“ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ”

ಎಸ್.ವಿ.ಎಸ್ ವಿದ್ಯಾವರ್ಧಕ ಸಂಘ (ರಿ.) ಕಟಪಾಡಿ, ಮಾನ್ಯ ಕಲ್ಚರಲ್ & ಎಜ್ಯುಕೇಷನಲ್ ಫೌಂಡೇಶನ್ (ರಿ.) ಕಟಪಾಡಿ, ಇನ್ವೆಂಜರ್ ಫೌಂಡೇಶನ್ (ರಿ.) ಮಂಗಳೂರು ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ಶೈಕ್ಷಣಿಕ,ಕಲೆ,ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಮೇ.೨೭ರಂದು ಸಂಜೆ ೪.೦೦ ಗಂಟೆಗೆ ಎಸ್.ವಿ.ಎಸ್. ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಉದ್ಯಮಿ ಯುವರಾಜ್ ಸಾಲ್ಯಾನ್ ಮಸ್ಕತ್, ಉದ್ಯಮಿ ಸುನೀಲ್ ಸಾಲ್ಯಾನ್ ಕಡೆಕಾರು, ಕಟಪಾಡಿ ಎಸ್.ವಿ.ಎಸ್.ವಿದ್ಯಾವರ್ಧಕ ಸಂಘದ ಸಂಚಾಲಕ ಕೆ.ಸತ್ಯೇಂದ್ರ […]
ಹಿರಿಯಡಕ: ನದಿಯಲ್ಲಿ ಮುಳುಗಿ ವ್ಯಕ್ತಿ ಮೃತ್ಯು

ಹಿರಿಯಡಕ: ಇಲ್ಲಿಗೆ ಸಮೀಪದ ಭಂಡಾರಿಬೆಟ್ಟು ಎಂಬಲ್ಲಿನ ಸುವರ್ಣ ನದಿಯಲ್ಲಿ ಮೇ 24ರಂದು ಮಧ್ಯಾಹ್ನ ವೇಳೆ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೊಮ್ಮಾರಬೆಟ್ಟು ಗ್ರಾಮದ ರಮೇಶ್ ನಾಯಕ್(62) ಎಂದು ಗುರುತಿಸಲಾಗಿದೆ. ಕೃಷಿ ಕೆಲಸ ಮಾಡಿ ಕೊಂಡಿದ್ದ ರಮೇಶ್ ನಾಯಕ್, ಸ್ನಾನಕ್ಕೆಂದು ಹೋದವರು ಆಕಸ್ಮಿಕವಾಗಿ ನದಿಯಲ್ಲಿ ಕಾಲು ಜಾರಿ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
“ಎಂ.ಸಿ.ಸಿ. ಬ್ಯಾಂಕಿಗೆ ಇಥಿಯೋಪಿಯಾದ ಡ್ಯಾಶೆನ್ ಬ್ಯಾಂಕ್ಎಸ್.ಸಿ. ಇದರ ಆಡಳಿತ ಮಂಡಳಿಯ ನಿರ್ದೇಶಕರಭೇಟಿ”

ಪೂರ್ವ ಆಫ್ರಿಕಾದ ಇಥಿಯೋಪಿಯಾದ ಪ್ರಮುಖ ಖಾಸಗಿ ಬ್ಯಾಂಕ್ಆ ಗಿರುವ ಡ್ಯಾಶೆನ್ ಬ್ಯಾಂಕ್ ಎಸ್.ಸಿ.ಯ ಆಡಳಿತ ಮಂಡಳಿಯ ಸದಸ್ಯರು ೨೨ ಮೇ ೨೦೨೬ ರಂದು ಎಂ.ಸಿ.ಸಿ. ಬ್ಯಾಂಕಿನ ಪ್ರಧಾನ ಕಚೇರಿಗೆ ಅಧಿಕೃತ ಸಂಸ್ಥಾತ್ಮಕ ಸಂವಹನ ಮತ್ತು ಜ್ಞಾನ ವಿನಿಮಯ ಕಾರ್ಯಕ್ರಮದ ಅಂಗವಾಗಿ ಭೇಟಿ ನೀಡಿದರು. ಈ ಭೇಟಿಯನ್ನು ವೃತ್ತಿಪರ ಸಂಬoಧಗಳನ್ನು ಬೆಳೆಸುವುದು, ಭಾರತದ ಸಹಕಾರ ಬ್ಯಾಂಕಿoಗ್ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳುವುದು, ಬ್ಯಾಂಕಿoಗ್ ಪರಿಣತಿಯನ್ನು ವಿನಿಮಯ ಮಾಡಿಕೊಳ್ಳುವುದು ಹಾಗೂ ಡಿಜಿಟಲ್ ಬ್ಯಾಂಕಿoಗ್, ಕಾರ್ಯಾಚರಣಾ ದಕ್ಷತೆ ಮತ್ತು ತಾಂತ್ರಿಕ ಆಧುನೀಕರಣದ ಬೆಳವಣಿಗೆಗಳನ್ನು ಅನ್ವೇಷಿಸುವ […]
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ: ಡಾ. ನಾಗಲಕ್ಷ್ಮಿ ಚೌಧರಿ

ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರಕ್ಷಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ […]
ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ: ರಜತ ಮಹೋತ್ಸವ ಸಂಭ್ರಮ

ಕಾರ್ಕಳ: ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವವು ಮೇ.24 ಮತ್ತು ಮೇ.25 ರಂದು ಸಂಭ್ರಮದಿಂದ ಜರಗಿತು. ಸಭಾಧ್ಯಕ್ಷತೆಯ ವಹಿಸಿದ್ದ ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಉಷಾ ನಾಯಕ್ ರವರು ಮಂಡಳಿಯು ಇಪ್ಪತ್ತೈದು ವರ್ಷಗಳಿಂದ ನಡೆದು ಬಂದ ದಾರಿಯ ಸಿಂಹಾವಲೋಕನ ಮಾಡುತ್ತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಶಾರದ ವೈ ಶೇಣಿ, ಸಂಚಾಲಕರು, ಶಾರದಾಂಬ ವಿದ್ಯಾ ಸಂಸ್ಥೆಗಳು ಶೇಣಿ ಕಾಸರಗೋಡು ಇವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ನಮ್ಮ ಸಮಾಜದ ಮಹಿಳೆಯರ ಸ್ಥಿತಿಗತಿಯ ಬಗ್ಗೆ ಮಾತನಾಡುತ್ತಾ […]