ಮಣಿಪಾಲ ಜ್ಞಾನಸುಧಾ: ನೈಜ ಆರ್ ಹೆಗ್ಡೆ ಭಾರತೀಯ ವಾಲಿಬಾಲ್ ತಂಡದ ತರಬೇತಿ ಶಿಬಿರಕ್ಕೆ ಆಯ್ಕೆ

ಉಡುಪಿ: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿವಿದ್ಯಾರ್ಥಿನಿ ನೈಜ ಆರ್ ಹೆಗ್ಡೆ ಇವರು ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಷನ್ ನಡೆಸುವ 18ರ ವಯೋಮಿತಿಯ ಬಾಲಕಿಯರ ವಿಭಾಗದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟಕ್ಕೆ ಭಾರತೀಯ ವಾಲಿಬಾಲ್ ತಂಡದ ಆಯ್ಕೆಯ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ. ಜಾರ್ಖಂಡ್ ನ ರಾಂಚಿಯಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಒಟ್ಟು 24 ಕ್ರೀಡಾಪಟುಗಳು ಆಯ್ಕೆಯಾಗಿದ್ದು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಇಬ್ಬರಲ್ಲಿ ಮಣಿಪಾಲ ಜ್ಞಾನಸುಧಾದ ನೈಜ ಆರ್ ಹೆಗ್ಡೆ ಕೂಡಾ ಒಬ್ಬರಾಗಿದ್ದಾರೆ. ಮುಂದೆ ಚೀನಾದ ಶಾಂಗ್ಲೋದಲ್ಲಿ […]
ಕಾಪು: ಹೆಂಡತಿ ಮನೆಯ ಮುಂಭಾಗದ ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಉಡುಪಿ: ಮನನೊಂದ ವ್ಯಕ್ತಿಯೊಬ್ಬರು ತನ್ನ ಹೆಂಡತಿಯ ಮನೆಯ ಮುಂಭಾಗ ಇರುವ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾಪುವಿನ ಬೆಳಪುವಿನಲ್ಲಿ ಇಂದು ಮುಂಜಾನೆ ಸಂಭವಿಸಿದೆ.ಮೃತರನ್ನು ಗೋವಾ ಮೂಲದ ಝಹೀರ್ ಎಂದು ಗುರುತಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಳೂರಿನ SDPI ಆ್ಯಂಬುಲೆನ್ಸ್ ಮೂಲಕ ಜಲಾಲುದ್ದೀನ್ ಜಲ್ಲು ಉಚ್ಚಿಲ ಹಾಗೂ ಹಮೀದ್ ಉಚ್ಚಿಲ ಸೇರಿ ಮೃತ ಶರೀರವನ್ನು ಅಜ್ಜರಕಾಡಿನ ಶವಾಗಾರಕ್ಕೆ ಸೇರಿಸಿದರು.ಈ ಸಂದರ್ಭದಲ್ಲಿ ನಿಹಾದ್ ಮಜೂರು,ನಿಷಾದ್ ಮಜೂರು,ಇರ್ಫಾನ್ ಬೆಳಪು,ಶಮೀಮ್ ಬೆಳಪು ಹಾಗೂ ಶುಹೈಬ್ ಮಜೂರು ಕೂಡಾ ಸಹಕರಿಸಿದರು.ಪೊಲೀಸರು ಸ್ಥಳಕ್ಕೆ […]
ಸಾಣೂರಿನಲ್ಲಿ ಕಸ ಎಸೆದ ಪ್ರವಾಸಿಗರಿಗೆ ₹2,000 ದಂಡ!

