ಉಡುಪಿ: ಮೇ4 ಮತ್ತು 5 ರಂದು ನಿಟ್ಟೂರು ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವ

ಉಡುಪಿ: ನಿಟ್ಟೂರು ಶ್ರೀ ಕಂಬಿಗಾರ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ನೇಮೋತ್ಸವ ಮತ್ತು ಮಹಾಅನ್ನಸಂತರ್ಪಣೆ ಇದೇ ಮೇ 4 ಮತ್ತು 5 ರಂದು ನಡೆಯಲಿದೆ. ದಿನಾಂಕ 4 ರ ಶನಿವಾರ ಬೆಳಿಗ್ಗೆ 7.30ಕ್ಕೆ ಗಜ ಕಂಬ ಮೂಹೂರ್ತ,10.30ಗೆ ಮಹಾಚಪ್ಪರದ ಆರೋಹಣ,12 ಗಂಟೆಗೆ ಮಹಾಪೂಜೆ,12.30 ಯಿಂದ 3 ರ ವರೆಗೆ ಮಹಾಅನ್ನಸಂತರ್ಪಣೆ ನಡೆಯಲಿದೆ.ಅಂದು ಸಂಜೆ 4.30ಕ್ಕೆ ದೈವಗಳ ದರ್ಶನ, 5.30 ಗಂಟೆಗೆ ದೈವಸ್ಥಾನದಿಂದ ಮುಖಮೂರ್ತಿ ಭಂಡಾರಗಳನ್ನು ಭವ್ಯ ಮೆರವಣಿಗೆಯಲ್ಲಿ ಮಹಾಚಪ್ಪರಕ್ಕೆ ತಂದು 7.30 ಕ್ಕೆ ಚಪ್ಪರದಲ್ಲಿ ಮಹಾ ಪೂಜೆ ನಡೆಯಲಿದೆ. […]

ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು ವತಿಯಿಂದ ವಿಶ್ವ ಹೋಮಿಯೋಪತಿ ದಿನಾಚರಣೆ

ಮಂಗಳೂರು: ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ವಿದ್ಯಾರ್ಥಿಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ ನಡೆಸುವ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸುಸಾಧ್ಯ ಎಂದು ಸಿಎಜಿ ಇಂಡಿಯಾದ ಸೀನಿಯರ್ ಅಕೌಂಟೆಂಟ್ ಜನರಲ್ ಡಾ| ರಾಹುಲ್ ಪಿ. ಹೇಳಿದರು. ಹೋಮಿಯೋಪತಿ ಜನಕ ಡಾ| ಸ್ಯಾಮುವೆಲ್ ಹಾನ್ನಿಮನ್ 269ನೇ ಜನ್ಮದಿನದ ಸ್ಮರಣಾರ್ಥದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಆಡಿಟೋರಿಯಂನಲ್ಲಿ ಮಂಗಳವಾರ ಜರಗಿದ ವಿಶ್ವ ಹೋಮಿಯೋಪತಿ ದಿನ -2024 ಆಚರಣೆಗೆ ಚಾಲನೆ […]

ಡಾ‌.ಉಮೇಶ್ ಪ್ರಭು ಮಡಿಲಿಗೆ ಬಾಲ‌ ವಾತ್ಸಲ್ಯ ಸಿಂಧು ಪ್ರಶಸ್ತಿ.

