ಮುಂಬೈನಲ್ಲಿ ದಿಢೀರನೆ ಸುರಿದ ಭಾರೀ ಮಳೆ, 8 ಮಂದಿ ಮೃತ್ಯು.

ಮುಂಬೈ: ಮುಂಬೈನಲ್ಲಿ ಸೋಮವಾರ ಸಂಜೆ ದಿಢೀರನೆ ಬೀಸಿದ ಧೂಳಿನ ಬಿರುಗಾಳಿ ಭಾರೀ ಅನಾಹುತ ಸೃಷ್ಟಿಸಿದೆ. ಬಲವಾದ ಗಾಳಿ ಬೀಸಿ ದೊಡ್ಡ ದೊಡ್ಡ ಬಿಲ್ ಬೋರ್ಡ್ ಉರುಳಿ ಬಿದ್ದು 8 ಜನರು ಮೃತಪಟ್ಟಿದ್ದು, 65 ಜನರು ಗಾಯಗೊಂಡಿದ್ದಾರೆ. ಗಾಳಿಯ ಬೆನ್ನಲ್ಲೇ ಮಳೆ ಕೂಡಾ ಸುರಿದಿದೆ.ಮಳೆ ಸುರಿದ ಕಾರಣ ಕೆಲ ಗಂಟೆ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಮುಂಜಾಗ್ರತಾಕ್ರಮವಾಗಿ ಮುಂಬೈನ ಕೆಲವೆಡೆ ಮೆಟ್ರೋ, ಸ್ಥಳೀಯ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ವಿಮಾನ ಸಂಚಾರದಲ್ಲಿಯೂ ವ್ಯತ್ಯಯ ಉಂಟಾಗಿದೆ. ಧೂಳು ಮಿಶ್ರಿತ ಬಿರುಗಾಳಿ ಬೀಸುತ್ತಿದ್ದಂತೆ ಸುತ್ತಲು […]

ಮಣಿಪಾಲ್ ಎಂಐಟಿಯ 3ನೇ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ.

ಮಣಿಪಾಲ: ಎನ್ಎಸ್ಎಸ್ ಚಟುವಟಿಕೆಗಳು ಶೈಕ್ಷಣಿಕ ಅಧ್ಯಯನಕ್ಕೆ ಮೌಲ್ಯವನ್ನು ಸೇರಿಸುತ್ತವೆ ಎಂದು ಶ್ರೀ ಶ್ರೀಧರ್ ಜಿ, (ಯುವ ಅಧಿಕಾರಿ, ಎನ್ಎಸ್ಎಸ್ ನಿರ್ದೇಶನಾಲಯ ಬೆಂಗಳೂರು.) ಅವರು ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಮಾಹೆ)ಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ಸ್ವಯಂಸೇವಕರಿಗೆಮಣಿಪಾಲದಲ್ಲಿ ಮೇ 13 ರಿಂದ ಮೇ 20 ರವರೆಗೆ ಆಯೋಜಿಸಿದ್ದ ವಿಶೇಷ ಶಿಬಿರವನ್ನ ಉದ್ಘಾಟಿಸಿ ಭಾಷಣ ಮಾಡಿದರು. ಮಾಜಿ ಕರ್ನಾಟಕ ರಾಜ್ಯ ಎನ್‌ಎಸ್‌ಎಸ್ ಕಾರ್ಯಕ್ರಮ ಸಮನ್ವಯ ಅಧಿಕಾರಿ ಡಾ.ಗಣನಾಥ್ ಎಕ್ಕಾರ್ ಅವರು ವಿದ್ಯಾರ್ಥಿ ಸಮೂಹವನ್ನು ಪರಿಸರ ಸೇವೆಗೆ ಪ್ರೇರೇಪಿಸುವ ಕುರಿತು ಪ್ರಮುಖ […]

