ಕುಡಿಯುವ ನೀರಿನ ಸಮಸ್ಯೆಗಳಿಗೆ ಅಧಿಕಾರಿಗಳು ತುರ್ತಾಗಿ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನಗರ ಅಥವಾ ಗ್ರಾಮೀಣ ಭಾಗದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ನೀರಿನ […]
ಡಿ.ಇ.ಎಲ್.ಇಡಿ ಕೋರ್ಸಿಗೆ ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಡಯಟ್, ಉಡುಪಿ ಇಲ್ಲಿ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿ.ಇ.ಎಲ್.ಇಡಿ ಕೋರ್ಸಿಗೆ ದಾಖಲಾತಿ ಪ್ರಕ್ರಿಯೆಯು 2024 ರ ಮೇ ತಿಂಗಳಲ್ಲಿ ನಡೆಸಿ, ಜೂನ್ 24 ರಂದು ತರಗತಿಯನ್ನು ಆರಂಭಿಸಲು ಯೋಜಿಸಲಾಗಿದ್ದು, ಸರಕಾರಿ ಕೋಟಾದಡಿ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಡಿ.ಇ.ಎಲ್.ಇಡಿ ಕೋರ್ಸು ಎರಡು ವರ್ಷದ್ದಾಗಿದ್ದು, ಪಿ.ಯು.ಸಿ ಅಥವಾ ಡಿಗ್ರಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೋರ್ಸನ್ನು ಪೂರೈಸಿದವರು ಸರಕಾರಿ ಅಥವಾ ಖಾಸಗಿ ಶಾಲೆಗಳಲ್ಲಿ ಪ್ರಾಥಮಿಕ ಶಾಲಾ […]
ಹಿರಿಯಡಕ: ವ್ಯಕ್ತಿ ನಾಪತ್ತೆ

ಹಿರಿಯಡಕ: ಕುದಿ ಗ್ರಾಮದ ಕೊಂಡಾಡಿ ನಿವಾಸಿ ವಾಸು ನಾಯ್ಕ (58) ಎಂಬ ವ್ಯಕ್ತಿಯು ಏಪ್ರಿಲ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋದಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಮನ ಸೂರೆಗೊಂಡ ವಿದುಷಿ ಸ್ಮೃತಿ ಇವರ ಭರತನಾಟ್ಯ

ಉಡುಪಿ: ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಆಶ್ರಯದಲ್ಲಿ ನಡೆಸುವ ಸಾಪ್ತಾಹಿಕ ನೃತ್ಯಸರಣಿ ನೃತ್ಯಶಂಕರ ಸರಣಿ 43ರಲ್ಲಿ ಬೆಂಗಳೂರಿನ ವಿದುಷಿ ಸ್ಮೃತಿಯವರಿಂದ ಭರತನಾಟ್ಯ ಸೋಮವಾರದಂದು ಸಂಪನ್ನಗೊಂಡಿತು. ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೆ ಪ್ರತಿ ಸೋಮವಾರ ವೇದಿಕೆಯನ್ನು ನೃತ್ಯ ಶಂಕರ ಸರಣಿ ಮೂಲಕ ಕೊಡವೂರು ಶ್ರೀ ಶಂಕರನಾರಾಯಣ ಕ್ಷೇತ್ರದಲ್ಲಿ ಅನುವು ಮಾಡಿ ಕೊಡುತ್ತಿರುವ ಸಂಘಟಕರ ಕಾರ್ಯ ಶ್ಲಾಘನೀಯ. ಸ್ಮೃತಿಯ ಸಾಧನಾಪಥ: 2-3ನೇ ತರಗತಿಯ ಪುಟ್ಟ ಸ್ಮೃತಿ ಶಾಲೆಯ ವಿವಿಧ ಸಾಂಸ್ಕತಿಕ ಸ್ಪರ್ಧೆ, ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಾ, ತನಗೇ […]
ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಎಕ್ಸ್ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ.

ಮಂಗಳೂರು: ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಪರೀಕ್ಷೆಯ ಫಿಸಿಕ್ ನಲ್ಲಿ ಎಕ್ಸ್ಪರ್ಟ್ ಪಿಯು ಕಾಲೇಜಿನ ಮೂವರು ಹಾಗೂ ಕೆಮಿಸ್ಟ್ರಿಯಲ್ಲಿ ಓರ್ವ ವಿದ್ಯಾರ್ಥಿ ತಲಾ 100 ಪರ್ಸೆಂಟೈಲ್ ಪಡೆದು ಸಾಧನೆ ಮಾಡಿದ್ದಾರೆ. ಮಿಹಿರ್ ಗಿರೀಶ್ ಕಾಮತ್99.9280 ಪರ್ಸೆಂಟೈಲ್ ಪಡೆದು ಅಖಿಲ ಭಾರತ ಮಟ್ಟದ ಜನರಲ್ ಕ್ಯಾಟಗರಿ ವಿಭಾಗದಲ್ಲಿ 1,312ನೇ ರ್ಯಾಂಕ್ ಪಡೆದರೆ, 99,7864 ಪರ್ಸಂಟೈಲ್ ಪಡೆದ ಸಂಕೇತ್ ಕುಮಾರ್ 3,541ನೇ ರ್ಯಾಂಕ್ ಹಾಗೂ 99.7100 ಪರ್ಸೆಂಟೈಲ್ ಪಡೆದ ರೋಹನ್ ಹೆಬ್ಬಾಲೆ 4,760ನೇ ರ್ಯಾಂಕ್ ಹಾಗೂ ಕೆಟಗರಿ […]