ಕಾಪು: ರಸ್ತೆ ದಾಟುವ ವೇಳೆ ಪಿಕ್ಅಪ್ ವಾಹನ ಢಿಕ್ಕಿ: ವ್ಯಕ್ತಿ ಮೃತ್ಯು.

ಕಾಪು: ರಾಷ್ಟ್ರೀಯ ಹೆದ್ದಾರಿ 66, ಕೊಪ್ಪಲಂಗಡಿ ಸಮೀಪ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಪಿಕ್ಅಪ್ ವಾಹನ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಅ.12ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಶಂಶುದ್ದೀನ್ ಮಹಮ್ಮದ್ ಆಲಿ ಸಾಹೇಬ್ ಎಂದು ಗುರುತಿಸಲಾಗಿದೆ. ಇವರು ಡಿವೈಡರನ್ನು ದಾಟಿ ಮಲ್ಲಾರು ಕೋಟೆ ರಸ್ತೆ ಕಡೆಗೆ ಹೋಗಲು ರಸ್ತೆಯ ಅಂಚಿನಲ್ಲಿ ನಿಂತುಕೊಂಡಿರುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಪಿಕ್ಅಪ್ ವಾಹನ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]
ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ನಿರೂಪಣೆಗೆ ಗುಡ್ ಬೈ ಹೇಳಿದ ಕಿಚ್ಚ:ವೀಕ್ಷಕರಿಗೆ ಬಿಗ್ ಶಾಕ್.

ಬೆಂಗಳೂರು: ಬಿಗ್ ಬಾಸ್ ಕನ್ನಡ 11ನೇ ಸೀಸನ್ ಸಾಗುತ್ತಿದೆ. ಕಿಚ್ಚ ಸುದೀಪ್ ನಡೆಸಿಕೊಡುವುದರಿಂದ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಕರುನಾಡಿನಲ್ಲಿ ದೊಡ್ಡ ವೀಕ್ಷಕರಿದ್ದಾರೆ. ಬಿಗ್ ಬಾಸ್ ಸೀಸನ್-11 ಈ ಬಾರಿ ಆರಂಭವಾಗುವ ಮುನ್ನವೇ ನಿರೂಪಕರ ವಿಚಾರದಲ್ಲಿ ಭಾರೀ ಸದ್ದು ಮಾಡಿತ್ತು. ಮುಖ್ಯವಾಗಿ ಈ ಬಾರಿ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದು ಅನುಮಾನ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಅಂತಿಮವಾಗಿ ಆಯೋಜಕರು ಹಾಗೂ ಕಲರ್ಸ್ ಕನ್ನಡದ ಮಾತಿಗೆ ಒಪ್ಪಿದ ಕಿಚ್ಚ ಬಿಗ್ ಬಾಸ್ ನಡೆಸಿಕೊಡಲು ಒಪ್ಪಿದ್ದು, ನಿರೂಪಣೆ […]
ಬ್ರಹ್ಮಾವರ: ವಿದ್ಯಾರ್ಥಿ ಹಾಸ್ಟೆಲ್ ಬಾತ್ರೂಮ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ.

ಬ್ರಹ್ಮಾವರ: ಮದರಸದ ಹಾಸ್ಟೇಲ್ನ ಬಾತ್ರೂಮ್ನಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.12 ರಂದು ಶನಿವಾರ ಬ್ರಹ್ಮಾವರ ತಾಲೂಕಿನ ರಂಗನಕೇರಿಯ ಮಾಲಿಕ್ ದಿನಾರ್ ಮದರಸದ ಹಾಸ್ಟೆಲ್ನಲ್ಲಿ ಸಂಭವಿಸಿದೆ. ಇಲ್ಲಿನ ವಾರಂಬಳ್ಳಿ ನಿವಾಸಿ ಮೊಹಮ್ಮದ್ ತೌಸಿಫ್ ಮತ್ತು ರಿಹಾನ ಬೇಗಂ ಅವರ ಮಗ ಮೊಹಮ್ಮದ್ ಜಹೀದ್ (12) ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಹೀದ್ ಹಾಸ್ಟೆಲ್ನಲ್ಲಿ ಉಳಿದುಕೊಂಡೆ ಹೇರಾಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ.ರಜೆ ಹಿನ್ನೆಲೆ ಮನೆಗೆ ಬಂದಿದ್ದು, ಶುಕ್ರವಾರ ವಾಪಾಸು ಮದರಸಕ್ಕೆ ತೆರಳಿದ್ದ, ಶನಿವಾರ ರಾತ್ರಿ 9.00ಕ್ಕೆ ಊಟಕ್ಕೆ ಬಾರದೆ […]
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ “ಶತಾಭಿವಂದನಂ” ಕಾರ್ಯಕ್ರಮದ ಸಮಾರೋಪದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ ಶತಮಾನೋತ್ಸವ ಆಚರಣೆಯ “ಶತಾಭಿವಂದನಂ- 2023” ಕಾರ್ಯಕ್ರಮದ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕೆಮ್ಮಣ್ಣುವಿನ ದಿ. ರಾಜಗೋಪಾಲ್ ಭಟ್ ವೇದಿಕೆಯಲ್ಲಿ ನಡೆಯಿತು.ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಸಾಮಾಜಿಕ ಚಿಂತಕ ವಾಗ್ಮಿ ದಾಮೋದರ್ ಶರ್ಮಾ ಅವರು, ಆರ್ಥಿಕ ವ್ಯವಹಾರದ ಜೊತೆಗೆ ಮಾನವೀಯತೆ, ಪ್ರೀತಿ, ನಂಬಿಕೆ, ವಿಶ್ವಾಸ, ಗೌರವ ಇದೆಲ್ಲವೂ ಮೇಳೈಸಿದರೆ ಮಾತ್ರ ಆ ವ್ಯವಹಾರಕ್ಕೆ ಬೆಲೆ ಇರುತ್ತದೆ. ಇಲ್ಲದಿದ್ದರೆ ವ್ಯವಹಾರಕ್ಕೆ ಬೆಲೆ ಬರುವುದಿಲ್ಲ. ಈ ಸಂಸ್ಥೆ ಆರ್ಥಿಕ ವ್ಯವಹಾರದಲ್ಲಿ […]
ಮಲ್ಪೆ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಮಲ್ಪೆ ಬಾಪು ತೋಟದ ನಿವಾಸಿ ಜಲೀಲ್ (49) ಎಂಬವರ ಮೃತದೇಹವು ಪಡುಕೆರೆ ಮಟ್ಟು ಸಮೀಪದ ಪಾಪನಾಶಿನಿ ನದಿಯಲ್ಲಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಜಲೀಲ್ ಅ.12ರ ಶನಿವಾರ ಬೆಳಿಗ್ಗೆ 5 ಗಂಟೆಗೆ ಮನೆಯಿಂದ ನಾಪತ್ತೆಯಾಗಿದ್ದರು. ಅವರ ಬೈಕ್, ಮೊಬೈಲ್ ಹಾಗೂ ಚಪ್ಪಲಿ ಮಲ್ಪೆ ಪಡುಕರೆ ಸೇತುವೆ ಬಳಿ ಪತ್ತೆಯಾಗಿತ್ತು. ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡವು ಜಲೀಲ್ ನಾಪತ್ತೆಯಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶವನ್ನು ಬಿತ್ತರಿಸಿತ್ತು. ಬೆಳಿಗ್ಗೆ ಸುಮಾರು 7 ಗಂಟೆಗೆ ಪಡುಕರೆ ಬಾಪುತೋಟ ಸಮೀಪದ […]