ಮಥೀಷ ಪತಿರಾಣ ಸ್ಥಾನಕ್ಕೆ ಅನುಭವಿ ಆಲ್ರೌಂಡರ್ ಏಂಜಿಲೊ ಮ್ಯಾಥ್ಯೂಸ್ : ವಿಶ್ವಕಪ್ 2023

ಹೈದರಾಬಾದ್: ಭುಜದ ಗಾಯಕ್ಕೆ ತುತ್ತಾಗಿರುವ ಶ್ರೀಲಂಕಾದ ವೇಗಿ ಮಥೀಷ ಪಥಿರಾಣ ಪಂದ್ಯಗಳಿಂದ ಹೊರಗುಳಿದಿದ್ದು, ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಅನುಭವಿ ಆಲ್ರೌಂಡರ್ ಏಂಜೆಲೊ ಮ್ಯಾಥ್ಯೂಸ್ ತಂಡ ಸೇರಿಕೊಂಡಿದ್ದಾರೆ.ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಫಾರ್ಮ್ನಿಂದ ಕಂಗೆಟ್ಟಿರುವ ಶ್ರೀಲಂಕಾಗೆ ಆಟಗಾರರ ಗಾಯದ ಸಮಸ್ಸೆ ಕೂಡ ಜೋರಾಗಿ ಕಾಡುತ್ತಿದೆ.ಭುಜದಗಾಯಕ್ಕೆ ತುತ್ತಾಗಿರುವ ಶ್ರೀಲಂಕಾದ ವೇಗಿ ಮಥೀಷ ಪತಿರಾಣ ಸ್ಥಾನಕ್ಕೆ ಬದಲಿ ಆಟಗಾರನಾಗಿ ಅನುಭವಿ ಆಲ್ರೌಂಡರ್ ಆಯ್ಕೆಯಾಗಿದ್ದಾರೆ. 36 ವರ್ಷದ ಮ್ಯಾಥ್ಯೂಸ್ಗೆ ಇದು ನಾಲ್ಕನೇ ವಿಶ್ವಕಪ್ ಆಗಿದೆ. ಶ್ರೀಲಂಕಾ ಪರ 221 ಪಂದ್ಯಗಳನ್ನು ಆಡಿರುವ ಅವರು […]
ಸೆಮಿ-ಫೈನಲ್ಗೆ ತಂಡಕ್ಕೆ ಸೇರಿಸಿಕೊಳ್ಳುವ ಚಿಂತನೆ : ಮುಂದಿನ ಎರಡು ಪಂದ್ಯಗಳಿಗೆ ಹಾರ್ದಿಕ್ ಪಾಂಡ್ಯ ಅಲಭ್ಯ

ಹೈದರಾಬಾದ್ : ಆಲ್ರೌಂಡರ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ಅವರು ಮುಂದಿನ ಎರಡು ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ.ಪುಣೆಯಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದ ವೇಳೆ ಪಾದದ ಗಾಯಕ್ಕೆ ತುತ್ತಾದ ಹಾರ್ದಿಕ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಪಾದದ ಗಾಯಕ್ಕೆ ತುತ್ತಾದ ಹಾರ್ದಿಕ್ ಪಾಂಡ್ಯ ಚೇತರಿಸಿಕೊಳ್ಳಲು ಇನ್ನಷ್ಟೂ ದಿನಗಳು ಬೇಕಾಗಬಹುದು ಎಂಬ ಮಾಹಿತಿಯನ್ನು ಮೂಲಗಳು ನೀಡಿವೆ. ಪುಣೆಯ ಎಮ್ಸಿಎ ಸ್ಟೇಡಿಯಂನಲ್ಲಿ ಬಾಂಗ್ಲಾದೇಶದ […]
ಪಾಕಿಸ್ತಾನಕ್ಕೆ 368 ರನ್ಗಳ ಬೃಹತ್ ಗುರಿ : ಆಸ್ಟ್ರೇಲಿಯಾ ಆರಂಭಿಕರ ಸಿಡಿಲಬ್ಬರದ ಬ್ಯಾಟಿಂಗ್

