ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವಿರಾಟ್, ರೋಹಿತ್.

ಭಾರತ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೊನೆಗೊಂದು ಬೇಸರ ಮೂಡಿಸಿದ್ದಾರೆ. ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಈ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ವಿರಾಟ್ ಕೊಹ್ಲಿ ಪಂದ್ಯ ಮುಗಿದ ಬಳಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ತಮ್ಮ ನಿವೃತ್ತಿಯ ಬಗ್ಗೆ ಖಚಿತಪಡಿಸಿದರು. ನಾಯಕ ರೋಹಿತ್ ಶರ್ಮಾ ಅವರೂ ಬಳಿಕ ತನ್ನ ಟಿ20 ನಿವೃತ್ತಿಯನ್ನು ಘೋಷಿಸಿದರು. ವಿರಾಟ್ ಕೊಹ್ಲಿ ಅವರು ಇದು ನನ್ನ ಕೊನೆಯ […]

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿ.ವಿ. ಕಬಡ್ಡಿ: ಆಳ್ವಾಸ್ ಚಾಂಪಿಯನ್, ಮಹಿಳಾ ವಿಭಾಗದಲ್ಲಿ ಉಜಿರೆ ಎಸ್‍ಡಿಎಂಗೆ ಪ್ರಶಸ್ತಿ.

ವಿದ್ಯಾಗಿರಿ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ ಮಟ್ಟ) ಕಬಡ್ಡಿ ಪಂದ್ಯಾಟದ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಮಹಿಳಾ ವಿಭಾಗದಲ್ಲಿ ಉಜಿರೆಯ ಎಸ್‍ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜುಗಳು ಚಾಂಪಿಯನ್ ಆಗಿವೆ. ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ.ಅಮರನಾಥ ಶೆಟ್ಟಿ (ಕೃಷಿ ಸಿರಿ) ಅಂಕಣದಲ್ಲಿ ಬುಧವಾರ ನಡೆದ ಪುರುಷರ ಫೈನಲ್‍ನಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ […]

ವಾಲಿ ಬಾಲ್ ನಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅತ್ರಾಡಿ ಶಾಲಾ ಹಳೆ ವಿದ್ಯಾರ್ಥಿ ದೀಕ್ಷಿತ್.

ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿಯ ಹಳೆವಿದ್ಯಾರ್ಥಿ ದೀಕ್ಷಿತ್ ನಾಯಕ್ ಉಡುಪಿ ಜಿಲ್ಲೆಯ ವಾಲಿಬಾಲ್ ತಂಡದಲ್ಲಿ ಭಾಗವಹಿಸಿ, ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ. ರಾಜ್ಯಕ್ಕೆ ಆತ್ಯುತ್ತಮ ಆಟಗಾರನೆಂಬ ಹೆಸರು ಪಡೆದ ದೀಕ್ಷಿತ್ ಈಗ ಕರ್ನಾಟಕ ರಾಜ್ಯದ ಪರವಾಗಿ ರಾಷ್ಟೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಅತ್ರಾಡಿ ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಶ್ರೀಮತಿ ಕೀರ್ತಿ ದಿನೇಶ್ ನಾಯಕ್ ಕಬ್ಯಾಡಿ ಇವರ ಪುತ್ರ ನಾಗಿರುವ ದೀಕ್ಷಿತ್ ನಾಯಕ್ ಪ್ರಸ್ತುತ ಹಿರಿಯಡ್ಕ ಕೆಪಿಎಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಅವನ ಮುಂದಿನ ಕ್ರೀಡಾ ಮತ್ತು […]

ಭಾರತ ತಂಡಕ್ಕೆ ಪಾಕ್ ವಿರುದ್ಧ ಆರು ರನ್ ಅಂತರದ ಗೆಲುವು: ಪಂದ್ಯ ಸೋತ ಬಳಿಕ ಅಳುತ್ತಿದ್ದ ಪಾಕ್ ಆಟಗಾರನನ್ನು ಸಂತೈಸಿದ ನಾಯಕ ರೋಹಿತ್ ಶರ್ಮಾ.

ನ್ಯೂಯಾರ್ಕ್: ಐಸಿಸಿ ಟಿ20 ವಿಶ್ವಕಪ್ ನ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ನ್ಯೂಯಾರ್ಕ್ ನ ನಸ್ಸೌ ಸ್ಟೇಡಿಯಂನಲ್ಲಿ ರವಿವಾರ ಮುಖಾಮುಖಿಯಾಗಿ, ಲೋ ಸ್ಕೋರಿಂಗ್ ಪಂದ್ಯದಲ್ಲಿ ರೋಹಿತ್ ಶರ್ಮಾ ಟೀಮ್ ಆರು ರನ್ ಅಂತರದಲ್ಲಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 19 ಓವರ್ ಗಳಲ್ಲಿ 119 ರನ್ ಗೆ ಆಲೌಟಾದರು. ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡವು 113 ರನ್ ಮಾತ್ರ ಗಳಿಸಲು ಶಕ್ತವಾಯಿತು. ಕೊನೆಯ ಓವರ್ ನಲ್ಲಿ ನಸೀಂ ಶಾ ಪ್ರಯತ್ನಪಟ್ಟರಾದರೂ […]

ಉಡುಪಿ‌ ಡಾ.ಜಿ.ಶಂಕರ್ ಸರಕಾರಿ ಕಾಲೇಜಿನಲ್ಲಿ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಟೆನ್ನಿಸ್ ಪಂದ್ಯಾವಳಿ

ಉಡುಪಿ:ಕೇವಲ ಶ್ರೀಮಂತರ ಆಟ ಎಂದೇ ಕರೆಯಲ್ಪಡುವ ಟೆನ್ನಿಸ್ ಇಂದು ಶ್ರೀಸಾಮಾನ್ಯರು ಆಡುವ ಕ್ರೀಡೆಯಾಗಿ ಬದಲಾಗಿದೆ. ಯಾಕೆಂದರೆ, ಸಮಾಜ ಇಂದು ಕ್ರೀಡೆಯನ್ನು ನೋಡುತ್ತಿರುವ ದೃಷ್ಟಿಕೋನ ಬದಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ ಹೇಳಿದರು. ಇವರು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇಲ್ಲಿನ ದೈಹಿಕ ಶಿಕ್ಷಣ ವಿಭಾಗ, ಮತ್ತು ಉಡುಪಿ ಜಿಲ್ಲಾ ಲಾನ್ ಟೆನ್ನಿಸ್ ಸಂಘ […]