ವಿಶ್ವಕಪ್ ಕ್ರಿಕೆಟ್ ೨೦೨೩ : ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ೨೪೩ ರನ್ ಗಳ ಅಂತರದಿಂದ ಭರ್ಜರಿ ಗೆಲುವು

ಕೋಲ್ಕತ್ತಾ : ಕೋಲ್ಕತ್ತಾ ದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಕಪ್ ೨೦೨೩ ರ್ ೩೭ ಪಂದ್ಯದಲ್ಲಿ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ಹಣಾಹಣಿಯಲ್ಲಿದ್ದವು. ಭಾರತ ಟಾಸ್ ಗೆಲ್ಲುವುದರ ಮೂಲಕ ಬ್ಯಾಟಿಂಗ್ ಅನ್ನು ಆಯ್ಕೆ ಮಾಡಿ ೩೨೬ ರನ್ಗಳ ಗಳಿಸುವ ಮೂಲಕ ದಕ್ಷಿಣ ಆಫ್ರಿಕಾಗೆ ೩೨೭ ರನ್ ಗಳ ಗೆಲುವಿನ ಗುರಿಯನ್ನು ನೀಡಿತು. ಬ್ಯಾಟಿಂಗ್ ಆಯ್ದ ಭಾರತ ಮೊದಲಿಗೆ ಶುಭಮನ್ ಗಿಲ್ ಹಾಗೂ ರೋಹಿತ್ ಶರ್ಮ ಕ್ರಮವಾಗಿ ೨೩(೨೪), ೪೦(೨೪) ರನ್ ಗಳನ್ನು ಮಾಡಿ ನಂತರ […]
ಏಕದಿನ ವಿಶ್ವಕಪ್ 2023 : ಸಚಿನ್ ತೆಂಡೂಲ್ಕರ್ ದಾಖಲೆ ಮುರಿದು 49ನೇ ಶತಕ ಬಾರಿಸಿದ ಕಿಂಗ್ ಕೊಹ್ಲಿ , ದ.ಆ ಗೆ 327 ರನ್ ಗಳ ಟಾರ್ಗೆಟ್

2023ರ ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ ತಮ್ಮ ಏಕದಿನ ಮಾದರಿಯಲ್ಲಿ 49ನೇ ಶತಕ ಸಿಡಿಸುವ ಮೂಲಕ ಸಚಿನ್ ದಾಖಲೆ ಸರಿಗಟ್ಟುವುದಲ್ಲದೇ ತಂಡದ ಮೊತ್ತವನ್ನು ಹೆಚ್ಚಿಸುವಲ್ಲಿಯೂ ಸಹಾಯಕರಾದರು. ಅಂತಿಮವಾಗಿ ಭಾರತ ತಂಡ 50 ಓವರ್ಗೆ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸುವ ಮೂಲಕ ಸೌತ್ ಆಫ್ರಿಕಾಗೆ 327 ರನ್ಗಳ ಬಿಗ್ ಟಾರ್ಗೆಟ್ ನೀಡಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ಪಂದ್ಯ ನಡೆಯುತ್ತಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು […]
ಇಂದು ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ಸೆಣಸಾಟ

ವಿಶ್ವಕಪ್ ಇತಿಹಾಸದಲ್ಲಿ ಭಾರತದ ವಿರುದ್ಧ ಮೇಲುಗೈ ಸಾಧಿಸಿರುವ ಅಪರೂಪದ ತಂಡಗಳಲ್ಲಿ ದಕ್ಷಿಣ ಆಫ್ರಿಕಾ ಕೂಡ ಒಂದು. ಈವರೆಗಿನ 5 ಪಂದ್ಯಗಳಲ್ಲಿ ಅದು ಮೂರನ್ನು ಗೆದ್ದಿದೆ. ಭಾರತಕ್ಕೆ ಒಲಿದದ್ದು 2 ಗೆಲುವು ಮಾತ್ರ. ರವಿವಾರದ ಮುಖಾಮುಖಿಯ ಹಿನ್ನೆಲೆಯಲ್ಲಿ ಈ ಫಲಿತಾಂಶಗಳತ್ತ ಒಂದು ಇಣುಕುನೋಟ ಹಾಯಿಸಲಾಗಿದೆ.ಆದರೆ ಗೆದ್ದು ಗೆದ್ದು ಕೊನೆಯಲ್ಲಿ ವಿಚಿತ್ರ ರೀತಿಯಲ್ಲಿ ಬಿದ್ದು ಕೂಟದಿಂದ ನಿರ್ಗಮಿಸುವುದು ಹರಿಣಗಳ ಪಡೆಯ ಹಣೆಬರಹವೇ ಆಗಿರುವುದನ್ನು ಮರೆಯುವಂತಿಲ್ಲ. ಹೀಗಾಗಿ ಅದಕ್ಕೆ ಸೆಮಿಫೈನಲ್ ಹಂತವೇ ಅಂತಿಮ ಮೆಟ್ಟಿಲಾಗುತ್ತ ಬಂದಿರುವುದು ವಿಪರ್ಯಾಸ.“ಚೋಕರ್’ ಹಣೆಪಟ್ಟಿಯನ್ನು ಕಿತ್ತೆಸೆಯಲು ದಕ್ಷಿಣ […]
ಉಚಿತ ಟಿಕೆಟ್ ಹಿಂದಿರುಗಿಸಿದ ಗವರ್ನರ್ : ಭಾರತ- ದ. ಆಫ್ರಿಕಾ ಕ್ರಿಕೆಟ್