ಬೆಂಗಳೂರು: 5 ಬಾರಿ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡ ಈ ವರ್ಷ ಮೊದಲೆರಡು ಪಂದ್ಯಗಳನ್ನು ಬ್ಯಾಟಿಂಗ್ ವೈಫಲ್ಯದಿಂದ ಸೋತರೆ, ಮೂರನೇ ಪಂದ್ಯದಲ್ಲಿ ಸಾಧಾರಣ ಪ್ರದರ್ಶನದಿಂದ ಗೆಲುವು ದಾಖಲಿಸಿತ್ತು.ಆದರೆ ಇಂದಿನ ನಾಲ್ಕನೇ ಪಂದ್ಯದಲ್ಲಿ ಭರ್ಜರಿ ಕಮ್ಬ್ಯಾಕ್ ಮಾಡಿದ್ದು, ಪಾಕಿಸ್ತಾನದ ವಿರುದ್ಧ ದೊಡ್ಡ ಇನ್ನಿಂಗ್ಸ್ ಕಟ್ಟಿದೆ. ಆರಂಭಿಕರಾದ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಅವರ ಅಬ್ಬರದ ಶತಕದ ನೆರವಿನಿಂದ ತಂಡವು ನಿಗದಿತ ಓವರ್ಗಳ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 367 ರನ್ ಗಳಿಸಿತು. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಇಂದು […]
ಆಸ್ಟ್ರೇಲಿಯಾ-ಪಾಕಿಸ್ತಾನ ಹಣಾಹಣಿ: ಮೈದಾನದೊಳಗೆ, ಹೊರಗೆ ಭಾರಿ ಭದ್ರತೆ : ವಿಶ್ವಕಪ್ ಕ್ರಿಕೆಟ್

ಬೆಂಗಳೂರು: ಆಸ್ಟ್ರೇಲಿಯಾ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಎರಡು ಅಥವಾ ಮೂರು ಹಂತಗಳಲ್ಲಿ ಕ್ರೀಡಾಂಗಣ ಒಳಗೆ ಮತ್ತು ಹೊರಗೆ ಭದ್ರತೆ ವಹಿಸಲಾಗಿದ್ದು, ತಂಡಗಳಿಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.ಈ ಬಾರಿಯ ವಿಶ್ವಕಪ್ನಲ್ಲಿ ತನ್ನ ಮೊದಲ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿರುವ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.ಕ್ರೀಡಾಂಗಣದ ಒಳಗೆ ಹಾಗೂ ಹೊರಗೆ ಮೂರು ಹಂತಗಳಲ್ಲಿ ಭದ್ರತೆ ವಹಿಸಲಾಗಿದೆ ಎಂದು ನಗರ ಪೊಲೀಸ್ […]
ಹೃದಯಘಾತದಿಂದ ಸಾವು ಎಂದ ವೈದ್ಯರು : ಓಟದ ಸ್ಪರ್ಧೆಯಲ್ಲಿ ಕುಸಿದಬಿದ್ದ 12 ವರ್ಷದ ಬಾಲಕ

ಜೈಪುರ: ರಾಜಸ್ಥಾನದ ಬಿಕಾನೇರ್ನಲ್ಲಿ ಖಾಸಗಿ ಶಾಲೆಯಲ್ಲಿ ಓಟದ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ 12 ವರ್ಷದ ಯುವಕ ಕುಸಿದುಬಿದ್ದು, ಸಾವನ್ನಪ್ಪಿರುವ ಘಟನೆ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇತ್ತೀಚಿನ ದಿನದಲ್ಲಿ ವಿದ್ಯಾರ್ಥಿಗಳಲ್ಲಿ ವರದಿಯಾಗುತ್ತಿರುವ ಈ ಹೃದಯಾಘಾತ ಪ್ರಕರಣಗಳು ಆತಂಕವನ್ನು ಮೂಡಿಸುತ್ತಿವೆ. ಪ್ರಕರಣ ಕುರಿತು ಮಾತನಾಡಿರುವ ಪೊಲೀಸರು, ಸರ್ದುಲ್ಗಂಜ್ ಪ್ರದೇಶದಲ್ಲಿರುವ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಇಶಾನ್ ಅಧ್ಯಯನ ಮಾಡುತ್ತಿದ್ದ. ಶಾಲೆಯ ಸಮೀಪದಲ್ಲಿ ಹಿರಿಯ ನಾಯಕರಿಗಾಗಿ ವಾಕಿಂಗ್ಗಾಗಿ ದಾರಿ ಮಾಡಲಾಗಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕರು ಸ್ಪರ್ಧೆಯನ್ನು ಏರ್ಪಡಿಸಿದ್ದರು. ಸ್ಪರ್ಧೆಯಲ್ಲಿ ಭಾಗಿಯಾದ ಬಳಿಕ ಇಶಾನ್ […]