ಉಡುಪಿ:ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸೇವಾ ಕೇಂದ್ರದ ಸ್ಥಳಾಂತರ ಹಾಗೂ ಉದ್ಘಾಟನಾ ಸಮಾರಂಭ

ಉಡುಪಿ:ಈಸೀ ಲೈಫ್ ಎಂಟರ್ಪ್ರೈಸಸ್ ನ ಉಡುಪಿ ಶಾಖೆಯು ನೂತನ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದೆ. ಉದ್ಘಾಟನಾ ಸಮಾರಂಭವು ದಿನಾಂಕ : 11 ಅಕ್ಟೋಬರ್ 2024 ಶುಕ್ರವಾರ ಸಮಯ:ಬೆಳಿಗ್ಗೆ 10.30 ಕ್ಕೆ ಸರಿಯಾಗಿ ಎನ್.ಎಚ್-66, ನಿಟ್ಟೂರು, ಉಡುಪಿ ಇಲ್ಲಿ ನಡೆಯಲಿರುವುದು. ಶ್ರೀ ಕುದಿ ಶ್ರೀನಿವಾಸ ಭಟ್, ಪ್ರಗತಿಪರ ಕೃಷಿಕರು ಹಾಗೂ ನವೀನ್ ಚಂದ್ರ ಜೈನ್ ನಿಟ್ಟೆ – ಪ್ರಗತಿಪರ ಕೃಷಿಕರು ಸಂತೋಷ್ ಜತ್ತನ್, ನಗರ ಸಭೆ ಸದಸ್ಯರು, ನಿಟ್ಟೂರು,ಇವರೆಲ್ಲರೂ ಉದ್ಘಾಟನಾ ಸಭೆಯಲ್ಲಿ ಉಪಸ್ಥಿತಲಿರಲಿದ್ದಾರೆ.
ಕುಂದಾಪುರ: ಹಾವು ಕಡಿತ; ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತ್ಯು.

ಕುಂದಾಪುರ: ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ವ್ಯಕ್ತಿ ಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಶಂಕರನಾರಾಯಣ ಗ್ರಾಮದ ಶಿವರಾಮ(68) ಎಂದು ಗುರುತಿಸಲಾಗಿದೆ. ಇವರು ಸೆ.27ರಂದು ಶಂಕರನಾ ರಾಯಣ ಗ್ರಾಮದ ತೌಡ ಕಲ್ಲು ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ವಿಷದ ಹಾವು ಕಚ್ಚಿದ್ದು, ತೀವ್ರವಾಗಿ ಅಸ್ವಸ್ಥ ಗೊಂಡಿದ್ದ ಅವರು ಅ.8ರಂದು ಚಿಕಿತ್ಸೆ ಫಲಕಾರಿಯಾಗದೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ:ಯುವ ಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್ ಬಿ

ಉಡುಪಿ: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್.ಎಸ್.ಎಸ್ ನಂತಹಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಕರೆ ನೀಡಿದರು. ಅವರು ಬುಧವಾರ ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಇವರ ವತಿಯಿಂದಆಯೋಜಿಸಿದ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಪಠ್ಯದ ಚಟುವಟಿಕೆಗಳ ಜೊತೆಗೆ […]
ಕಣ್ಣಿನ ಆರೋಗ್ಯಕ್ಕೆ ಯಾವ ವಿಟಮಿನ್ ಅಗತ್ಯ? ಏನಿದರ ಉಪಯೋಗ?

ವಿಟಮಿನ್ ಬಿ ಮತ್ತು ಇತರ ಪೋಷಕಾಂಶಗಳು ಕಣ್ಣುಗಳಿಗೆ ಒಳ್ಳೆಯದು. ನಿರ್ದಿಷ್ಟ ವಿಟಮಿನ್ಗಳ ಕೊರತೆಯು ಕಣ್ಣಿನ ಪೊರೆ, ಗ್ಲುಕೋಮಾ ಮತ್ತು ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್ನಂತಹ ಕೆಲವು ಕಣ್ಣಿನ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸಬಹುದು. ಕಣ್ಣಿನ ಆರೋಗ್ಯಕ್ಕೆ ವಿಟಮಿನ್ಗಳು ಅತ್ಯಗತ್ಯ. ಉತ್ತಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ವಿಟಮಿನ್ ಎ, ಸಿ ಮತ್ತು ಇ ಅಂಶಗಳಿರುವ ಆಹಾರವನ್ನು ಸೇವಿಸಬೇಕು. ವಿಟಮಿನ್ ಬಿ ಮತ್ತು ಇತರ ಪೋಷಕಾಂಶಗಳು ಕಣ್ಣುಗಳಿಗೆ ಒಳ್ಳೆಯದು. ನಿರ್ದಿಷ್ಟ ವಿಟಮಿನ್ ಗಳ ಕೊರತೆಯು ಕಣ್ಣಿನ ಪೊರೆ, ಗ್ಲುಕೋಮಾ ಮತ್ತು ವಯಸ್ಸಿಗೆ […]
ಉಡುಪಿ:ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: 14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಲ್ಪೆ ಬಂದರಿನಲ್ಲಿ ಬೆಳಗಿನ ಜಾವ ನಡೆಯುವ ಮೀನಿನ ಹರಾಜು ಕೇಂದ್ರಗಳಲ್ಲಿ […]