ಉಡುಪಿ: ಬಿ.ಆರ್. ಕಂಪೆನಿಯ ಆಸ್ಪತ್ರೆ ನಿರ್ಮಾಣಕ್ಕೆ ತೆಗೆದ ಗುಂಡಿ ಮುಚ್ಚುವಂತೆ ಆಗ್ರಹ

ಉಡುಪಿ: ಅರ್ಧಕ್ಕೆ ಸ್ಥಗಿತಗೊಂಡಿರುವ ಉಡುಪಿ ನಗರದ ಹೃದಯಭಾಗದ ಕೆ.ಎಂ.ಮಾರ್ಗದಲ್ಲಿರುವ ಬಿ.ಆರ್. ಕಂಪೆನಿಯ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ತೆಗೆದಿರುವ ಬಹೃತ್ ಗುಂಡಿಯನ್ನು ಮುಚ್ಚುವಂತೆ ಆಗ್ರಹಿಸಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಇಂದು ವಿನೂತನವಾದ ಅಪಾಯಕಾರಿ ಪ್ರತಿಭಟನೆ ನಡೆಸಿದರು. ಕ್ರೇನ್ ಮೂಲಕ ಮಳೆ ನೀರು ತುಂಬಿರುವ ಅಪಾಯಕಾರಿ ಗುಂಡಿಯ ನೀರಿನ ಮಟ್ಟದವರೆಗೆ ಇಳಿದ ಒಳಕಾಡು ಅವರು, ಎಚ್ಚರಿಕೆಯ ಫಲಕವನ್ನು ನೀರಿನಲ್ಲಿ ತೇಲಿಬಿಟ್ಟರು. ಉಡುಪಿ ನಾಗರಿಕ ಸಮಿತಿಯ ನೇತೃತ್ವದಲ್ಲಿ ಈ ವಿನೂತನ ಪ್ರತಿಭಟನೆ ನಡೆಯಿತು. ತಮಟೆ, ಎಚ್ಚರಿಕೆಯ […]

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಲೇವಡಿ ಮಾಡಿರುವ ಶಾಸಕ ಯಶಪಾಲ್ ಸುವರ್ಣ ಅವರು ಓರ್ವ ಮಹಿಳಾ ಸಚಿವೆಯ ಬಗ್ಗೆ ಮಾತನಾಡುವಾಗ ಯಾವ ಭಾಷೆ ಬಳಸಬೇಕು ಎನ್ನುವ ಕನಿಷ್ಠ ಜ್ಞಾನ ಕೂಡ ಇಲ್ಲ.

ಉಡುಪಿ: ಉಡುಪಿ ಜಿಲ್ಲೆಯ ಕರಾವಳಿ ಹಾಗೂ ಇತರ ಭಾಗಗಳಲ್ಲಿ ಮಳೆಯಿಂದಾಗಿ ಹಾನಿಗೆ ಒಳಗಾದ ಸಮುದ್ರ ಕೊರೆತದ ತೀರ ಪ್ರದೇಶಗಳು, ನೆರೆ ಹಾನಿಗೊಳಗಾದ ಪ್ರದೇಶಗಳ ಪರಿಸ್ಥಿತಿ ಹಾಗೂ ಅಲ್ಲಿನ ಜನಜೀವನದ ಪರಿಸ್ಥಿತಿಯ ವೀಕ್ಷಣೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪ್ರವಾಸ ಕಾರ್ಯಕ್ರಮಗಳನ್ನು ‘ ಚಿಕ್ಕಿ ತಿಂದು ಹೋದ ಹಾಗೆ ಆಯಿತು ‘ ಎಂದು ಲೇವಡಿ ಮಾಡಿರುವ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರ ಹೇಳಿಕೆ ರಾಜಕೀಯದಲ್ಲಿ ಅವರಿನ್ನೂ ಎಳಸು ಎನ್ನುವುದು ಎತ್ತಿ ತೋರಿಸುತ್ತದೆ. ಒರ್ವ […]

ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ) ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದಿಂದ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಲ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ವೆಬ್‌ಸೈಟ್ kacdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: […]

ಉಡುಪಿ: ಶಿವಶರಣರ ವಚನ ಸಾಹಿತ್ಯದಿಂದ ಸಮಾಜ ಸುಧಾರಣೆ: ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್

ಉಡುಪಿ: ಶಿವಶರಣರು ರಚಿಸಿದ ವಚನ ಸಾಹಿತ್ಯಗಳು ಬರೀ ಸಾಮಾಜಿಕವಾಗಿ ಮಾತ್ರವಲ್ಲದೆ ಸಾಹಿತ್ಯಿಕ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಸಮಾಜ ಸುಧಾರಣೆಗೆ ಮಾದರಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಸೋಮವಾರ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣರವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಪ್ಪಣ್ಣರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ […]

ಪತ್ರಿಕೋದ್ಯಮವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿಯ ರೀತಿಯಲ್ಲಿ ಕೆಲಸ ಮಾಡುತ್ತಿದೆ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಪತ್ರಿಕೋದ್ಯಮವು ಸಮಾಜದಲ್ಲಿನ ಜನಸಾಮಾನ್ಯರ ಆಗು-ಹೋಗುಗಳು ಸೇರಿದಂತೆ ಪ್ರತಿಯೊಂದು ಆಯಾಮಗಳನ್ನು ರಚನಾತ್ಮಕವಾಗಿ ರಚಿಸಿ, ಅವರುಗಳ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿಯ ರೀತಿಯಲ್ಲಿ ದಿನನಿತ್ಯ ಕೆಲಸ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನಗರದ ಅಜ್ಜರಕಾಡಿನ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ […]