ನ.28ಕ್ಕೆ ಉಡುಪಿಗೆ ಪ್ರಧಾನಿ ಭೇಟಿ: ಜಿಲ್ಲೆಯಾದ್ಯಂತ ರಜೆ ಘೋಷಿಸಲು ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ: ಉಡುಪಿ ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಯೋಜಿಸಿರುವ ಬೃಹತ್ ಗೀತೋತ್ಸವ ಪ್ರಯುಕ್ತ ನವೆಂಬರ್ 28 ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂದು ಸ್ಥಳೀಯ ರಜೆ ಘೋಷಣೆ ಮಾಡುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ದೇಶದ ಪ್ರಧಾನಿಯೋರ್ವರು ಸರಿಸುಮಾರು ಮೂರು ದಶಕಗಳ ಬಳಿಕ (ಚುನಾವಣಾ ಪ್ರಚಾರವನ್ನು ಹೊರತುಪಡಿಸಿ) ಉಡುಪಿಗೆ ಭೇಟಿ ನೀಡುತ್ತಿರುವುದು […]
ನ. 30ರಂದು ಭಕ್ತ ನೃತ್ಯ ಸೌರಭ” ರಾಷ್ಟ್ರಮಟ್ಟದ ಭರತನಾಟ್ಯ ಸ್ಪರ್ಧೆ

ಉಡುಪಿ: ಹೆಜ್ಜೆ-ಗೆಜ್ಜೆ ಫೌಂಡೇಶನ್ ಉಡುಪಿ- ಮಣಿಪಾಲ ಇದರ ವತಿಯಿಂದ “ಭಕ್ತ ನೃತ್ಯ ಸೌರಭ” ರಾಷ್ಟ್ರಮಟ್ಟದ ಭರತನಾಟ್ಯ ಸ್ಪರ್ಧೆ ನ. 30ರಂದು ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ಹೆಜ್ಜೆ-ಗೆಜ್ಜೆ ಫೌಂಡೇಶನ್ ನ ದೀಕ್ಷಾ ರಾಮಕೃಷ್ಣನ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದವರಿಗೆ ಫಲಕದೊಂದಿಗೆ ರೂ. 10,000 ನಗದು, ಎರಡನೇ ಬಹುಮಾನ ಪಡೆದವರಿಗೆ ರೂ.7,000 ಹಾಗೂ ಮೂರನೇ ಬಹುಮಾನ ಪಡೆದವರಿಗೆ ರೂ. 5000 ನೀಡಲಾಗುವುದು. ಅಲ್ಲದೆ, […]
ಉಡುಪಿ:ಶ್ರೀ ಧೂಮಾವತಿ ಯುವಕ ಮಂಡಲ (ರಿ), ಇದರ 2025-26ನೇ ಸಾಲಿನ 39 ನೇ ವಾರ್ಷಿಕ ಮಹಾಸಭೆ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿ. ಎಂ. ನಗರ, ನಿಟ್ಟೂರು, ಇದರ 2025-26ನೇ ಸಾಲಿನ 39 ನೇ ವಾರ್ಷಿಕ ಮಹಾಸಭೆಯು ದಿ. 23/11/25ರಂದು ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷರಾದ ನಾಗೇಶ್ ಇವರ ನೇತೃತ್ವದಲ್ಲಿ ನೆರವೇರಿತು. ಕಳೆದ ಸಾಲಿನ ವರದಿಯನ್ನು ಕಾರ್ಯದರ್ಶಿಯವರಾದ ಶ್ರೀ ದಾಮೋದರ್ ಇವರು ಮಂಡಿಸಿದರು.ಈ ಸಾಲಿನ ಹೊಸ ಆಡಳಿತ ಮಂಡಳಿಯನ್ನು ಸರ್ವರ ಸಮ್ಮತಿಯೊಂದಿಗೆ ಘೋಷಿಸಲಾಯಿತು. ವಿವರಗಳು ಈ ಕೆಳಗಿನಂತಿವೆ. ಶ್ರೀ ಚಂದ್ರಶೇಖರ್ ದೇವಾಡಿಗ – ಗೌರವಾಧ್ಯಕ್ಷರುಶ್ರೀ ಗಣೇಶ ಎನ್. ಕೋಟ್ಯಾನ್ – ಅಧ್ಯಕ್ಷರುಶ್ರೀ ಸತೀಶ್ ಪಿ […]
ಕಾಳಿಂಗ ಸರ್ಪಗಳ ಸೆರೆಗಾಗಿ ವಿಶೇಷ ತಂಡ ರಚಿಸುವಂತೆ ಈಶ್ವರ್ ಖಂಡ್ರೆ ಸೂಚನೆ!

ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿರುವ ಕಾಳಿಂಗ ಸರ್ಪಗಳ ಸಂಚಾರದ ಹಿನ್ನೆಲೆಯಲ್ಲಿ, ಅರಣ್ಯ ಸಚಿವ ಈಶ್ವರ ಖಂಡ್ರೆ ತುರ್ತು ಕ್ರಮ ಕೈಗೊಂಡಿದ್ದಾರೆ. ಜನವಸತಿ ಪ್ರದೇಶಗಳಿಗೆ ಪ್ರವೇಶಿಸುತ್ತಿರುವ ಕಾಳಿಂಗ ಸರ್ಪಗಳನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲು, ಅರಣ್ಯ ಇಲಾಖೆಯಲ್ಲೇ ವಿಶೇಷ ತಂಡವನ್ನು ರಚಿಸುವಂತೆ ಸೂಚನೆ ನೀಡಿದ್ದಾರೆ. ಕಾಳಿಂಗ ಸರ್ಪಗಳು ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಮತ್ತು ಉಡುಪಿ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇದಕ್ಕೆ ಪರಿಹಾರವಾಗಿ, ಖಾಸಗಿ ಸರ್ಪ ಹಿಡಿಯುವ ತಂಡಗಳ ಅವಶ್ಯಕತೆಯನ್ನು ತಪ್ಪಿಸಬೇಕು ಎಂದು ಸಚಿವರು ಸ್ಪಷ್ಟಪಡಿಸಿದ್ದು, […]
ನವೆಂಬರ್ 28 ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆಗೆ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಯೋಜಿಸಿರುವ ಬೃಹತ್ ಗೀತೋತ್ಸವ ಪ್ರಯುಕ್ತ ನವೆಂಬರ್ 28 ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂದು ಸ್ಥಳೀಯ ರಜೆ ಘೋಷಣೆ ಮಾಡುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ದೇಶದ ಪ್ರಧಾನಿಯೋರ್ವರು ಸರಿಸುಮಾರು ಮೂರು ದಶಕಗಳ ಬಳಿಕ (ಚುನಾವಣಾ ಪ್ರಚಾರವನ್ನು ಹೊರತುಪಡಿಸಿ) ಉಡುಪಿಗೆ ಭೇಟಿ ನೀಡುತ್ತಿರುವುದು ಜಿಲ್ಲೆಗೆ […]