ಸೆನ್ಸೆಕ್ಸ್​, ನಿಫ್ಟಿ ಏರಿಕೆಯೊಂದಿಗೆ ಆರಂಭ : ಮಧ್ಯಪ್ರಾಚ್ಯ ಬಿಕ್ಕಟ್ಟಿನ ಆತಂಕ ಮಾಯ

ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಿನ ಉತ್ತೇಜನಕಾರಿ ಪ್ರವೃತ್ತಿಗಳು ಹೂಡಿಕೆದಾರರಲ್ಲಿ ಭರವಸೆ ಮೂಡಿಸಿದ್ದರಿಂದ ಭಾರತದ ಸೆನ್ಸೆಕ್ಸ್ ಮತ್ತು ನಿಫ್ಟಿ ಬುಧವಾರದ ಆರಂಭಿಕ ವಹಿವಾಟಿನಲ್ಲಿ ಏರಿಕೆ ಕಂಡವು.30 ಷೇರುಗಳ ಸೆನ್ಸೆಕ್ಸ್ 416.22 ಪಾಯಿಂಟ್ ಅಥವಾ ಶೇಕಡಾ 0.63 ರಷ್ಟು ಏರಿಕೆ ಕಂಡು 66,495.58 ಪಾಯಿಂಟ್​ಗಳಿಗೆ ತಲುಪಿದ್ದರೆ, ವಿಶಾಲ ನಿಫ್ಟಿ 120 ಪಾಯಿಂಟ್ಸ್ ಅಥವಾ ಶೇಕಡಾ 0.61 ರಷ್ಟು ಏರಿಕೆ ಕಂಡು 19,809.85 ಪಾಯಿಂಟ್​ಗಳಿಗೆ ತಲುಪಿದೆ. ಬುಧವಾರದ ಆರಂಭಿಕ ವಹಿವಾಟಿನಲ್ಲಿ ಭಾರತದ ಷೇರು ಮಾರುಕಟ್ಟೆಗಳು ಏರಿಕೆ ಕಂಡಿವೆ. ಇಂದಿನ ಷೇರು ಮಾರುಕಟ್ಟೆಗಳ ಪ್ರವೃತ್ತಿಯ […]

ಮಾರಾಟ ಕುಸಿತ : ಚೀನಾದಲ್ಲಿ ಸ್ಮಾರ್ಟ್​ಪೋನ್ ತಯಾರಿಕೆ

ನವದೆಹಲಿ: ಚೀನಾದ ಸ್ಮಾರ್ಟ್​ಫೋನ್ ಮಾರುಕಟ್ಟೆ ಈ ವರ್ಷದ ಮೊದಲ ಎಂಟು ತಿಂಗಳಲ್ಲಿ ಕುಸಿತ ಕಂಡಿದೆ. ಜನವರಿಯಿಂದ ಆಗಸ್ಟ್​ವರೆಗೆ ಚೀನಾ ಕೇವಲ 679 ಮಿಲಿಯನ್ ಸ್ಮಾರ್ಟ್​ಫೋನ್​ಗಳನ್ನು ಉತ್ಪಾದಿಸಿದೆ. 2022 ರ ಇದೇ ಅವಧಿಗೆ ಹೋಲಿಸಿದರೆ ಇದು ಶೇಕಡಾ 7.5 ರಷ್ಟು ಕಡಿಮೆಯಾಗಿದೆ ಎಂದು ದೇಶದ ಕೈಗಾರಿಕೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರಕಟಿಸಿದ ಅಂಕಿ ಅಂಶಗಳು ತಿಳಿಸಿವೆ. ಈ ವರ್ಷದ ಮೊದಲ ಎಂಟು ತಿಂಗಳಲ್ಲಿ ಚೀನಾದ ಸ್ಮಾರ್ಟ್​ಪೋನ್ ಮಾರುಕಟ್ಟೆ ಕುಸಿತ ಕಂಡಿದೆ. ಮುಂಬರುವ ಚಳಿಗಾಲದ ಮಾರಾಟದ ಋತುವಿನಲ್ಲಿ ಹುವಾವೇ […]

ಇ- ಪೋರ್ಟ್​ನಲ್ಲಿ ಸಾಧಕರ ನಾಮನಿರ್ದೇಶನಕ್ಕೆ ಅವಕಾಶ : 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಧಾನ ಮಾಡಲಾಗುವ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಾಗಿ ಇಂದಿನಿಂದ (ಅಕ್ಟೋಬರ್ 1) ಅರ್ಜಿ ಸಲ್ಲಿಸಬಹುದಾಗಿದೆ.ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮನಿರ್ದೇಶನದ ಅವಧಿ ಅ.1 ರಿಂದ ಅ. 15ರ ವರೆಗೆ ಇರಲಿದೆ2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಾಧಕರ ನಾಮನಿರ್ದೇಶನಕ್ಕೆ ಇಂದಿನಿಂದ ಅ.15ರ ವರೆಗೆ ಅವಕಾಶ ನೀಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ಹೊರಡಿಸಿದೆ. ಆಯ್ಕೆ ಸಮಿತಿ ರಚನೆ: 2023ನೇ ಸಾಲಿನ […]