ಉಡುಪಿ: ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆದು ಗಲೀಜು ಮಾಡಿದ ಪ್ರವಾಸಿಗರ ವಿರುದ್ಧ ಸಾಣೂರು ಗ್ರಾಮ ಪಂಚಾಯತ್ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕೊಪ್ಪಳದಿಂದ ಬಂದ ಪ್ರವಾಸಿಗರ ತಂಡಕ್ಕೆ ₹2,000 ದಂಡ ವಿಧಿಸಿರುವ ಘಟನೆ ಶುಕ್ರವಾರ ವರದಿಯಾಗಿದೆ.ಎರಡು ವಾಹನಗಳಲ್ಲಿ ಬಂದಿದ್ದ ಪ್ರವಾಸಿಗರು ಸಾಣೂರು ಹೆದ್ದಾರಿ ಬದಿಯಲ್ಲಿ ಊಟ ಮಾಡಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಅಲ್ಲೇ ಬಿಸಾಡಿ ತೆರಳಲು ಯತ್ನಿಸಿದ ವೇಳೆ, ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಅವರು ಅವರನ್ನು ತಡೆದು ಪ್ರಶ್ನಿಸಿದರು. ಈ ವೇಳೆ “ನಮ್ಮ ಊರಲ್ಲಿ […]
ಕಾರ್ಕಳ: ಮನೆಯ ದನದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಕಳ್ಳತನ

ಕಾರ್ಕಳ: ಮನೆಯಲ್ಲಿ ಚಿನ್ನ, ಬೆಳ್ಳಿ ಮುಂತಾದ ನಗ ಅಥವಾ ನಗದು ಇದ್ದರೆ ಅಥವಾ ಬೆಳೆಬಾಳುವ ವಸ್ತುಗಳು ಇದ್ದರೆ ಅವುಗಳನ್ನು ಮಾತ್ರ ಜೋಪಾನ ಮಾಡಿದರೆ ಸಾಲುವುದಿಲ್ಲ. ಮನೆ ಹೊರಗೆ ಕೊಟ್ಟಿಗೆಯಲ್ಲಿ ಕಟ್ಟಿರುವ ಹಸುಗಳನ್ನೂ ಜೋಪಾನ ಮಾಡಬೇಕಾದ ಪರಿಸ್ಥಿತಿ ಇಂದು ಬಂದೊದಗಿದೆ. ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದಲ್ಲಿನ ಪ್ರಿಯಾಂಕ ಎಂಬುವವರ ಮನೆಯ ಹಟ್ಟಿಯಲ್ಲಿ ಹಸುವನ್ನು ಕಳ್ಳತನ ಮಾಡಿದ ಘಟನೆ ವರದಿಯಾಗಿದೆ. ಇವರ ಮನೆಯ ದನದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕಪ್ಪು ಬಣ್ಣದ ಹಸುವನ್ನು ಕಾರಿನಲ್ಲಿ ಬಂದ ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ […]
ಕೊಡವೂರು ಮಹಾರುದ್ರಯಾಗ: ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮ ಆರಂಭ; ಪುರೋಹಿತರಿಂದ ರುದ್ರಜಪ ಮೃತ್ಯುಂಜಯ ಯಾಗ.

ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗ ಪ್ರಯುಕ್ತ ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆಯಿಂದ ಆರಂಭಗೊಂಡವು.ವೇದ ಮೂರ್ತಿ ಹಯವದನ ತಂತ್ರಿಗಳು ಪುತ್ತೂರು, ಮಧುಸೂದನ ತಂತ್ರಿಗಳು, ಸುಬ್ರಹ್ಮಣ್ಯ ಭಟ್, ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8ಗಂಟೆಗೆ ಪುರೋಹಿತರಿಂದರುದ್ರಜಪ ಮೃತ್ಯುಂಜಯ ಯಾಗ ಆರಂಭಗೊಂಡವು. ಬಳಿಕ ಶಂಕರನಾರಾಯಣ ದೇವರಿಗೆ ಕಲಶಾಧಿವಾಸ, ಅಧಿವಾಸ ಹೋಮ, ಪರಿವಾರ ಕಲಶ ಸಹಿತ ವಿವಿಧ ಹೋಮಹವನಗಳು ನೆರವೇರಿದವು.ಮಹಾ ರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್ ರಾಜ್ […]