ಶಂಕರಾಚಾರ್ಯರ ಅದ್ವೈತ ತತ್ವ ಮತ್ತು ಸಿದ್ಧಾಂತಗಳು ಸರ್ವಕಾಲಕ್ಕೂ ಪ್ರಸ್ತುತ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಆಧ್ಯಾತ್ಮಿಕ ಚಿಂತಕರಾದ ಶಂಕರಾಚಾರ್ಯರ ಅದ್ವೈತ ತತ್ವ ಮತ್ತು ಸಿದ್ಧಾಂತಗಳು ಸರ್ವಕಾಲಕ್ಕೂ ಪ್ರಸ್ತುತ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ಶಂಕರಾಚಾರ್ಯರು ಅದ್ವೆöÊತ ಸಿದ್ಧಾಂತವನ್ನು ದೇಶದಾದ್ಯಂತ ಪ್ರಚಾರ ಮಾಡುವ ಸಂದರ್ಭದಲ್ಲಿ ಅನೇಕ ಮಠಗಳನ್ನು ಸ್ಥಾಪಿಸಿದ್ದಾರೆ. ಅವುಗಳಲ್ಲಿ […]

ಮೇ​15: ಉಡುಪಿಯಲ್ಲಿ ಖ್ಯಾತ ವಯೊಲಿನ್ ವಾದಕಿ ಗಂಗಾ ಶಶಿಧರನ್​.

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಉಡುಪಿಯ ಪ್ರಸಿದ್ಧ ಗಾಂಧಿ ಆಸ್ಪತ್ರೆ ​ಮೂವತ್ತನೆ ಸಂವತ್ಸರಕ್ಕೆ ಪಾದಾರ್ಪಣೆ ಮಾಡುತ್ತಿರುವ ಸುಸಂದರ್ಭದಲ್ಲಿ ​ಹಾಗೂ ​ಪಂಚಮಿ ಟ್ರಸ್ಟ್, ಪಂಚಲಹರಿ ಪೌ೦ಡೇಶನ್ ಪ್ರಾಯೋಜಕತ್ವದಲ್ಲಿ ಮೇ​15ರಂದು ​ಖ್ಯಾತ ಬಾಲಕಿ ಗಂಗಾ ಶಶಿಧರನ್ ಗುರುವಾಯೂರು ಹಾಗೂ ಅವರ ಗುರು ಅನುರೂಪ್ ಗುರುವಾಯೂರು ಮತ್ತು​ ತಂಡದವರಿಂದ ವಯೊಲಿನ್ ವಾದನ ನಡೆಯಲಿದೆ​. ತ್ರಿಶೂರ್ ನ ಹತ್ತು ವರ್ಷದ ಪುಟ್ಟ ಬಾಲಕಿ ಗಂಗಾ ಶಶಿಧರನ್ ವಯೊಲಿನ್ ವಾದನದ ಮೂಲಕ ನಾಡಿನ ಸಮಸ್ತರ ಗಮನ ಸೆಳೆದಿದ್ದಾಳೆ. ಸತತ ಪರಿಶ್ರಮದ ಮೂಲಕ […]

ರೊನಿ ಅರುಣ್ ಬರೆದ ‘ರಿಕ್ಷಾ ಡೈರಿ’ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ ಪಶ್ಚಿಮ್ ಟ್ರಸ್ಟ್ ಸಭಾಂಗಣದಲ್ಲಿ ಮೇ 09 ರಂದು ಲೋಕಾರ್ಪನೆಗೊಂಡಿತು. ಹಿರಿಯ ಲೇಖಕಿ ಮತ್ತು ಪ್ರಕಾಶಕಿ ಗ್ಲೇಡಿಸ್ ರೇಗೊ ಇವರು ಪುಸ್ತಕ ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿ ಪಶ್ಚಿಮ್ ಟ್ರಸ್ಟ್ ಇದರ ನಿರ್ದೇಶಕ ರೋಹಿತ್ ಸಾಂಕ್ತುಸ್ ಶುಭ ಹಾರೈಸಿದರು. ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ, ಅಧ್ಯಕ್ಷ ಲುವಿ ಪಿಂಟೊ, ತೆಲೊಕಾ ಸಂಸ್ಥೆಯ ನಿರ್ದೇಶಕಿ ಕ್ಲಾರಾ ಡಿಕುನ್ಹಾ ಉಪಸ್ಥಿತರಿದ್ದರು. […]