ಗ್ರಾಹಕರು ಹೈರಾಣು : ಸಿಮ್ ಪೋರ್ಟೆಬಿಲಿಟಿಗೆ ಕಂಪನಿಗಳ ಕಿರಿಕಿರಿ

ನವದೆಹಲಿ : ಕಳೆದ 24 ತಿಂಗಳ ಅವಧಿಯಲ್ಲಿ ಸಿಮ್ ಪೋರ್ಟ್ ಮಾಡಿಕೊಂಡ ಪ್ರತಿ ನಾಲ್ವರ ಪೈಕಿ ಒಬ್ಬರು ಪೋರ್ಟ್ ಮಾಡಿಕೊಳ್ಳಲು ತೀರಾ ಕಷ್ಟಪಟ್ಟಿದ್ದಾರೆ ಎಂದು ಶುಕ್ರವಾರ ಬಂದ ಹೊಸ ವರದಿಯೊಂದು ಹೇಳಿದೆ. ಸಿಮ್ ಕಾರ್ಡ್ ಪೋರ್ಟ್ ಮಾಡುವಾಗ ಟೆಲಿಕಾಂ ಕಂಪನಿಗಳು ಅನಗತ್ಯವಾಗಿ ನಿಧಾನ ಮಾಡುತ್ತಿವೆ ಎಂದು ಹಲವಾರು ಗ್ರಾಹಕರು ದೂರುತ್ತಿದ್ದಾರೆಕೇವಲ ಶೇ 47 ರಷ್ಟು ಗ್ರಾಹಕರು ಮಾತ್ರ ತಮ್ಮ ಪೋರ್ಟಿಂಗ್ ಸುಲಭವಾಗಿ ಆಯಿತು ಎಂದು ಹೇಳಿಕೊಂಡಿದ್ದಾರೆ.ಒಂದು ಟೆಲಿಕಾಂ ಕಂಪನಿಯ ಸಿಮ್ ಹೊಂದಿರುವವರು ಇನ್ನೊಂದು ಟೆಲಿಕಾಂ ಕಂಪನಿಯ ಸೇವೆಗೆ […]

ಗೂಗಲ್ : ಆಂಡ್ರಾಯ್ಡ್​ ಬಳಕೆದಾರರಿಗೆ ಭೂಕಂಪ ಮುನ್ನೆಚ್ಚರಿಕೆ​ ವ್ಯವಸ್ಥೆ ಜಾರಿ

ನವದೆಹಲಿ : ಭಾರತದಲ್ಲಿನ ಆಂಡ್ರಾಯ್ಡ್​​ ಬಳಕೆದಾರರಿಗಾಗಿ ಭೂಕಂಪದ ಮುನ್ನೆಚ್ಚರಿಕೆ ನೀಡುವ ವ್ಯವಸ್ಥೆಯನ್ನು ಗೂಗಲ್ ಬುಧವಾರದಿಂದ ಜಾರಿಗೊಳಿಸಿದೆ.ಭೂಕಂಪವಾದಾಗ ಜನರು ಸುರಕ್ಷಿತವಾಗಿ ಹಾಗೂ ತ್ವರಿತವಾಗಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ನೀಡುವಂತೆ ಈ ವ್ಯವಸ್ಥೆಯನ್ನು ರೂಪಿಸಲಾಗಿದ್ದು, ಇದು ಆಂಡ್ರಾಯ್ಡ್​ ಸ್ಮಾರ್ಟ್​ಪೋನ್ ಬಳಕೆದಾರರಿಗೆ ಲಭ್ಯವಿರುತ್ತದೆ. ವಿಶ್ವದಲ್ಲಿ ಸಂಭವಿಸುವ ನೈಸರ್ಗಿಕ ವಿಕೋಪಗಳ ಪೈಕಿ ಭೂಕಂಪಗಳ ಪಾಲು ದೊಡ್ಡದಾಗಿದೆ. ಭೂಕಂಪ ಸಂಭವಿಸಿದಾಗ ತಕ್ಷಣ ನೀಡುವ ಎಚ್ಚರಿಕೆಯು ಜನ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹಾಗೂ ಇತರರನ್ನು ಕೂಡ ರಕ್ಷಿಸಲು ಬಹಳ ಉಪಯುಕ್ತವಾಗುತ್ತದೆ.ಆಂಡ್ರಾಯ್ಡ್​ ಬಳಕೆದಾರರಿಗೆ ಭೂಕಂಪದ ಮುನ್ನೆಚ್ಚರಿಕೆ […]