ಶ್ರೀಕೃಷ್ಣ ಬಾಲನಿಕೇತನದಲ್ಲಿ ಶ್ರೀಕೃಷ್ಣ ಬಾಲನಿಕೇತನ, ವಿಶ್ವೇಶತೀರ್ಥ ಸೇವಾಧಾಮ, ಶ್ರೀ ಕೃಷ್ಣ ಸೇವಾಧಾಮ‌ ಟ್ರಸ್ಟ್ ವತಿಯಿಂದ ಬುಧವಾರ ಕೊಡಮಾಡುವ ಬಾಲ್ಯ ವಾತ್ಸಲ್ಯ ಸಿಂಧು ಪ್ರಶಸ್ತಿಯನ್ನು ಸಂತೆಕಟ್ಟೆ ಕೃಷ್ಣಾನುಗ್ರಹ ಸಂಸ್ಥೆ ಚೇರ್ಮನ್ ಡಾ.ಉಮೇಶ್ ಪ್ರಭು ಅವರಿಗೆ ಪ್ರಧಾನ ಮಾಡಿ ಆಶೀರ್ವಚನ ನೀಡಿದರು. ಸಮಾಜದಲ್ಲಿ ಎಲ್ಲಿಯೂ ಅನಾಥಾಶ್ರಮ ಹಾಗೂ ವೃದ್ಧಾಶ್ರಮ ಇರಬಾರದು. ಶಿಕ್ಷಣದ ಜತೆಗೆ ಮೌಲ್ಯ ಮತ್ತು ಸಂಸ್ಕಾರ ಕಲಿಸಿಕೊಡಬೇಕು ಎಂದು ಡಾ.ಉಮೇಶ್ ಪ್ರಭು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. 60ರ ಸಂಭ್ರಮದಲ್ಲಿರುವ ಪೇಜಾವರ ಸ್ವಾಮೀಜಿಯವರನ್ನು ಬಾಲನಿಕೇತನ ಟ್ರಸ್ಟ್ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. […]

ಎಲ್ಲಾ ರೀತಿಯ ದಂತ ಸಮಸ್ಯೆಗಳಿಗೆ ಡಾ. ತಲ್ಲಾಣಿ ಸೂಪರ್ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಗೆ ಭೇಟಿ ನೀಡಿ

ಉಡುಪಿ: ಇಲ್ಲಿನ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ, ಆಲ್ವಿನ್ ಬೇಕರಿ ಎದುರುಗಡೆ ಕಾರ್ಯನಿರ್ವಹಿಸುತ್ತಿರುವ ಡಾ.ತಲ್ಲಾಣಿ ಸೂಪರ್ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ನಲ್ಲಿ ಸೇವೆ ಪ್ರಾರಂಭವಾಗಿದ್ದು ಡಾ. ಸಚಿನ್ ತಲ್ಲಾಣಿ ಹಾಗೂ ಇತರ ತಜ್ಞರು ಬೆಳಿಗ್ಗೆ 9 ರಿಂದ ರಾತ್ರಿ 8 ರವರೆಗೆ ಸೇವೆಗೆ ಲಭ್ಯರಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ. ಅಪಾಯಿಂಟ್ಮೆಂಟ್ಗಳಿಗಾಗಿ ಸಂಪರ್ಕಿಸಿ: 9901008538

ಮೇ.5: ಮೂಡಬಿದಿರೆಯಲ್ಲಿ “ಕ್ರಿಯೇಟಿವ್ ಪುಸ್ತಕಮನೆ” ಶುಭಾರಂಭ

ಕ್ರಿಯೇಟಿವ್ ಪುಸ್ತಕ ಮನೆ ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ಮೇ 5ರಂದು ಬೆಳಗ್ಗೆ 10.00ಗಂಟೆಗೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರು ಹಾಗೂ ಯುವರಾಜ್ ಜೈನ್, ಅಧ್ಯಕ್ಷರು, ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳು, ಕಲ್ಲಬೆಟ್ಟು ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈಗಾಗಲೇ ಕಾರ್ಕಳದಲ್ಲಿ ‘ಪುಸ್ತಕ ಮನೆ’ಯು ಪುಸ್ತಕ ಪ್ರೇಮಿಗಳ, ಸಾಹಿತ್ಯಾಸಕ್ತರ ಮನಗೆದ್ದಿದ್ದು ಕರಾವಳಿಯಲ್ಲಿ ಸುಪ್ರಸಿದ್ಧ ಪುಸ್ತಕ ಮಳಿಗೆಯಾಗಿ ಗುರುತಿಸಿಕೊಂಡಿದೆ. ಪುಸ್ತಕ ಪ್ರಕಾಶನವು ಸೇರಿದಂತೆ ‘ಪುಸ್ತಕ ಸಂತೆ’, ಸರಕಾರಿ ಶಾಲಾ ಮಕ್ಕಳಿಗೆ ಪುಸ್ತಕಗಳನ್ನು ಒದಗಿಸುವ ‘ಪುಸ್ತಕ […]