ವಾಲಿ ಬಾಲ್ ನಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅತ್ರಾಡಿ ಶಾಲಾ ಹಳೆ ವಿದ್ಯಾರ್ಥಿ ದೀಕ್ಷಿತ್.

ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿಯ ಹಳೆವಿದ್ಯಾರ್ಥಿ ದೀಕ್ಷಿತ್ ನಾಯಕ್ ಉಡುಪಿ ಜಿಲ್ಲೆಯ ವಾಲಿಬಾಲ್ ತಂಡದಲ್ಲಿ ಭಾಗವಹಿಸಿ, ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ. ರಾಜ್ಯಕ್ಕೆ ಆತ್ಯುತ್ತಮ ಆಟಗಾರನೆಂಬ ಹೆಸರು ಪಡೆದ ದೀಕ್ಷಿತ್ ಈಗ ಕರ್ನಾಟಕ ರಾಜ್ಯದ ಪರವಾಗಿ ರಾಷ್ಟೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಅತ್ರಾಡಿ ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಶ್ರೀಮತಿ ಕೀರ್ತಿ ದಿನೇಶ್ ನಾಯಕ್ ಕಬ್ಯಾಡಿ ಇವರ ಪುತ್ರ ನಾಗಿರುವ ದೀಕ್ಷಿತ್ ನಾಯಕ್ ಪ್ರಸ್ತುತ ಹಿರಿಯಡ್ಕ ಕೆಪಿಎಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಅವನ ಮುಂದಿನ ಕ್ರೀಡಾ ಮತ್ತು […]

ಭಾರತ ತಂಡಕ್ಕೆ ಪಾಕ್ ವಿರುದ್ಧ ಆರು ರನ್ ಅಂತರದ ಗೆಲುವು: ಪಂದ್ಯ ಸೋತ ಬಳಿಕ ಅಳುತ್ತಿದ್ದ ಪಾಕ್ ಆಟಗಾರನನ್ನು ಸಂತೈಸಿದ ನಾಯಕ ರೋಹಿತ್ ಶರ್ಮಾ.

ನ್ಯೂಯಾರ್ಕ್: ಐಸಿಸಿ ಟಿ20 ವಿಶ್ವಕಪ್ ನ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ನ್ಯೂಯಾರ್ಕ್ ನ ನಸ್ಸೌ ಸ್ಟೇಡಿಯಂನಲ್ಲಿ ರವಿವಾರ ಮುಖಾಮುಖಿಯಾಗಿ, ಲೋ ಸ್ಕೋರಿಂಗ್ ಪಂದ್ಯದಲ್ಲಿ ರೋಹಿತ್ ಶರ್ಮಾ ಟೀಮ್ ಆರು ರನ್ ಅಂತರದಲ್ಲಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 19 ಓವರ್ ಗಳಲ್ಲಿ 119 ರನ್ ಗೆ ಆಲೌಟಾದರು. ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡವು 113 ರನ್ ಮಾತ್ರ ಗಳಿಸಲು ಶಕ್ತವಾಯಿತು. ಕೊನೆಯ ಓವರ್ ನಲ್ಲಿ ನಸೀಂ ಶಾ ಪ್ರಯತ್ನಪಟ್ಟರಾದರೂ […]

ಉಡುಪಿ‌ ಡಾ.ಜಿ.ಶಂಕರ್ ಸರಕಾರಿ ಕಾಲೇಜಿನಲ್ಲಿ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಟೆನ್ನಿಸ್ ಪಂದ್ಯಾವಳಿ

ಉಡುಪಿ:ಕೇವಲ ಶ್ರೀಮಂತರ ಆಟ ಎಂದೇ ಕರೆಯಲ್ಪಡುವ ಟೆನ್ನಿಸ್ ಇಂದು ಶ್ರೀಸಾಮಾನ್ಯರು ಆಡುವ ಕ್ರೀಡೆಯಾಗಿ ಬದಲಾಗಿದೆ. ಯಾಕೆಂದರೆ, ಸಮಾಜ ಇಂದು ಕ್ರೀಡೆಯನ್ನು ನೋಡುತ್ತಿರುವ ದೃಷ್ಟಿಕೋನ ಬದಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ ಹೇಳಿದರು. ಇವರು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇಲ್ಲಿನ ದೈಹಿಕ ಶಿಕ್ಷಣ ವಿಭಾಗ, ಮತ್ತು ಉಡುಪಿ ಜಿಲ್ಲಾ ಲಾನ್ ಟೆನ್ನಿಸ್ ಸಂಘ […]

ಐ.ಟಿ.ಐ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ನಗರದ ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐ.ಟಿ.ಐ) ವಿವಿಧ ತಾಂತ್ರಿಕ ವೃತ್ತಿಗಳ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಇಲಾಖೆಯವೆಬ್‌ಸೈಟ್ www.cite.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಐಪಿಎಲ್ ಹರಾಜು: 24.75 ಕೋಟಿ ರೂ ಗೆ ಕೆಕೆಆರ್ ಪಾಲಾದ ಸ್ಟಾರ್ಕ್; 20.50 ಕೋಟಿಗೆ ಕಮಿನ್ಸ್ ಎಸ್.ಆರ್.ಎಚ್ ಪಾಲು!!

ದುಬೈ: ಆಸ್ಟ್ರೇಲಿಯದ ನಾಯಕ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಐಪಿಎಲ್ ನಲ್ಲಿ ದಾಖಲೆ ಮೊತ್ತಕ್ಕೆ ಸನ್‌ರೈಸರ್ಸ್ ಹೈದರಾಬಾದ್ ಪಾಲಾಗಿದ್ದಾರೆ. ವಿಶ್ವ ಕಪ್ ವಿಜೇತ ನಾಯಕ ಬರೋಬ್ಬರಿ 20.50 ಕೋಟಿ ರೂ ಬೆಲೆಗೆ ಎಸ್.ಆರ್.ಎಚ್ ಪಾಲಾಗಿದ್ದಾರೆ. ಕಮಿನ್ಸ್ ಅವರ ಸಹ ಆಟಗಾರ ಮತ್ತು ಆಸ್ಟ್ರೇಲಿಯಾದ ವಿಶ್ವಕಪ್ ಫೈನಲ್ ಹೀರೋ ಟ್ರಾವಿಸ್ ಹೆಡ್ ಅವರನ್ನು ಎಸ್‌ಆರ್‌ಹೆಚ್ ₹6.80 ಕೋಟಿಗೆ ಪಡೆದುಕೊಂಡಿದೆ. ಆಸ್ಟ್ರೇಲಿಯಾ ಬೌಲರ್ ಮಿಶೆಲ್ ಸ್ಟಾರ್ಕ್ ಅವರು ತಮ್ಮ ನಾಯಕನ ದಾಖಲೆಯನ್ನು ಮುರಿದು 24.75 ಕೋಟಿ ರೂ ಗಳಿಗೆ ಕೆ.ಕೆ.ಆರ್ […]