ಕೋಲ್ಕತ್ತ,: ಪಶ್ಚಿಮ ಬಂಗಾಳ ಕ್ರಿಕೆಟ್ ಮಂಡಳಿಯು ಗವರ್ನರ್ ಅವರಿಗೆ ಟಿಕೆಟ್ಗಳನ್ನು ಒದಗಿಸಿತ್ತು.ಕಾಳಸಂತೆಯಲ್ಲಿ ಟಿಕೆಟ್ ಮಾರಾವಾಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಗವರ್ನರ್ ಈ ನಿರ್ಧಾರ ಕೈಗೊಂಡಿದ್ದಾರೆ.ಪಶ್ಚಿಮ ಬಂಗಾಳದ ಗವರ್ನರ್ ಸಿ. ವಿ. ಆನಂದ ಬೋಸ್ ಅವರು, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಕ್ರಿಕೆಟ್ ವಿಶ್ವಕಪ್ ಪಂದ್ಯದ ನಾಲ್ಕು ಉಚಿತ ಟಿಕೆಟ್ಗಳನ್ನು ಶನಿವಾರ ಹಿಂದಿರುಗಿಸಿದ್ದಾರೆ ಎಂದು ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ರಾಜ್ಯಪಾಲರು ಕಾಂಪ್ಲಿಮೆಂಟರಿ ಟಿಕೆಟ್ಗಳನ್ನು ಸಿಎಬಿಗೆ ಹಿಂದಿರುಗಿಸಿದ್ದಾರೆ. ಅವರು ರಾಜಭವನದಲ್ಲಿ ಜನತಾ ಕ್ರೀಡಾಂಗಣವನ್ನು ತೆರೆಯಲು ನಿರ್ಧರಿಸಿದ್ದಾರೆ, ಅಲ್ಲಿ ಜನರು ದೊಡ್ಡ […]
ನಾಳೆ ಅನಾವರಣ , ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸಿಕ್ಸರ್ ಬಾರಿಸುತ್ತಿರುವ 22 ಅಡಿ ಉದ್ದದ ಸಚಿನ್ ಪ್ರತಿಮೆ ನಿರ್ಮಾಣ.

ಮುಂಬೈ (ಮಹಾರಾಷ್ಟ್ರ): ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಮುನ್ನಾದಿನದಂದು ಅನಾವರಣ ಮಾಡಲಾಗುತ್ತಿದೆ. ‘ಭಾರತ ರತ್ನ’ ಸಚಿನ್ ತೆಂಡೂಲ್ಕರ್ ಅವರು ಅನಾವರಣ ಕಾರ್ಯಕ್ರಮಕ್ಕೆ ಸ್ವತಃ ಹಾಜರಿರಲಿದ್ದಾರೆ. ಸಚಿನ್ ಇಷ್ಟಪಡುವ ಮತ್ತು ತವರು ಮೈದಾನವಾದ ಮುಂಬೈನಲ್ಲಿರುವ ವಾಂಖೆಡೆ ಸ್ಟೇಡಿಯಂನಲ್ಲಿ ‘ತದ್ರೂಪಿ ಲಿಟಲ್ ಮಾಸ್ಟರ್’ ಮೈದಾಳಿದ್ದು, ಬುಧವಾರ (ನವೆಂಬರ್ 1) ಅದು ಅನಾವರಣಗೊಳ್ಳಲಿದೆ.ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹೆಸರಿಗೆ ಅದೆಷ್ಟೋ ದಾಖಲೆಗಳಿವೆ. ಅವರಾಡಿದ […]