ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಮೇಡಮ್ ಸಾಜಿದಾ ಮೊಹಮ್ಮದ್ ಭೇಟಿ

ಮಂಗಳೂರು: ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಮೇಡಮ್ ಸಾಜಿದಾ ಮೊಹಮ್ಮದ್ ಮತ್ತು ಸೇಂಟ್ ಜೋಸೆಫ್ ಕಾಲೇಜಿನ ಬ್ಯಾಚ್ 2000-2003, ಬಿ.ಎಸ್ಸಿ. ಎಮ್.ಸಿ.ಬಿ.ಯ ವಿದ್ಯಾರ್ಥಿನಿಯಾಗಿದ್ದು, ಅ.9 ರಂದು 3.00 ಗಂಟೆಗೆ ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದರು. ಮೇಡಂ ಸಾಜಿದಾ ಮೊಹಮ್ಮದ್ ಅವರನ್ನು ಉಪಕುಲಪತಿ – ರೆ| ಡಾ| ವಿಕ್ಟರ್ ಲೋಬೊ, ಎಸ್‌ಜೆ; ಪ್ರೊ.ವೈಸ್ ಚಾನ್ಸಲರ್’ಗಳು – ಡಾ| ರೆಜಿನಾ ಮಥಾಯಸ್ ಮತ್ತು ಡಾ| ರೊನಾಲ್ಡ್ ಮಸ್ಕರೇನ್ಹಸ್; ರಿಜಿಸ್ಟ್ರಾರ್, ಡಾ. ಮೆಲ್ವಿನ್ ಕೊಲಾಸೊ ಮತ್ತು ರೆ| ಡಾ| […]

ಉಡುಪಿ: ಅಂಬೇಡ್ಕರ್, ದಲಿತರಿಗೆ ಅವಹೇಳನ; ಹಿಂದೂ ಜಾಗರಣ ವೇದಿಕೆಯ ಮುಖಂಡನ ಬಂಧನ

ಉಡುಪಿ: ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆಯ ಮುಖಂಡನೋರ್ವನನ್ನು ಪೊಲೀಸರು‌‌ ಕಾರ್ಕಳದಲ್ಲಿ ಬಂಧಿಸಿದ್ದಾರೆ. ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯ್ಕ್ ಸೂಡ ಬಂಧಿತ‌ ಆರೋಪಿ. ಈತ ದಕ್ಷಿಣ ಕನ್ನಡ ಮರಾಠೆ ಸಂರಕ್ಷಣಾ ಸಮಿತಿಯ ವಾಟ್ಸಾಪ್ ಗುಂಪಿನಲ್ಲಿ ಹಾಕಿದ ವಾಯ್ಸ್ ಮಸೇಜ್‌ನಲ್ಲಿ ಅಂಬೇಡ್ಕರ್ ಹಾಗೂ ದಲಿತರಿಗೆ ಅಪಮಾನಕರ ರೀತಿಯ ಸಂದೇಶವನ್ನು ಪೋಸ್ಟ್ ಮಾಡಿದ್ದು, ಅದು ವೈರಲ್ ಆದ ಬಳಿಕ […]

ಬೆಳ್ತಂಗಡಿ: ಆಯಧ ಪೂಜೆ ವೇಳೆ ಸಾಫ್ಟ್ ವೇರ್ ಇಂಜಿನಿಯರ್ ಹೃದಯಾಘಾತದಿಂದ ಮೃತ್ಯು.

ಬೆಳ್ತಂಗಡಿ: ಆಯಧ ಪೂಜೆಯ ಸಂದರ್ಭದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಯುವಕನೊರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ಯುವಕ ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಎಂದು ತಿಳಿದು ಬಂದಿದೆ. ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿತು.ಇದು ಹೃದಯ ಸ್ತಂಭನಕ್ಕೆ ಕಾರಣವಾಯಿತು. ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. […]

ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ವಿಜಯದಶಮಿ ಸಂಭ್ರಮ; ನೂರಾರು ಮಕ್ಕಳಿಗೆ ಮೊದಲ ಅಕ್ಷರಾಭ್ಯಾಸ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬ್ರಾಹ್ಮ ಮುಹೂರ್ತದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸಕ್ಕೆ ಚಾಲನೆ ನೀಡಲಾಯಿತು.ಲಕ್ಷ್ಮೀ, ಸರಸ್ವತಿ ಹಾಗೂ ಪಾರ್ವತಿಯ ಐಕ್ಯ ಸ್ವರೂಪಿಣಿಯಾಗಿ ನೆಲೆನಿಂತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿದ್ಯಾರಂಭ ಮಾಡಿಸಿದರೆ ಮಕ್ಕಳು ಭವಿಷ್ಯದಲ್ಲಿ ಉತ್ತಮವಾಗಿ ವಿದ್ಯೆ ಕಲಿಯುತ್ತಾರೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ವಿಜಯದಶಮಿಯ ಶುಭ ಮುಹೂರ್ತದಲ್ಲಿ ವೈದಿಕರ ಮಾರ್ಗದರ್ಶನದ ಮೇರೆಗೆ ಪಾಲಕರು ತಮ್ಮ ಮಕ್ಕಳ ಕೈ ಹಿಡಿದು ಅಕ್ಕಿತುಂಬಿದ ಬಟ್ಟಲಿನಲ್ಲಿ ಓಂಕಾರದಿಂದ ಮೊದಲ್ಗೊಂಡು ದೇವಿಯ ಸ್ತೋತ್ರ ಹಾಗೂ ವರ್ಣ ಮಾಲೆಗಳು ಮತ್ತು ಸಂಖ್ಯೆಗಳನ್ನು ಬರೆಯಿಸಿ ಅಕ್ಷರಾಭ್ಯಾಸಕ್ಕೆ […]

ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 12.5 ಲಕ್ಷ ರೂ. ಗೆದ್ದ ಕಾರ್ಕಳ ಮೂಲದ ಡಾ. ಶ್ರೀಶ್ ಶೆಟ್ಟಿ

ಉಡುಪಿ: ಕೌನ್‌ ಬನೇಗಾ ಕರೋಡ್‌ಪತಿ (ಕೆಬಿಸಿ) ಯಲ್ಲಿ ಕರಾವಳಿ ಮೂಲದ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆಯ ಡಾ. ಶ್ರೀಶ್‌ ಸತೀಶ್‌ ಶೆಟ್ಟಿ ಅವರು 12.5 ಲಕ್ಷ ರೂ. ಗೆದ್ದುಕೊಂಡಿದ್ದಾರೆ.ಅ. 10 ಮತ್ತು 11 ರಂದು ಸೋನಿ ಟಿವಿಯಲ್ಲಿ ಅವರ ಸಂಚಿಕೆ ಪ್ರಸಾರಗೊಂಡಿದೆ. ಶ್ರೀಶ್ ಸತೀಶ್ ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದರು. 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಯ ಹೆಸರು ಕೇಳಲಾಗಿತ್ತು. ಜನರಲ್ ಕೆ.ಎಂ. ಕಾರ್ಯಪ್ಪ, ವಿಜಯ ತೆಂಡೂಲ್ಕರ್‌, […]