ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ

ತೀರ್ಥಹಳ್ಳಿ: ಬೆಂಗಳೂರಿನಲ್ಲಿ ಬುಧವಾರ ತಾಲೂಕು ದಂಡಾಧಿಕಾರಿ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತಹಶೀಲ್ದಾರ್ ಜಕ್ಕಣ್ಣ ಗೌಡರ್ ನ್ಯಾಯಾಲಯದ ಕೆಲಸ ಕಾರ್ಯಗಳ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ: ಪ್ರತ್ಯೇಕ ಪ್ರಕರಣ – ನಾಲ್ವರ ಆತ್ಮಹತ್ಯೆ

ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ: ಕುಂದಾಪುರ: ತಾಯಿಯ ಅನಾರೋಗ್ಯದ ಚಿಂತೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕಂದಾವರ ಗ್ರಾಮದ ನವೀನ ಡಿಸೋಜ(42) ಎಂಬವರು ಅ.15ರಂದು ಮಧ್ಯಾಹ್ನ ವೇಳೆ ಮನೆಯಲ್ಲಿ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷ ಸೇವಿಸಿ ಆತ್ಮಹತ್ಯೆ:ಕೋಟ: ಮಗನ ಅಕಸ್ಮಿಕ ಸಾವಿನಿಂದ ಖಿನ್ನತೆಗೆ ಒಳಗಾಗಿ ಅ.14ರಂದು ಸಂಜೆ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದ ಆವರ್ಸೆ ಗ್ರಾಮದ ಕಿರಾಡಿ ಬೆಳ್ಳ(65) […]
ಮಂಗಳೂರು: ಮರಕ್ಕೆ ಸ್ಕೂಟರ್ ಡಿಕ್ಕಿ; ಸವಾರ ಸಾವು

ಮಂಗಳೂರು: ಮಾಡೂರು ಶಾರದಾ ನಗರದಲ್ಲಿ ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಮಾಡೂರು ನಿವಾಸಿ ನಾಗೇಶ್(51) ಮೃತರು. ಮೃತರು ಖಾಸಗಿ ಆಸ್ಪತ್ರೆಯಲ್ಲಿ ಬಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ರಜೆಯಿದ್ದ ಕಾರಣ ಮನೆಗೆ ಬೀರಿ ಪೇಟೆಯಿಂದ ತೆಂಗಿನಕಾಯಿ ತರುವ ಸಂದರ್ಭ ಘಟನೆ ಸಂಭವಿಸಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಎಎಸ್ಐ ಯಶವಂತ್ ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಣಿಪಾಲ MSDCಯಲ್ಲಿ “ರೆಟ್ರೋ ಫಿಟ್ಟಿಂಗ್ ಆಫ್ ಟು ವೀಲರ್” ಒಂದು ವಾರದ ಅಲ್ಪಾವಧಿ ಕೋರ್ಸ್

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಪೈ ಫೌಂಡೇಶನ್ನ ಒಂದು ಘಟಕ)ದಲ್ಲಿ ವಿದ್ಯಾರ್ಥಿಗಳಿಗೆ ‘ರೆಟ್ರೋ ಫಿಟ್ಟಿಂಗ್ ಆಫ್ ಟು ವೀಲರ್’ ಅಲ್ಪಾವಧಿ ಕೋರ್ಸ್’ಗೆ ಆರ್ಜಿ ಅಹ್ವಾನಿಸಲಾಗಿದೆ. ಪ್ರಯೋಜನಗಳು: ಕೋರ್ಸ್ ಅವಧಿಯು 1 ವಾರ (15ಗಂಟೆ) ಆಗಿದ್ದು, ಅಕ್ಟೋಬರ್ 22ರಂದು ಪ್ರಾರಂಭವಾಗಲಿದೆ. ತರಗತಿಗಳು ಸಂಜೆ 4 ರಿಂದ 6 ಗಂಟೆಯವರೆಗೆ ಇರಲಿವೆ. ಈ ಕೋರ್ಸಿಗೆ ಶೇಕಡ 50ರಷ್ಟು ರಿಯಾಯಿತಿ ನೀಡಲಾಗಿದೆ. ಸೀಮಿತ ಸೀಟುಗಳು ಮಾತ್ರ ಲಭ್ಯಿಇವೆ. ಸಂಪರ್ಕಿಸಿ:📞ಫೋನ್: 8123163934/8123163935🌐ವೆಬ್ಸೈಟ್: https://msdcskills.org📍ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಎಲೆಕ್ಟ್ರಿಕ್ ವೆಹಿಕಲ್, […]
ಸಿಎನ್ಜಿ ಇಂಧನ ಕೊರತೆ; ಆಟೋ ಚಾಲಕರ ಪರದಾಟ!

ಉಡುಪಿ: ಸಿಎನ್ಜಿ ಇಂಧನ ಆಧಾರಿತ ವಾಹನಗಳು ಮತ್ತು ರಿಕ್ಷಾಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ, ಅದಕ್ಕೆ ಅನುಗುಣವಾಗಿ ಸಿಎನ್ಜಿ ಪೂರೈಕೆ ಬಂಕ್ ಗಳು ಇಲ್ಲದ ಕಾರಣ ಆಗಾಗ ಇಂಧನ ಕೊರತೆ ಎದುರಾಗುತ್ತಿದೆ. ಇದರಿಂದಾಗಿ ರಿಕ್ಷಾ ಚಾಲಕರು ಭಾರೀ ಸಮಸ್ಯೆ ಎದುರಿಸುತ್ತಿದ್ದು, ಬಾಡಿಗೆ ಬಿಟ್ಟು ಬಂಕ್ಗಳ ಮುಂದೆ ದಿನವಿಡೀ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಕೆಲವು ದಿನಗಳಿಂದ ಈ ಸಮಸ್ಯೆ ಇನ್ನಷ್ಟು ಬಿಗಡಾಯಿಸಿದ್ದು, ವಾಹನ ಚಾಲಕರು ಗ್ಯಾಸ್ ಸಿಗದೆ ಪರದಾಡುವಂತಾಗಿದೆ. ಇದಕ್ಕೆ ದಸರಾ ರಜೆ ನಿಮಿತ್ತ ರಾಜ್ಯದ […]