ಶಿಕ್ಷಕರಿಂದ ಕಲಿತ ಮೌಲ್ಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಿ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ: ನಿಸ್ವಾರ್ಥ ಭಾವದಿಂದ ವಿದ್ಯಾರ್ಥಿಗಳ ಏಳಿಗೆಗಾಗಿ ಶ್ರಮಿಸುವ ಶಿಕ್ಷಕರ ಸೇವೆಯನ್ನು ಶಿಕ್ಷಕರ ದಿನಾಚರಣೆಯಂದು ಮಾತ್ರವಲ್ಲದೇ ಜೀವನದುದ್ದಕ್ಕೂ ನೆನಯುವುದರ ಜೊತೆಗೆ ಅವರಿಂದ ಕಲಿತ ಮೌಲ್ಯಗಳನ್ನು ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ನಗರದ ಕಿದಿಯೂರು ಹೋಟೆಲ್‌ನ ಶೇಷಶಯನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಇವರ ಸಹಯೋಗದಲ್ಲಿ […]

ಪ್ರಾಂಶುಪಾಲರು ಮಕ್ಕಳನ್ನು ನಡೆಸಿಕೊಂಡ ರೀತಿ ಸರಿಯಿರಲಿಲ್ಲ: ಕುಂದಾಪುರ ಶಿಕ್ಷಕನ ಪ್ರಶಸ್ತಿ ತಡೆ ಹಿಡಿದ ವಿಚಾರದ ಕುರಿತು ಶಿಕ್ಷಣ ಸಚಿವ ಪ್ರತಿಕ್ರಿಯೆ.

ಬೆಂಗಳೂರು, ಸೆ.5 : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ರಾಜ್ಯಮಟ್ಟದ ‘ಉತ್ತಮಪ್ರಶಸ್ತಿ’ ಯನ್ನು ಸದ್ಯಕ್ಕೆ ತಡೆಹಿಡಿದಿರುವ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಉಡುಪಿ ಜಿಲ್ಲೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಿ.ಜಿ.ರಾಮಕೃಷ್ಣ ಅವರು ಮಕ್ಕಳನ್ನು ನಡೆಸಿಕೊಂಡ ರೀತಿ ಸಮಸ್ಯೆಯಾಗಿತ್ತು. ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆದ ಪ್ರಚಾರದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಮುಂದಿನ ಸೂಚನೆ ನೀಡುವವರೆಗೂ ಪ್ರಶಸ್ತಿಯನ್ನು ತಡೆಹಿಡಿದಿದೆ. 2021 ರಲ್ಲಿ ರಾಜ್ಯದಲ್ಲಿ ಹಿಜಾಬ್ […]

ಕ್ರಿಕೆಟಿಗ ರವೀಂದ್ರ ಜಡೇಜಾ ಬಿಜೆಪಿ ಸೇರ್ಪಡೆ.

ನವದೆಹಲಿ: ಭಾರತ T20 ವಿಶ್ವಕಪ್ ವಿಜಯದ ನಂತರ ಕ್ರಿಕೆಟಿಗ ರವೀಂದ್ರ ಜಡೇಜಾ ಅವರು T20 ಅಂತರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಹೊಂದಿದ್ದರು. ಇದೀಗ ರವೀಂದ್ರ ಜಡೇಜಾ ಅವರು ಬಿಜೆಪಿಗೆ ಸೇರುವ ಮೂಲಕ ರಾಜಕೀಯ ಪ್ರಯಾಣವನ್ನು ಆರಂಭಿಸಿದ್ದಾರೆ. ಗುಜರಾತ್‌ನ ಬಿಜೆಪಿ ಶಾಸಕರಾಗಿರುವ ಕ್ರಿಕೆಟಿಗನ ಪತ್ನಿ ರಿವಾಬಾ ಜಡೇಜಾ ಈ ಘೋಷಣೆ ಮಾಡಿದ್ದಾರೆ. ಗುರುವಾರ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಶ್ರೀಮತಿ ಜಡೇಜಾ ಅವರು ಬಿಜೆಪಿ ಸದಸ್ಯರಾಗಿರುವ ರವೀಂದ್ರ ಜಡೇಜಾ ಅವರ ಕಾರ್ಡ್‌ನ ಫೋಟೋಗಳನ್ನು ತಮ್ಮ ಜೊತೆಗೆ ಹಂಚಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ ಬಿಜೆಪಿಯ ‘ಸದಾಸ್ಯತಾ ಅಭಿಯಾನ’ […]

ಹೆಬ್ರಿ: ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

ಹೆಬ್ರಿ: ವ್ಯಕ್ತಿಗಳಲ್ಲಿ ಮಾತೇ ಸಾಧನೆ ಆಗಬಾರದು ಸಾಧನೆಯೇ ಮಾತಾಗಬೇಕು. ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ ಅನೇಕ ಸಾಧಕರನ್ನು ಗುರುತಿಸಿ ಕೇಂದ್ರ ಸರ್ಕಾರ ಇಂದು ಪ್ರಶಸ್ತಿಯನ್ನು ನೀಡುತ್ತಿದೆ. ಎಲೆ ಮರೆಯ ಕಾಯಿಯಂತೆ ಶ್ರದ್ಧೆಯಿಂದ ಕೆಲಸವನ್ನು ಮಾಡಿ ನಿವೃತ್ತಿಯಾದ ರಘುಪತಿ ಕಲ್ಕೂರ್ ಇವರನ್ನು ಗುರುತಿಸಿ ಗೌರವಿಸಿದ ಎಸ್.ಆರ್ ಶಿಕ್ಷಣ ಸಂಸ್ಥೆಯ ಈ ಕಾರ್ಯವನ್ನು ಶ್ಲಾಘಿಸುತ್ತೇನೆ. ರಘುಪತಿ ಕಲ್ಕೂರ್ ಅವರು ವೃತ್ತಿಯಲ್ಲಿ ಎದುರಾದ ಅನೇಕ ಸವಾಲುಗಳನ್ನು ಎದುರಿಸಿ ಮಕ್ಕಳ ಬದುಕಿಗಾಗಿ ಶ್ರಮಿಸಿದವರು. ಶಿಕ್ಷಕರು ಹೇಳುವ ಮಾತುಗಳನ್ನು ಶ್ರದ್ಧೆಯಿಂದ ಕೇಳಿ ಮಕ್ಕಳು […]

ಉಡುಪಿಯ ಜಾಹೀರಾತು ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಉಡುಪಿ:ಉಡುಪಿಯ ಜಾಹೀರಾತು ಕಂಪೆನಿಯಲ್ಲಿ ವೀರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9448379989 https://docs.google.com/forms/d/e/1FAIpQLSd0RJe9MRm70Khqh1Ryx-EN8VJODcuqhwWa-ATvjcLuIaXZaA/viewform?usp=sf_link