇ ಎಂದು ಕಿಂಗ್ಸ್‌ ಇಲೆವನ್ ಪಂಜಾಬ್ ತಂಡದ ನಾಯಕ ಆರ್. ಅಶ್ವಿನ್ ಹೇಳಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ 202 ರನ್‌ಗಳ ಗುರಿ ನೀಡಿತ್ತು. ಬೆನ್ನಟ್ಟಿದ ಪಂಜಾಬ್ ಗೆ ಕೊನೆಯ ಓವರ್‌ನಲ್ಲಿ 27 ರನ್‌ಗಳ ಅಗತ್ಯವಿತ್ತು. ಆ ಓವರ್ ಬೌಲಿಂಗ್ ಮಾಡಿದ  ಉಮೇಶ್ ಯಾದವ್ ಎಸೆತವನ್ನು ಅಶ್ವಿನ್ ಲಾಂಗ್‌ ಆನ್‌ ಬೌಂಡರಿ ಗೆರೆ ದಾಟಿಸುವ ಪ್ರಯತ್ನ ಮಾಡಿದರು. ಆದರೆ […]