ಉಡುಪಿ: ಭಾರಿ ವಾಹನಗಳ ಸಂಚಾರ ನಿಷೇಧ.

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ರ ಕಿ.ಮೀ.124.83, ಕಿ.ಮೀ.125.93, ಕಿ.ಮೀ 130.03 ಮತ್ತು ಕಿ.ಮೀ.133.30 ಗಳಲ್ಲಿ ಕಿರು ಸೇತುವೆಗಳು ಶಿಥಿಲಾವಸ್ಥೆಯಲ್ಲಿರುವ ಹಿನ್ನೆಲೆ, ತನಿಕೋಡ್‍ನೊಂದ ಎಸ್.ಕೆ ಬಾರ್ಡರ್‍ವರೆಗೆ (ಕಿ.ಮೀ.123.80 ರಿಂದ ಕಿ.ಮೀ.141.00 ರವರೆಗೆ) ಭಾರಿ ವಾಹನಗಳ ಸಂಚಾರ ನಿಷೇಧಿಸಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶವನ್ನು ಅನುಷ್ಠಾನಗೊಳಿಸಿ, ರಸ್ತೆಯಲ್ಲಿ ಉಡುಪಿ ಜಿಲ್ಲೆಯಿಂದ ಬರುವ ವಾಹನಗಳು ಸಹ ಸಂಚಾರ ಮಾಡುವುದರಿಂದ ರಾ.ಹೆ 169 ರ 123.80 ಕಿ.ಮೀ ತನಿಕೋಡ್ ಗೇಟ್‍ನಿಂದ 141.00 ಕಿ.ಮೀ ಎಸ್.ಕೆ ಬಾರ್ಡರ್‍ವರೆಗೆ ಅಧಿಕ ಭಾರದ ಸರಕು ಸಾಗಣಿಕೆ […]

ನಿಮಗೆ ಶ್ರವಣ ಸಮಸ್ಯೆ ಇದೆಯೇ.. ಹಾಗಾದರೆ ಇಲ್ಲಿದೆ ಸೂಕ್ತ ಪರಿಹಾರ.

ಉಡುಪಿ : ಶ್ರವಣದಲ್ಲಿ ಏನಾದರೂ ಸಮಸ್ಯೆಗಳು ಕಂಡುಬಂದರೆ ಉಡುಪಿಯ ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರ್ ಗೆ ಭೇಟಿ ನೀಡಿ, ನಿಮ್ಮ ಅನುಮಾನವನ್ನು ಬಗೆಹರಿಸಿಕೊಂಡು ನಿಮ್ಮ ಜೀವನವನ್ನು ಮತ್ತು ಸಂಬಂಧಗಳನ್ನು ಬಲಪಡಿಸಿಕೊಳ್ಳಿ. ◾ಪದಗಳನ್ನು ಪುನರಾವರ್ತಿಸಲು ನೀವು ಆಗಾಗ್ಗೆ ಕೇಳುತ್ತೀರಾ?◾ನಿಮ್ಮ ಕಿವಿಯಲ್ಲಿ ಯಾವಾಗಲೂ ಶಬ್ದವು ಧ್ವನಿಸುತ್ತಿರುತ್ತದೆಯೇ ?◾ನಿಮ್ಮ ಶ್ರವಣ ಸಮಸ್ಯೆಯೂ ಹೊಸ ಜನರನ್ನು ಭೇಟಿ ಯಾದಾಗ ನೀವು ಮುಜುಗರ ಕೊಳ್ಳಗಾಗುವಂತೆ ಭಾವಿಸುತ್ತದೆಯೇ ?◾ನಿಮ್ಮ ಶ್ರವಣ ಸಮಸ್ಯೆಯೂ ನಿಮ್ಮನು ಖಿನ್ನತೆಗೆ ಒಳಪಡಿಸುತ್ತದೆಯೇ?◾ನೀವು ಸಾಮಾಜಿಕ ಸಂವಹನದಲ್ಲಿ ಪಾಲ್ಗೊಳ್ಳುವಾಗ ಸಮಸ್ಯೆಯನ್ನು ಎದುರಿಸುತಿದ್ದೀರಾ?◾ನೀವು ಯಾವುದಾದರೂ […]

ಮಂಗಳೂರು: ರೋಹನ್ ಸಿಟಿ ಬಿಜೈ ವಾಣಿಜ್ಯ ಮಳಿಗೆಗಳಲ್ಲಿ ವಿನಿಯೋಗಿಸಿ: ಖಚಿತ 7.50% ಪ್ರತಿಫಲವನ್ನು ಪಡೆಯಿರಿ.

