ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಆಂಗ್ಲರ ಪಡೆ : ಇದು ವಿಶ್ವಕಪ್‌ ಟೂರ್ನಿಯ ಅತ್ಯಂತ ಮಹತ್ವದ ಪಂದ್ಯ

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್‌ ಭಾಗವಾಗಿ ಇಂದು ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್​ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಶ್​ ಬಟ್ಲರ್​ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಲಂಕಾ ಆಟಗಾರರಿಗೆ ಬೌಲಿಂಗ್​ ಮಾಡುವಂತೆ ಆಹ್ವಾನ ನೀಡಿದ್ದಾರೆ. ಉಭಯ ತಂಡಗಳು ತಲಾ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿರುವುದರಿಂದ ಇಂದಿನ ಕಾದಾಟ ಉಭಯ ತಂಡಗಳಿಗೂ ಬಹಳ ಮಹತ್ವದ್ದಾಗಿದೆ. ಎರಡೂ ತಂಡಗಳು ಗೆಲುವಿನ ನಿರೀಕ್ಷೆಯಲ್ಲಿವೆ.ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದು ಟಾಸ್​ ಗೆದ್ದ ಆಂಗ್ಲರು […]

ಮಥೀಷ ಪತಿರಾಣ ಸ್ಥಾನಕ್ಕೆ ಅನುಭವಿ ಆಲ್​ರೌಂಡರ್ ಏಂಜಿಲೊ ಮ್ಯಾಥ್ಯೂಸ್ : ವಿಶ್ವಕಪ್ 2023​

ಹೈದರಾಬಾದ್​: ಭುಜದ ಗಾಯಕ್ಕೆ ತುತ್ತಾಗಿರುವ ಶ್ರೀಲಂಕಾದ ವೇಗಿ ಮಥೀಷ ಪಥಿರಾಣ ಪಂದ್ಯಗಳಿಂದ ಹೊರಗುಳಿದಿದ್ದು, ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಅನುಭವಿ ಆಲ್​ರೌಂಡರ್​ ಏಂಜೆಲೊ ಮ್ಯಾಥ್ಯೂಸ್​ ತಂಡ ಸೇರಿಕೊಂಡಿದ್ದಾರೆ.ವಿಶ್ವಕಪ್​ ಟೂರ್ನಿಯಲ್ಲಿ ಕಳಪೆ ಫಾರ್ಮ್​ನಿಂದ ಕಂಗೆಟ್ಟಿರುವ ಶ್ರೀಲಂಕಾಗೆ ಆಟಗಾರರ ಗಾಯದ ಸಮಸ್ಸೆ ಕೂಡ ಜೋರಾಗಿ ಕಾಡುತ್ತಿದೆ.ಭುಜದಗಾಯಕ್ಕೆ ತುತ್ತಾಗಿರುವ ಶ್ರೀಲಂಕಾದ ವೇಗಿ ಮಥೀಷ ಪತಿರಾಣ ಸ್ಥಾನಕ್ಕೆ ಬದಲಿ ಆಟಗಾರನಾಗಿ ಅನುಭವಿ ಆಲ್​ರೌಂಡರ್​ ಆಯ್ಕೆಯಾಗಿದ್ದಾರೆ. 36 ವರ್ಷದ ಮ್ಯಾಥ್ಯೂಸ್​ಗೆ ಇದು ನಾಲ್ಕನೇ ವಿಶ್ವಕಪ್​ ಆಗಿದೆ. ಶ್ರೀಲಂಕಾ ಪರ 221 ಪಂದ್ಯಗಳನ್ನು ಆಡಿರುವ ಅವರು […]

ಸೆಮಿ-ಫೈನಲ್​​​ಗೆ ತಂಡಕ್ಕೆ ಸೇರಿಸಿಕೊಳ್ಳುವ ಚಿಂತನೆ : ಮುಂದಿನ ಎರಡು ಪಂದ್ಯಗಳಿಗೆ ಹಾರ್ದಿಕ್​ ಪಾಂಡ್ಯ ಅಲಭ್ಯ

