ಸುಳ್ಯ: ಕಂಡೆಕ್ಟರ್ಗೆ ಎದೆ ನೋವು; ಆಸ್ಪತ್ರೆಗೆ ಸಾಗಿಸುವ ವೇಳೆ ಮೃತ್ಯು

ಸುಳ್ಯ: ತೊಡಿಕಾನ ಸರ್ವಿಸ್ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಸೋಮವಾರ ವರದಿಯಾಗಿದೆ. ಗುರು ಪ್ರಸಾದ್ ಕುಂಚಡ್ಕ(30) ಸಾವನ್ನಪ್ಪಿದ ಚಾಲಕ ಎಂದು ತಿಳಿದು ಬಂದಿದೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸ್ಕೌಟ್ ಆಯುಕ್ತರಾಗಿ ಜನಾರ್ದನ್ ಕೊಡವೂರು ಆಯ್ಕೆ .

ಉಡುಪಿ: ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾಗಿ ಸಂಘಟಕ, ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ನಿಯೋಜಿಸಿ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಈಗಾಗಲೇ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲಾ ಸ್ಕೌಟ್ ಆಯುಕ್ತರನ್ನಾಗಿ ಛಾಯಾಚಿತ್ರ ಪತ್ರಕರ್ತ ಹಾಗೂ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಅವರನ್ನು ಜಯಕರ ಶೆಟ್ಟಿ ಇಂದ್ರಾಳಿ ನೇಮಿಸಿದ್ದಾರೆ.
ಉಡುಪಿ:ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ರಂಗಪೂಜಾ ಮಹೋತ್ಸವ ಸಂಪನ್ನ

ಉಡುಪಿ:ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವದ ವಿಜಯದಶಮಿಯ ಪರ್ವಕಾಲದಲ್ಲಿ ಮಹಾ ರಂಗಪೂಜ ಮಹೋತ್ಸವ ನೆರವರಿತು.. ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿಮಾರ್ಗದರ್ಶನದಲ್ಲಿ ವೇದಮೂರ್ತಿ ಸರ್ವೇಶ್ ತಂತ್ರಿಗಳು ನಡೆಸಿಕೊಟ್ಟ ಮಹಾ ರಂಗಪೂಜೆಯಲ್ಲಿ ತಂತ್ರಿಗಳು ದೇವಿಯ ಧ್ಯಾನವನ್ನು ಉಲಿದರು.. ದೀಪಾರಾದನೆಯ ಸಹಿತ ನೆರವೇರುವ ರಂಗ ಪೂಜೆಯ ಮಹತ್ವ ವನ್ನು ನೆರೆದ ಭಕ್ತ ಸಮೂಹಕ್ಕೆ ಮನ ಮುಟ್ಟುವಂತೆ ವರ್ಣಿಸಿದರು… ರಂಗಪೂಜೆಯಲ್ಲಿ ತಪ್ತತ್ ದೇವತೆಗಳಿಗೆ ಉಣಬಡಿಸಿದ ಅಪೂಪ ಕದಳಿ ಸಹಿತ ವಾದ ಅನ್ನ […]
ಅಕ್ರಮ ಬಾಂಗ್ಲಾ ವಲಸಿಗರ ಜಾಲದ ಬಗ್ಗೆ ಎನ್ಐಎ ತನಿಖೆ ನಡೆಸಿ: ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ಮಲ್ಪೆಯಲ್ಲಿ 7 ಮಂದಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್ ಐ ಎ ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ. ಕರಾವಳಿ ಜಿಲ್ಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವ ಬಗ್ಗೆ ಪೊಲೀಸ್ ಇಲಾಖೆಯ ಪ್ರಾಥಮಿಕ ತನಿಖೆಯಲ್ಲಿ ಕಂಡು ಬರುತ್ತಿದ್ದು, ಕರಾವಳಿ ಭಾಗದ ಜನತೆ ಇದರಿಂದ […]
ನಾಳೆ (ಅ.15) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉಡುಪಿಗೆ – ‘ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ’ದಲ್ಲಿ ಭಾಗಿ; ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವು ನಾಳೆ ಅ.15 ಮಂಗಳವಾರ ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆಯ […]