ಮಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಅಮೆಜಾನ್ ನೌ ಎಂಟ್ರಿ: ‘ಕ್ವಿಕ್ ಕಾಮರ್ಸ್’ ಮಾರುಕಟ್ಟೆಯಲ್ಲಿ ಸಂಚಲನ

ಬೆಂಗಳೂರು: ರಾಜಧಾನಿ ಬೆಂಗಳೂರು, ಮುಂಬೈ ಮತ್ತು ದೆಹಲಿ-ಎನ್‌ಸಿಆರ್‌ನಂತಹ ಮಹಾನಗರಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ನೌ ಸೇವೆ ಇದೀಗ ಕರ್ನಾಟಕದ ಪ್ರಮುಖ ನಗರಗಳಾದ ಮಂಗಳೂರು ಮತ್ತು ಮೈಸೂರಿಗೂ ವಿಸ್ತರಿಸಲಾಗುತ್ತಿದೆ. ಭಾರತದ ಕ್ವಿಕ್ ಕಾಮರ್ಸ್ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಪೈಪೋಟಿ ಹೆಚ್ಚುತ್ತಿರುವ ಹಿನ್ನೆಲೆ, ಈ ವಲಯದಲ್ಲಿ ತನ್ನ ಸ್ಥಾನ ಮತ್ತಷ್ಟು ಬಲಪಡಿಸಲು ಇ-ಕಾಮರ್ಸ್ ದೈತ್ಯ ಅಮೆಜಾನ್ ಮಹತ್ವದ ಹೆಜ್ಜೆ ಇಟ್ಟಿದೆ. ಗ್ರಾಹಕರಿಗೆ ಕೆಲವೇ ನಿಮಿಷಗಳಲ್ಲಿ ಅಗತ್ಯ ವಸ್ತುಗಳನ್ನು ತಲುಪಿಸುವ ‘ಅಮೆಜಾನ್ ನೌ’ ಸೇವೆಯನ್ನು ಈಗಾಗಲೇ ಹಲವು ನಗರಗಳಲ್ಲಿ ಆರಂಭಿಸಿರುವ ಕಂಪನಿ, […]

ಕಂಪ್ಯೂಟರ್ ಕೀ ಬೋರ್ಡ್ ಆಗಾಗ ಕ್ಲೀನ್ ಮಾಡದಿದ್ದರೆ ಸಮಸ್ಯೆಗಳಿಗೆ ಹಾದಿ ಮಾಡಿಕೊಟ್ಟಂತೆ! ಹೇಗೆ ಇಲ್ಲಿ ನೋಡಿ

ಇಂದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಕೀಬೋರ್ಡ್ ನಮ್ಮ ದಿನನಿತ್ಯದ ಕೆಲಸಗಳಲ್ಲಿ ಅತ್ಯಂತ ಮುಖ್ಯ ಸಾಧನವಾಗಿದೆ. ನಾವು ದಿನವೂ ಬಳಸುವ ಈ ಕೀಬೋರ್ಡ್ ಮೇಲೆ ಧೂಳು, ಮಣ್ಣು, ಆಹಾರದ ತುಂಡುಗಳು ಹಾಗೂ ಬ್ಯಾಕ್ಟೀರಿಯಾ ಕೂಡ ಸೇರುತ್ತವೆ. ಆದ್ದರಿಂದ ನಿಯಮಿತವಾಗಿ ಕೀಬೋರ್ಡ್ ಕ್ಲೀನ್ ಮಾಡುವುದು ಅತ್ಯಗತ್ಯ. ಯಾಕೆ ಕೀಬೋರ್ಡ್ ಕ್ಲೀನ್ ಮಾಡಬೇಕು? ಕೀ ಬೋರ್ಡ್ ಸಂದುಗಳಲ್ಲಿ ಕುಳಿತುಕೊಲ್ಳುವ ಧೋಳು ಹಾಗೂ ಕಸಗಳಿಂದ ಕೀಬೋರ್ಡ್ ನಲ್ಲಿ ಬ್ಯಾಕ್ಟೀರಿಯಾ ಮತ್ತು ಜರ್ಮ್ಸ್ ಕಾಣಿಸಿಕೊಳ್ಳಬಹುದು. ಇದರಿಂದಾಗಿ ಕೀಲಿಗಳು ಸರಿ ಕೆಲಸ ಮಾಡದೇ ಬೇಗ ಹಾಳಾಗುವ […]

ಇಂದು ನಿಮ್ಮ ಮೊಬೈಲ್‌ನಲ್ಲಿ ಕೇಳಿಸಲಿದೆ ಅಲರ್ಟ್ ಸೌಂಡ್, ಒಮ್ಮೆಲೇ ಶಬ್ದ ಬಂದರೆ ಗಾಬರಿಯಾಗಬೇಡಿ!

