ಉಡುಪಿ: ಮಹಾಮಳೆಗೆ ಮನೆಯ ಗೋಡೆ ಕುಸಿತ; ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡ ಮನೆಯವರು

ಉಡುಪಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಉಡುಪಿ ಕಡೆಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಕಟ್ಟೆಗುಡ್ಡೆಯ ಕುತ್ಪಾಡಿ ಶಾರದಾ ಪೂಜಾರ್ತಿ ಎಂಬವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಹತ್ತು ನಿಮಿಷದ ಮೊದಲು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.ಸುಮಾರು 30 ವರ್ಷಗಳ ಹಿಂದಿನ ಮನೆಯಾಗಿದ್ದು, ಕುಟುಂಬಸ್ಥರು ಮಣ್ಣಿನ ಗಾರೆ ಮಾಡಿ ಮನೆ ನಿರ್ಮಾಣ ಮಾಡಿದ್ದರು. ಈ ಮನೆಯಲ್ಲಿ ಒಟ್ಟು 10 ಮಂದಿ ವಾಸ ಮಾಡುತ್ತಿದ್ದರು. ಮನೆಯೊಳಗಿದ್ದ ದಾಖಲೆ […]

ಮೈದುಂಬಿ‌ ಹರಿಯುತ್ತಿರುವ ಉಡುಪಿ ನಗರದ ಜೀವನದಿ ಸ್ವರ್ಣೆ

ಉಡುಪಿ: ಪಶ್ಚಿಮಘಟ್ಟ ಹಾಗೂ ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದರಿಂದ ಉಡುಪಿ ನಗರದ ಜೀವನದಿ ಸ್ವರ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮೇ ತಿಂಗಳ ಅಂತ್ಯದಲ್ಲಿ ಬತ್ತಿಹೋಗಿದ್ದ ಸ್ವರ್ಣೆ, ಇದೀಗ ಮೈದುಂಬಿ ಹರಿಯುತ್ತಿದ್ದಾಳೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಸ್ವರ್ಣಾ ನದಿ ಸಂಪೂರ್ಣ ಭರ್ತಿಯಾಗಿದೆ. ನದಿ ತುಂಬಿ ಹರಿಯುತ್ತಿರುವುದರಿಂದ ಕೃಷಿಕರಲ್ಲಿ ಮಂದಹಾಸ ಮೂಡಿದರೆ, ತಗ್ಗು ಪ್ರದೇಶದ ಜನರಲ್ಲಿ ಆತಂಕ ಶುರುವಾಗಿದೆ. ಹೊರ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ಮನೆಗೆ ನೀರು ನುಗ್ಗುವ ಭೀತಿ […]

ಅಂಕೋಲ ಶಿರೂರು ಗುಡ್ಡ ಕುಸಿತ ಪ್ರಕರಣ: ಐದು ವರ್ಷದ ಬಾಲಕಿಯ ಮೃತದೇಹ ಪತ್ತೆ.

ಕಾರವಾರ: ಅಂಕೋಲ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ. ಮೃತ ಬಾಲಕಿಯನ್ನು ಆವಂತಿಕ (5) ಎಂದು ಗುರುತಿಸಲಾಗಿದೆ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ ಮೃತದೇಹ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದು 20ಕ್ಕೂ ಹೆಚ್ಚು ಜನರು ಮೃತ ಆಗಿರುವ ಬಗ್ಗೆ ಶಂಕೆ ವ್ಯಕ್ತ ಆಗುವುದರ ಜೊತೆಗೆ ಇನ್ನಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆ ಘಟನಾ ಸ್ಥಳಕ್ಕೆ ತಜ್ಞರು […]

ಅಮೃತ ಮಹೋತ್ಸವದ ಪ್ರಯುಕ್ತ ಸತ್ಯನಾಥ್ ಸ್ಟೋರ್ಸ್ನಲ್ಲಿ ವಿ‍ಶೇಷ ಕೊಡುಗೆ

ಉಡುಪಿ, ಜು.18: ರಾಜ್ಯದ ಜನರ ಅಚ್ಚುಮೆಚ್ಚಿನ ಸತ್ಯನಾಥ್ ಸ್ಟೋರ್ಸ್ ನಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಒಂದು ಸೀರೆ ಖರೀದಿಸಿದಲ್ಲಿ ಇನ್ನೊಂದು ಸೀರೆಗೆ ಕೇವಲ ರೂ. 75 ಮಾತ್ರ, ಒಂದು ಶರ್ಟ್ ಖರೀದಿಸಿದಲ್ಲಿ ಇನ್ನೊಂದು ಶರ್ಟ್ ಗೆ ಕೇವಲ ರೂ. 75 ಮಾತ್ರ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಹೇರೂರು ಉಗ್ಗೇಲುಬೆಟ್ಟು ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರ ದಿಮ್ಮಿಗಳ ತೆರವು

ಉಡುಪಿ: ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಸೀತಾನದಿ ಉಕ್ಕಿಹರಿಯುತ್ತಿದ್ದು, ರಭಸವಾಗಿ ಹರಿದು ಬರುವ ನೀರಿನ‌ ಜೊತೆ ಕಸ, ತ್ಯಾಜ್ಯ, ಮರದ ದಿಮ್ಮಿಗಳು ತೇಲಿ ಬರುತ್ತಿವೆ.ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಹೇರೂರು ಉಗ್ಗೇಲುಬೆಟ್ಟು ಎಂಬಲ್ಲಿರುವ ಕಿಂಡಿ ಅಣೆಕಟ್ಟಿಗೆ ಬಾರಿ ಗಾತ್ರದ ಮರದ ದಿಮ್ಮಿಗಳು ಸಿಲುಕಿತ್ತು. ಹರಿದು ಬರುವ ನೀರಿನಲ್ಲಿ, ದೊಡ್ಡ ಪ್ರಮಾಣದ ಮರದ ದಿಮ್ಮಿಗಳು ಬಂದು ಅಣೆಕಟ್ಟು ಪ್ರದೇಶದಲ್ಲಿ ಸಿಲುಕುವುದು ಸಾಮಾನ್ಯ. ಇದೀಗ ಅಣೆಕಟ್ಟಿಗೆ ಸಿಲುಕಿದ ಮರಗಳನ್ನು ಪಂಚಾಯತ್ ಅಧಿಕಾರಿಗಳು ಸದಸ್ಯರ ನೆರವಿನೊಂದಿಗೆ ತೆರವು ಮಾಡಿದ್ದಾರೆ. ಅಧಿಕಾರಿಗಳ […]