ಆತ್ರಾಡಿಯ ನೇಸರ ಜ್ಞಾನ ವಿಕಾಸ ಕೇಂದ್ರದಲ್ಲಿ ‘ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಾಗಾರ’.

ಉಡುಪಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಮಣಿಪಾಲ ವಲಯದ ಆತ್ರಾಡಿ ನೇಸರ ಜ್ಞಾನ ವಿಕಾಸ ಕೇಂದ್ರದಲ್ಲಿ “ಪೌಷ್ಟಿಕ ಆಹಾರ ಪದ್ಧತಿ” ಬಗ್ಗೆ ಮಾಹಿತಿ ಶಿಬಿರವು ಅತ್ರಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಜಿ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಶೆಟ್ಟಿ ಯವರ ಅದ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ತಾಲೂಕು ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಸತ್ಯಾನಂದ ನಾಯಕ್ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮಭಿವೃದ್ಧಿ ಯೋಜನೆಯ […]

ಕುಂದಾಪುರ: ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರು ನೀರುಪಾಲು; ಇಬ್ಬರು ಮೃತ್ಯು, ಓರ್ವನ ರಕ್ಷಣೆ.

ಉಡುಪಿ: ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರ ಪೈಕಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾಗಿ, ಇನ್ನೊರ್ವನನ್ನು ರಕ್ಷಿಸಿದ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.ಬೆಂಗಳೂರಿಂದ ಬಂದಿದ್ದ 10 ಮಂದಿ ಯುವಕರ ತಂಡವು ಕುಂಬಾಶಿಯ ಗಾಯಿತ್ರಿ ಕಾಂಪೌಂರ್ಟ್ ನಲ್ಲಿ ತಂಗಿದ್ದು, ಇಂದು ಮಧ್ಯಾಹ್ನ 9 ಮಂದಿ ಯುವಕರು ಸಮುದ್ರ ಸ್ನಾನ ಮಾಡಲೆಂದು ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಇಳಿದ್ದಿದ್ದಾರೆ. ಸಮುದ್ರದ ಅಬ್ಬರದ ಅಲೆಗೆ ನಾಲ್ವರು ಕೊಚ್ಚಿ ಹೋಗಿದ್ದು, ಓರ್ವನನ್ನು ತಕ್ಷಣ […]

ಹೆಜಮಾಡಿ: ಟೋಲ್ ವಿನಾಯಿತಿ ಇದ್ದರೂ, ಖಾತೆಯಿಂದ ಹಣ ಕಡಿತ

ಉಡುಪಿ: ಸ್ಥಳೀಯ ವಾಹನಗಳಿಗೆ ವಿನಾಯಿತಿ ಇದ್ದರೂ, ಖಾತೆಯಿಂದ ಹಣ ಕಡಿತಗೊಳ್ಳುವ ಬಗ್ಗೆ ಆಕ್ರೋಶಗೊಂಡ ಹೆಜಮಾಡಿ ನಾಗರಿಕರು ಹೆಜಮಾಡಿ ಕಿರು ಟೋಲ್ ಬಳಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಹೆಜಮಾಡಿಯಲ್ಲಿ ಸ್ಥಳೀಯ ವ್ಯಕ್ತಿಯ ವಾಹನವೊಂದು ಟೋಲ್ ವಿನಾಯಿತಿ ಪಡೆದು ಮುಂದೆ ತೆರಳಿದ ಕೆಲವೇ ಸಮಯದ ಬಳಿಕ ಖಾತೆಯಿಂದ ಟೋಲ್ ಹಣ ಕಡಿತಗೊಂಡಿದೆ. ಕೂಡಲೇ ಅವರು ಸ್ಥಳೀಯರಿಗೆ ತಿಳಿಸಿದಾಗ ಇಂತಹ ಸ್ಥಿತಿ ಹಲವರಿಗಾಗಿದೆ ಎಂದು ತಿಳಿದು ಬಂದಿದೆ. ಕಿರು ಟೋಲ್ ನಲ್ಲಿ ಕೂಡಲೇ ಸ್ಥಳೀಯರು ವಾಹನ ತಡೆದು ಪ್ರತಿಭಟಿಸಿದಾಗ ತಕ್ಷಣ […]

ಮಣಿಪಾಲ: ಭೀಕರ ರಸ್ತೆ ಅಪಘಾತ; ಯುವಕ ಮೃತ್ಯು

ಉಡುಪಿ: ಬೈಕ್‌ವೊಂದು ಸ್ಕಿಡ್ ಆಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಮಣಿಪಾಲ- ಅಲೆವೂರು‌ ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಮೃತ ಸಹಸವಾರನನ್ನು ಕಟಪಾಡಿ ನಿವಾಸಿ ಮೋಹನ್ (33) ಎಂದು ಗುರುತಿಸಲಾಗಿದೆ‌. ಬೈಕ್ ಸವಾರ ಪ್ರದೀಪ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶನಿವಾರ ತಡರಾತ್ರಿ ಕಾಪುವಿನಿಂದ ಮಣಿಪಾಲ ಕಡೆಗೆ ಹೋಗಿ ಹಿಂದಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬೈಕ್ ಸ್ಕಿಡ್ ಆದ ರಭಸಕ್ಕೆ ಸಹಸವಾರ ಪೊದೆಗೆ‌ […]

ಮುನಿಯಾಲು ಆಯುರ್ವೇದ ಕಾಲೇಜು: ಸೆ. 8 ರಿಂದ 13ರವರೆಗೆ ಉಚಿತ ಆರೋಗ್ಯ ತಪಾಸಣೆ

ಮಣಿಪಾಲ: ಮಣಿಪಾಲ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದ ವತಿಯಿಂದ ಸೆ. 8 ರಿಂದ 13ರವರೆಗೆ ಬೆಳಗ್ಗೆ 9ರಿಂದ ಅಪರಾಹ್ನ 4 ಗಂಟೆಯವರೆಗೆ ಸ್ತ್ರೀಯರಲ್ಲಿ ಕಾಡುವ ಮುಟ್ಟಿನ ಸಮಸ್ಯೆಗಳು, ಪಿಸಿಒಡಿ, ಬಂಜೆತನ, ಗುಪ್ತಾಂಗದಲ್ಲಿ ಸೋಂಕು, ಋತುಬಂಧ, ಬಾಣಂತಿಯ ಸಮಸ್ಯೆಗಳಿಗೆ ಹಾಗೂ ಇನ್ನಿತ್ತರ ಕಾಯಿಲೆಗಳಿಗೆ ಉಚಿತ ತಪಾಸಣೆ, ರಿಯಾಯಿತಿ ದರದಲ್ಲಿ ಚಿಕಿತ್ಸೆಯು ಮುನಿಯಾಲು ಆಯುರ್ವೇದ ಆಸ್ಪತ್ರೆ ಮತ್ತು ಅಜ್ಜರಕಾಡಿನ ಪಾರ್ಕ್ ರೆಸಿಡೆನ್ಸಿಯಲ್ಲಿರುವ ಮುನಿಯಾಲ್ ಫ್ಯಾಮಿಲಿ ಕ್ಲಿನಿಕ್ ನಲ್ಲಿ […]