ಕಿವೀಸ್​ಗೆ ಬೃಹತ್​ ಟಾರ್ಗೆಟ್​ ನೀಡಿದ ಆಸೀಸ್​ : ಹಿಮದ ನಾಡಲ್ಲಿ ರನ್ ಗಳ ಸುರಿಮಳೆ

ಧರ್ಮಶಾಲಾ, ಹಿಮಾಚಲ ಪ್ರದೇಶ: ಏಕದಿನ ವಿಶ್ವಕಪ್‌ನಲ್ಲಿ (Cricket World Cup) ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ರನ್​ಗಳ ಮಳೆಯೇ ಸುರಿದಿದೆ. ಕಿವೀಸ್​ ಬೌಲರ್​ಗಳ ಬೆವರಿಳಿಸಿದ ಆಸೀಸ್​ ತಂಡ ನಿಗದಿತ 50 ಓವರ್​ಗಳಿಗೆ ತನ್ನೆಲ್ಲ ವಿಕೆಟ್​ಗಳನ್ನು ಕಳೆದುಕೊಂಡು 388 ರನ್​ಗಳನ್ನು ಕಲೆ ಹಾಕುವ ಮೂಲಕ ಎದುರಾಳಿಗೆ ಬೃಹತ್ ಟಾರ್ಗೆಟ್​ ನೀಡಿದೆ. ಕಿವೀಸ್​ ಬೌಲರ್​ಗಳ ಬೇವರಿಳಿಸಿದ ಆರಂಭಿಕರು: ಟಾಸ್​ ಗೆದ್ದು ನ್ಯೂಜಿಲೆಂಡ್​ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿತು. ಆದ್ರೆ ಆರಂಭಿಕರಾದ […]

ಬಾಬರ್, ಶಕೀಲ್​ ಅರ್ಧಶತಕ; ಹರಿಣಗಳಿಗೆ 271 ರನ್​ಗಳ ಸ್ಪರ್ಧಾತ್ಮಕ ಗುರಿ ನೀಡಿದ ಪಾಕಿಸ್ತಾನ : ವಿಶ್ವಕಪ್​ ಕ್ರಿಕೆಟ್​​

ಚೆನ್ನೈ (ತಮಿಳುನಾಡು): ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನ ತಂಡವು ಬಾಬರ್ ಆಜಂ ಮತ್ತು ಸೌದ್​​ ಶಕೀಲ್​ ಅವರ ಅರ್ಧಶತಕದ ನೆರವಿನಿಂದ 46.3 ಓವರ್​ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 270 ರನ್​ ಗಳಿಸಿತು.ಚೆನ್ನೈನ ಚೆಪಾಕ್​ ಪಿಚ್​​ನಲ್ಲಿ ಇಂದು ತಬ್ರೈಜ್ ಶಮ್ಸಿ ಅವರ ಸ್ಪಿನ್​ ದಾಳಿಯ ನಡುವೆಯೂ ಪಾಕಿಸ್ತಾನ ಹರಿಣಗಳಿಗೆ 271 ರನ್​ ಗುರಿ ನೀಡಿತು. ಮೈದಾನಕ್ಕಿಳಿದ ಪಾಕ್​ ಆರಂಭಿಕರಿಗೆ ಮಾರ್ಕೊ ಜಾನ್ಸೆನ್ ಕಾಡಿದರು. ಕಳೆದೆರಡು ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್​ ಆಡಿದ್ದ ಅಬ್ದುಲ್ಲಾ ಶಫೀಕ್ ಕೇವಲ 9 ರನ್​ಗೆ […]

ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಆಂಗ್ಲರ ಪಡೆ : ಇದು ವಿಶ್ವಕಪ್‌ ಟೂರ್ನಿಯ ಅತ್ಯಂತ ಮಹತ್ವದ ಪಂದ್ಯ

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್‌ ಭಾಗವಾಗಿ ಇಂದು ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್​ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಶ್​ ಬಟ್ಲರ್​ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಲಂಕಾ ಆಟಗಾರರಿಗೆ ಬೌಲಿಂಗ್​ ಮಾಡುವಂತೆ ಆಹ್ವಾನ ನೀಡಿದ್ದಾರೆ. ಉಭಯ ತಂಡಗಳು ತಲಾ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿರುವುದರಿಂದ ಇಂದಿನ ಕಾದಾಟ ಉಭಯ ತಂಡಗಳಿಗೂ ಬಹಳ ಮಹತ್ವದ್ದಾಗಿದೆ. ಎರಡೂ ತಂಡಗಳು ಗೆಲುವಿನ ನಿರೀಕ್ಷೆಯಲ್ಲಿವೆ.ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದು ಟಾಸ್​ ಗೆದ್ದ ಆಂಗ್ಲರು […]

