ಮೂಡುಬಿದಿರೆ:ರಾಷ್ಟ್ರೀಯ ಸೀನಿಯರ್ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಕರ್ನಾಟಕ ತಂಡ ಚಾಂಪಿಯನ್ಸ್ ರಾಜ್ಯ ತಂಡದಲ್ಲಿ 6 ಆಳ್ವಾಸ್ ವಿದ್ಯಾರ್ಥಿಗಳು.

ವಿದ್ಯಾಗಿರಿ:ಮಹಾರಾಷ್ಟ್ರದ ರಾಯಘಢ ಜಿಲ್ಲೆಯ ಕಾಮೋತೆಯಲ್ಲಿ ನಡೆದ 70 ನೇ ರಾಷ್ಟ್ರೀಯ ಸೀನಿಯರ್ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ನಲ್ಲಿ ಕರ್ನಾಟಕ ಚಾಂಪಿಯನ್ ಆಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆರು ವಿದ್ಯಾರ್ಥಿಗಳು ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು. ವಿಜೇತ ತಂಡದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆರು ಮಂದಿ ಆಟಗಾರರು ಭಾಗವಹಿಸಿದ್ದರು. ರಾಜ್ಯ ತಂಡದ ನಾಯಕಿ ಮೇಘನಾ ಎಚ್. ಎಂ., ಪಲ್ಲವಿ ಬಿ. ಎಸ್., ಸಹನಾ ಎಚ್. ವೈ, ಲಕ್ಷ್ಮಿ ದೇವಿ, ತನುಶ್ರೀ, ಗೀತಾ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ರಾಜ್ಯ ತಂಡದ […]
ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್: ಅಭಿಮಾನಿಗಳಿಗೆ ಶಾಕ್ ಕೊಟ್ಟಿತು ಕ್ರಿಕೆಟಿಗನ ದಿಢೀರ್ ನಿರ್ಧಾರ?

ಭಾರತ ತಂಡದ ಖ್ಯಾತ, ಕಲಾತ್ಮಕ ವೇಗಿ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ ಗುಡ್ ಬೈ ಹೇಳಿದ್ದಾರೆ.ಆಸ್ಟ್ರೇಲಿಯಾದ ಟೆಸ್ಟ್ ಸರಣಿಯ ವೇಳೆ ಸುದ್ದಿಗೋಷ್ಟಿಯಲ್ಲಿ ಅವರು ಈ ನಿರ್ಧಾರ ಘೋಷಿಸಿದ್ದಾರೆ. ರವಿಚಂದ್ರನ್ ಅಶ್ವಿನ್ ಒಟ್ಟು 106 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ, 200 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಟೆಸ್ಟ್ ನಲ್ಲಿ 27246 ಎಸೆತಗಳನ್ನು ಎಸೆದು ಭರ್ಜರಿ 537 ವಿಕೆಟ್ ಉರುಳಿಸಿದ್ದಾರೆ. 116 ಏಕದಿನ ಪಂದ್ಯಗಳಲ್ಲಿ 114 ಇನಿಂಗ್ಸ್ ಆಡಿ 156 ವಿಕೆಟ್ ಪಡೆದರೆ, 65 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿ 72 […]
ಮುಂಬೈ(ಟೀಂ ಇಂಡಿಯಾ): ವೇಗಿ ಮೊಹಮ್ಮದ್ ಶಮಿಗೆ ಆರೋಗ್ಯದ ದೃಷ್ಟಿಯಿಂದ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ಮುಂಬೈ: ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ (Mohammed Shami) ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಆಡದೆ ಒಂದು ವರ್ಷವಾಯಿತು. 2023ರ ಏಕದಿನ ವಿಶ್ವಕಪ್ ನಲ್ಲಿ ಗಾಯಗೊಂಡಿದ್ದ ಶಮಿ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇತ್ತೀಚೆಗಷ್ಟೇ ಮತ್ತೆ ವೃತ್ತಿಪರ ಕ್ರಿಕೆಟ್ ಗೆ ಶಮಿ ಮರಳಿದ್ದು, ಭಾರತ ತಂಡವನ್ನು ಕೂಡಿಕೊಳ್ಳಲು ಎದುರು ನೋಡುತ್ತಿದ್ದಾರೆ. ಸದ್ಯ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್ ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ ಮೊಹಮ್ಮದ್ ಶಮಿ ಅವರ ಆಯ್ಕೆ ಮಾಡಬೇಕು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಇದು ಸದ್ಯ ಕಷ್ಟದ […]
ಉಡುಪಿ:ವಿಕಲಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟ ಉದ್ಘಾಟನೆ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಹಾಗೂ ಲಿಯೋ ಡಿಸ್ಟಿçಕ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ವಿಕಲಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಲಯನ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ವಿಶೇಷ ಮಕ್ಕಳ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ […]
ಹೊಸದಿಲ್ಲಿ(IPL 2024):ನನಗೆ ಪ್ರೀತಿ, ಬೆಂಬಲ, ಗೌರವ ಕೊಡಿ ಸಾಕು: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ

ಹೊಸದಿಲ್ಲಿ: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿದ್ದ ಕೆಎಲ್ ರಾಹುಲ್ ಅವರು ಮುಂದಿನ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಡಲಿದ್ದಾರೆ. ಇತ್ತೀಚೆಗೆ ನಡೆದ ಐಪಿಎಲ್ ಹರಾಜಿನಲ್ಲಿ ಕೆಎಲ್ ರಾಹುಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಡೆದುಕೊಂಡಿದೆ. ಅದಕ್ಕಾಗಿ ಫ್ರಾಂಚೈಸಿಯು 14 ಕೋಟಿ ರೂ ಖರ್ಚು ಮಾಡಿದೆ. ಮೂರು ವರ್ಷಗಳ ನಂತರ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದಿಂದ ಬೇರ್ಪಟ್ಟಿದ್ದಾರೆ. ಅದರ ನಂತರ ಎಲ್ಎಸ್ಜಿ ಮಾಲೀಕ ಸಂಜೀವ್ ಗೋಯೆಂಕಾ ಅವರು ವೈಯಕ್ತಿಕ ಗುರಿಗಳಿಗಿಂತ ತಂಡಕ್ಕೆ ಆದ್ಯತೆ ನೀಡುವ […]