ಹೈದರಾಬಾದ್​ : ಆಲ್‌ರೌಂಡರ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ಅವರು ಮುಂದಿನ ಎರಡು ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ.ಪುಣೆಯಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದ ವೇಳೆ ಪಾದದ ಗಾಯಕ್ಕೆ ತುತ್ತಾದ ಹಾರ್ದಿಕ್​ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ (ಎನ್​ಸಿಎ) ಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್​ ಮಾಡುವ ವೇಳೆ ಪಾದದ ಗಾಯಕ್ಕೆ ತುತ್ತಾದ ಹಾರ್ದಿಕ್​ ಪಾಂಡ್ಯ ಚೇತರಿಸಿಕೊಳ್ಳಲು ಇನ್ನಷ್ಟೂ ದಿನಗಳು ಬೇಕಾಗಬಹುದು ಎಂಬ ಮಾಹಿತಿಯನ್ನು ಮೂಲಗಳು ನೀಡಿವೆ. ಪುಣೆಯ ಎಮ್​ಸಿಎ ಸ್ಟೇಡಿಯಂನಲ್ಲಿ ಬಾಂಗ್ಲಾದೇಶದ […]

ಪಾಕಿಸ್ತಾನಕ್ಕೆ 368 ರನ್‌ಗಳ ಬೃಹತ್​ ಗುರಿ : ಆಸ್ಟ್ರೇಲಿಯಾ ಆರಂಭಿಕರ ಸಿಡಿಲಬ್ಬರದ ಬ್ಯಾಟಿಂಗ್

ಬೆಂಗಳೂರು: 5 ಬಾರಿ ವಿಶ್ವಕಪ್​ ಗೆದ್ದ ಆಸ್ಟ್ರೇಲಿಯಾ ತಂಡ ಈ ವರ್ಷ ಮೊದಲೆರಡು ಪಂದ್ಯಗಳನ್ನು ಬ್ಯಾಟಿಂಗ್​ ವೈಫಲ್ಯದಿಂದ ಸೋತರೆ, ಮೂರನೇ ಪಂದ್ಯದಲ್ಲಿ ಸಾಧಾರಣ ಪ್ರದರ್ಶನದಿಂದ ಗೆಲುವು ದಾಖಲಿಸಿತ್ತು.ಆದರೆ ಇಂದಿನ ನಾಲ್ಕನೇ ಪಂದ್ಯದಲ್ಲಿ ಭರ್ಜರಿ ಕಮ್​ಬ್ಯಾಕ್​ ಮಾಡಿದ್ದು, ಪಾಕಿಸ್ತಾನದ ವಿರುದ್ಧ ದೊಡ್ಡ ಇನ್ನಿಂಗ್ಸ್​ ಕಟ್ಟಿದೆ. ಆರಂಭಿಕರಾದ ಡೇವಿಡ್​ ವಾರ್ನರ್​ ಮತ್ತು ಮಿಚೆಲ್​ ಮಾರ್ಷ್ ಅವರ ಅಬ್ಬರದ ಶತಕದ ನೆರವಿನಿಂದ ತಂಡವು ನಿಗದಿತ ಓವರ್‌ಗಳ​ ಅಂತ್ಯಕ್ಕೆ 9 ವಿಕೆಟ್​ ನಷ್ಟಕ್ಕೆ 367 ರನ್​ ಗಳಿಸಿತು. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಇಂದು […]

ಆಸ್ಟ್ರೇಲಿಯಾ-ಪಾಕಿಸ್ತಾನ ಹಣಾಹಣಿ: ಮೈದಾನದೊಳಗೆ, ಹೊರಗೆ ಭಾರಿ ಭದ್ರತೆ : ವಿಶ್ವಕಪ್‌ ಕ್ರಿಕೆಟ್

ಬೆಂಗಳೂರು: ಆಸ್ಟ್ರೇಲಿಯಾ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಎರಡು ಅಥವಾ ಮೂರು ಹಂತಗಳಲ್ಲಿ ಕ್ರೀಡಾಂಗಣ ಒಳಗೆ ಮತ್ತು ಹೊರಗೆ ಭದ್ರತೆ ವಹಿಸಲಾಗಿದ್ದು, ತಂಡಗಳಿಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.ಈ ಬಾರಿಯ ವಿಶ್ವಕಪ್‌ನಲ್ಲಿ ತನ್ನ ಮೊದಲ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿರುವ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.ಕ್ರೀಡಾಂಗಣದ ಒಳಗೆ ಹಾಗೂ ಹೊರಗೆ ಮೂರು ಹಂತಗಳಲ್ಲಿ ಭದ್ರತೆ ವಹಿಸಲಾಗಿದೆ ಎಂದು ನಗರ ಪೊಲೀಸ್ […]