ವಿಕಸನ: ಉಚಿತ ರಾಜ್ಯ ಮಟ್ಟದ ಬೇಸಿಗೆ ಶಿಬಿರ ಸಂಪನ್ನ

ಸಿದ್ಧಾಂತ್ ಫೌಂಡೇಶನ್ ನ ವತಿಯಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ರಾಜ್ಯ ಮಟ್ಟದ ಹತ್ತು ದಿನಗಳ ‘ವಿಕಸನ’ ಬೇಸಿಗೆ ಶಿಬಿರವು, ಇತ್ತೀಚಿಗೆ ಅಂಬಲಪಾಡಿಯ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದ ಸಭಾಭವನದಲ್ಲಿ ಸಂಪನ್ನಗೊಂಡಿತು. ಶಿಬಿರದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು ಬಳಿಕ ಶಿಬಿರದ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮವು ಜರುಗಿತು.10ನೇ ತರಗತಿಯ ವಿದ್ಯಾರ್ಥಿಗಳ ವೈಯಕ್ತಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗಳಿಗೆ ಪೂರಕವಾಗುವಂತೆ ನುರಿತ ವಿಶೇಷ ತಜ್ಞರಿಂದ ಚಟುವಟಿಕೆ ಆಧಾರಿತ ಕಲಿಕೆಗಳಾದ ವಿಜ್ಞಾನ, ಗಣಿತ, ವಾಣಿಜ್ಯ ಹಾಗೂ ಪ್ರಯೋಗಶಾಲಾ ಪ್ರಯೋಗದ ಕುರಿತು ಮಾಹಿತಿ ಮತ್ತು […]

ಉಡುಪಿ ತಾಲೂಕು ಕಸಾಪ ದಿಂದ ಸಂಸ್ಥಾಪನ ದಿನಾಚರಣೆ ಹಾಗೂ ಉಪನ್ಯಾಸ

ಉಡುಪಿ: ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಉಡುಪಿ ಇವರ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ೧೧೦ ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮವು ಮೇ ಏಳರಂದು ಮಂಗಳವಾರ ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ನಲ್ಲಿ ನಡೆಯಿತು. ಸಮಾರಂಭವನ್ನು ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಉದ್ಘಾಟಿಸಿದರು. ಡಾ. ಕೋಟ ಶಿವರಾಮ ಕಾರಂತ ದತ್ತಿ ಉಪನ್ಯಾಸ ನೀಡಿದ ಸಾಹಿತಿ ಡಾ. ನಿಕೇತನ, ಕಾರಂತರ […]

ಮಂಜೇಶ್ವರ: ಆ್ಯಂಬುಲೆನ್ಸ್- ಕಾರು ನಡುವೆ ಭೀಕರ ಅಪಘಾತ – ಮೂವರು ಸಾವು

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಕುಂಜತ್ತೂರಿನಲ್ಲಿ ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.ಮೃತರನ್ನು ಶಿವಕುಮಾರ್ (54), ಶರತ್ ಮೆನೋನ್(23) ಮತ್ತು ಸೌರವ್(15) ಎಂದು ಗುರುತಿಸಲಾಗಿದೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಉಷಾ, ಜೊತೆಗಿದ್ದ ಶಿವದಾಸ್ ಮತ್ತು ಆ್ಯಂಬುಲೆನ್ಸ್ ಚಾಲಕ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಕಾಸರಗೋಡಿಗೆ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ.

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಲೈನ್ ಫಾಲೋವರ್” ತಾಂತ್ರಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ.

ಉಡುಪಿ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಯು ಪ್ರದ್ಯುನ್ಮಾ ಉಪಾಧ್ಯಾಯ, ಶ್ರೀಕಿರಣ್ ಭಟ್, ಸಾತ್ವಿಕ್ ಭಟ್ ಮತ್ತು ಸೃಜನ್ ನಾಯರಿ ಇವರು ದಿನಾಂಕ 29 ಏಪ್ರೀಲ್ 2024 ರಂದು ಯೆನಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ರಾಷ್ಟ್ರಮಟ್ಟದ ರೋಬೋ ಸ್ಪರ್ಧೆ “ಯೆಂಟೆಕ್‍ಮೇನಿಯಾ ರೋಬೋ ಫ್ಯೂಷನ್” ನ ಲಕ್ಷ್ಮಣ್ ರೀಖಾ (ಲೈನ್ ಫಾಲೋವರ್) ತಾಂತ್ರಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಫ್ರಥಮ ಸ್ಥಾನಗಳಿಸಿದ್ದಾರೆ. ಈ ಸ್ಪರ್ಧೆಯಲ್ಲಿ […]

ಜ್ಞಾನಸುಧಾ – ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಲಾಂಗ್ ಟರ್ಮ್ ತರಬೇತಿ.

ಉಡುಪಿ : ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ನೀಟ್, ಜೆ.ಇ.ಇ, ಕೆ.ಸಿ.ಇ.ಟಿ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಮೋಘ ಸಾಧನೆ ಮಾಡಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ, ಇದೀಗ ನೀಟ್ 2024ರ ಪರೀಕ್ಷೆ ಬರೆದು, ಎಂ.ಬಿ.ಬಿ.ಎಸ್ ಸೀಟು ಪಡೆಯುವಲ್ಲಿ ವಿಫಲರಾದ ಆಯ್ದ ಅರ್ಹ ವಿದ್ಯಾರ್ಥಿಗಳಿಗೆ ಒಂದು ವರ್ಷದ ಸಂಪೂರ್ಣ ಉಚಿತ ಅಥವಾ ಶೇ.50 ಶುಲ್ಕ ವಿನಾಯಿತಿಯೊಂದಿಗೆ ನೀಟ್ ಲಾಂಗ್ ಟರ್ಮ್ ತರಬೇತಿಯನ್ನು ನೀಡುವುದಾಗಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೀಟ್ 2022ರಲ್ಲಿ 107 ವಿದ್ಯಾರ್ಥಿಗಳು […]