ಮಂಗಳೂರು: ‘ರೋಹನ್ ಸಿಟಿ’ ರೋಹನ್ ಕಾರ್ಪೊರೇಷನ್ ಸಂಸ್ಥೆಯ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. ಈ ಯೋಜನೆಯು 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು, ಒಟ್ಟು 546 ಅಪಾರ್ಟ್‍ಮೆಂಟ್‍ಗಳನ್ನು ಒಳಗೊಂಡಿದೆ. ಡ್ಯುಪ್ಲೆಕ್ಸ್:1405 ರಿಂದ 1505 ಚದರ ಅಡಿ 3 ಬಿಎಚ್‍ಕೆ.1075 ರಿಂದ 1135 ಚದರ ಅಡಿ 2 ಬಿಎಚ್‍ಕೆ.700 ರಿಂದ 815 ಚದರ ಅಡಿ 1 ಬಿಎಚ್‍ಕೆ.ಫ್ಲ್ಯಾಟುಗಳನ್ನು ಹೊಂದಿದೆ. ವಸತಿ ಪ್ರದೇಶದ ಜೊತೆಗೆ, 284 ಪ್ರತ್ಯೇಕ ಘಟಕಗಳನ್ನು ಒಳಗೊಂಡಿರುವ 2 ಲಕ್ಷ ಚದರ […]

ಜಿಲ್ಲೆಯಲ್ಲಿ ಆಗುವ ಜನನ ಹಾಗೂ ಮರಣ ನೋಂದಣಿಯನ್ನು ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ಮಾಡಿಸಬೇಕು: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಆಗುವ ಜನನ ಮತ್ತು ಮರಣ ನೊಂದಣಿಯನ್ನು “ಜನನ ಮರಣ ನೋಂದಣಿಅಧಿನಿಯಮಗಳ” ಅನ್ವಯ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ ಮರಣಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಹಾಗೂ ಮರಣ ದಾಖಲಾತಿಗಳು ಭವಿಷ್ಯದಲ್ಲಿ ಜೀವನದ ಅವಧಿಯ ಪ್ರತೀ ಹಂತದಲ್ಲಿಯೂ ಅವಶ್ಯಕತೆ ಇರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸೂಕ್ತ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ […]

ಉಡುಪಿ ಶಾಸಕರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ.

ಉಡುಪಿ: ಉಡುಪಿ ಜಿಲ್ಲೆಯ ಬಗ್ಗೆ ನಿರಂತರವಾಗಿ ನಿರ್ಲಕ್ಷ್ಯ ವಹಿಸುತ್ತ ಸ್ವಪಕ್ಷದ ಕಾರ್ಯಕರ್ತರ ಗೋ ಬ್ಯಾಕ್ ಅಭಿಯಾನಕ್ಕೆ ಓಡೋಡಿ ಬಂದು ಕಾಟಾಚಾರಕ್ಕೆ ಪ್ರಾಕೃತಿಕ ವಿಕೋಪದ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡೆಯನ್ನು ಖಂಡಿಸಿದ ಉಡುಪಿ ಶಾಸಕರ ವಿರುದ್ಧ ಕಾಂಗ್ರೆಸ್ ಮುಖಂಡರು ಹತಾಶ ಹೇಳಿಕೆ ನೀಡುತ್ತಿದ್ದು, ಶಾಸಕರ ಕಾರ್ಯ ವೈಖರಿ, ಹಾಗೂ ಸಿದ್ಧಾಂತ ವಿಚಾರದಲ್ಲಿನ ಬದ್ಧತೆಯ ಬಗ್ಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾ ರಮೇಶ್ […]