ಬೆಂಗಳೂರು: ಇಂದು (ಶನಿವಾರ) ನಿಮ್ಮ ಮೊಬೈಲ್‌ ಫೋನ್‌ನಲ್ಲಿ ಅಚಾನಕ್ ಜೋರಾಗಿ ಬೀಪ್ ಶಬ್ದ ಕೇಳಿಸಿಕೊಂಡರೂ ಅಥವಾ ತುರ್ತು ಎಚ್ಚರಿಕೆಯ ಸಂದೇಶ ಬಂದರೂ ಆತಂಕಪಡಬೇಕಿಲ್ಲ. ಕೇಂದ್ರ ಸರ್ಕಾರ ಹೊಸ ವಿಪತ್ತು ಎಚ್ಚರಿಕಾ ವ್ಯವಸ್ಥೆಯನ್ನು ಪರೀಕ್ಷಿಸುತ್ತಿರುವ ಹಿನ್ನೆಲೆಯಲ್ಲಿ ಮೊಬೈಲ್‌ಗಳಿಗೆ ವಿಶೇಷ ಅಲರ್ಟ್ ಸಂದೇಶಗಳು ರವಾನೆಯಾಗಲಿವೆ. National Disaster Management Authority (NDMA) ಮೇ 2ರಂದು ದೇಶವ್ಯಾಪಿ ಹೊಸ ತುರ್ತು ಎಚ್ಚರಿಕಾ ವ್ಯವಸ್ಥೆಯ ಪರೀಕ್ಷೆ ನಡೆಸುತ್ತಿದೆ. ಇದರ ಭಾಗವಾಗಿ ಬೆಂಗಳೂರು ಸೇರಿದಂತೆ ಹಲವು ನಗರಗಳ ನಾಗರಿಕರ ಮೊಬೈಲ್‌ಗಳಿಗೆ ಜೋರಾದ ಸೈರನ್ ಧ್ವನಿಯೊಂದಿಗೆ […]

ಟ್ಯಾಕ್ಸಿ, ಸರಕು ವಾಹನ, ಆಟೋರಿಕ್ಷಾ ಖರೀದಿಗೆ ಸಿಗಲಿದೆ 2.5 ಲಕ್ಷ ರೂ. ಸಬ್ಸಿಡಿ; ಯಾರಿಗಿದೆ ಅರ್ಹತೆ?

ಕರ್ನಾಟಕದಲ್ಲಿ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದವರಿಗೆ ಸ್ವಯಂ ಉದ್ಯೋಗ ಆರಂಭಿಸಲು ಉತ್ತಮ ಅವಕಾಶ ಒದಗಿಸುವ ಉದ್ದೇಶದಿಂದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC) ವಿಶೇಷ ವಾಹನ ಖರೀದಿ ಸಹಾಯಧನ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ ಟ್ಯಾಕ್ಸಿ, ಪ್ರಯಾಣಿಕ ಆಟೋರಿಕ್ಷಾ ಹಾಗೂ ಸರಕು ವಾಹನಗಳನ್ನು ಖರೀದಿಸಲು ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುತ್ತದೆ. ಯೋಜನೆ ಕುರಿತು ಒಂದಿಷ್ಟು ಈ ಯೋಜನೆ KMDC ಹಾಗೂ ರಾಷ್ಟ್ರೀಕೃತ/ಅನುಸೂಚಿತ ಬ್ಯಾಂಕ್‌ಗಳ ಸಹಯೋಗದಲ್ಲಿ ಜಾರಿಯಲ್ಲಿದೆ. ಅರ್ಹ ಫಲಾನುಭವಿಗಳು ಬ್ಯಾಂಕ್ ಮೂಲಕ ಸಾಲ ಪಡೆಯುವಾಗ, ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. […]

ಮಣಿಪಾಲ‌ MSDC ಯಿಂದ ತಂತ್ರಜ್ಞಾನಾಧಾರಿತ ಕಲಿಕೆಯ ಬೇಸಿಗೆ ಶಿಬಿರ, ವಿದ್ಯಾರ್ಥಿಗಳನ್ನು ಭವಿಷ್ಯಕ್ಕಾಗಿ ಸಿದ್ಧಗೊಳಿಸುವ ವಿಶೇಷ ಕ್ಯಾಂಪ್!

ಮಣಿಪಾಲ: ವಿದ್ಯಾರ್ಥಿಗಳಲ್ಲಿ ವಿಜ್ಞಾನ, ತಂತ್ರಜ್ಞಾನ ಹಾಗೂ ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ STEM IoT ಸಮರ್ ಕ್ಯಾಂಪ್ ಆಯೋಜಿಸಲಾಗಿದೆ. ಮೇ 11ರಿಂದ 21ರವರೆಗೆ ನಡೆಯಲಿರುವ ಈ ಶಿಬಿರವು ಶಾಲಾ ವಿದ್ಯಾರ್ಥಿಗಳಿಗೆ ತಂತ್ರಜ್ಞಾನಾಧಾರಿತ ತರಬೇತಿ ನೀಡಲಿದೆ. ಶಿಬಿರದಲ್ಲಿ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಜೂನಿಯರ್ ಬ್ಯಾಚ್ ಹಾಗೂ 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಸೀನಿಯರ್ ಬ್ಯಾಚ್ ವ್ಯವಸ್ಥೆ ಮಾಡಲಾಗಿದೆ. ಪ್ರತಿದಿನ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ತರಗತಿಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಎಲ್‌ಇಡಿ […]