ಮಥೀಷ ಪತಿರಾಣ ಸ್ಥಾನಕ್ಕೆ ಅನುಭವಿ ಆಲ್​ರೌಂಡರ್ ಏಂಜಿಲೊ ಮ್ಯಾಥ್ಯೂಸ್ : ವಿಶ್ವಕಪ್ 2023​

ಹೈದರಾಬಾದ್​: ಭುಜದ ಗಾಯಕ್ಕೆ ತುತ್ತಾಗಿರುವ ಶ್ರೀಲಂಕಾದ ವೇಗಿ ಮಥೀಷ ಪಥಿರಾಣ ಪಂದ್ಯಗಳಿಂದ ಹೊರಗುಳಿದಿದ್ದು, ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಅನುಭವಿ ಆಲ್​ರೌಂಡರ್​ ಏಂಜೆಲೊ ಮ್ಯಾಥ್ಯೂಸ್​ ತಂಡ ಸೇರಿಕೊಂಡಿದ್ದಾರೆ.ವಿಶ್ವಕಪ್​ ಟೂರ್ನಿಯಲ್ಲಿ ಕಳಪೆ ಫಾರ್ಮ್​ನಿಂದ ಕಂಗೆಟ್ಟಿರುವ ಶ್ರೀಲಂಕಾಗೆ ಆಟಗಾರರ ಗಾಯದ ಸಮಸ್ಸೆ ಕೂಡ ಜೋರಾಗಿ ಕಾಡುತ್ತಿದೆ.ಭುಜದಗಾಯಕ್ಕೆ ತುತ್ತಾಗಿರುವ ಶ್ರೀಲಂಕಾದ ವೇಗಿ ಮಥೀಷ ಪತಿರಾಣ ಸ್ಥಾನಕ್ಕೆ ಬದಲಿ ಆಟಗಾರನಾಗಿ ಅನುಭವಿ ಆಲ್​ರೌಂಡರ್​ ಆಯ್ಕೆಯಾಗಿದ್ದಾರೆ. 36 ವರ್ಷದ ಮ್ಯಾಥ್ಯೂಸ್​ಗೆ ಇದು ನಾಲ್ಕನೇ ವಿಶ್ವಕಪ್​ ಆಗಿದೆ. ಶ್ರೀಲಂಕಾ ಪರ 221 ಪಂದ್ಯಗಳನ್ನು ಆಡಿರುವ ಅವರು […]

ಸೆಮಿ-ಫೈನಲ್​​​ಗೆ ತಂಡಕ್ಕೆ ಸೇರಿಸಿಕೊಳ್ಳುವ ಚಿಂತನೆ : ಮುಂದಿನ ಎರಡು ಪಂದ್ಯಗಳಿಗೆ ಹಾರ್ದಿಕ್​ ಪಾಂಡ್ಯ ಅಲಭ್ಯ

ಹೈದರಾಬಾದ್​ : ಆಲ್‌ರೌಂಡರ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ಅವರು ಮುಂದಿನ ಎರಡು ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ.ಪುಣೆಯಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದ ವೇಳೆ ಪಾದದ ಗಾಯಕ್ಕೆ ತುತ್ತಾದ ಹಾರ್ದಿಕ್​ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ (ಎನ್​ಸಿಎ) ಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್​ ಮಾಡುವ ವೇಳೆ ಪಾದದ ಗಾಯಕ್ಕೆ ತುತ್ತಾದ ಹಾರ್ದಿಕ್​ ಪಾಂಡ್ಯ ಚೇತರಿಸಿಕೊಳ್ಳಲು ಇನ್ನಷ್ಟೂ ದಿನಗಳು ಬೇಕಾಗಬಹುದು ಎಂಬ ಮಾಹಿತಿಯನ್ನು ಮೂಲಗಳು ನೀಡಿವೆ. ಪುಣೆಯ ಎಮ್​ಸಿಎ ಸ್ಟೇಡಿಯಂನಲ್ಲಿ ಬಾಂಗ್ಲಾದೇಶದ […]