ರೋಟರಿ ಉಡುಪಿಯಿಂದ ಕಡಿಯಾಳಿ ಶಾಲೆ ವಿದ್ಯಾರ್ಥಿಗಳ ದತ್ತು ಸ್ವೀಕಾರ

ಉಡುಪಿ: ರೋಟರಿ ಉಡುಪಿ ಯಿಂದ ಪ್ರತಿ ವರ್ಷದಂತೆ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ಏಳನೇ ತರಗತಿಯ 21 ವಿದ್ಯಾರ್ಥಿ ಗಳನ್ನು ದತ್ತು ಸ್ವೀಕರಿಸಿ ಅವರ ಸಂಪೂರ್ಣ ಶೈಕ್ಷಣಿಕ ಖರ್ಚ ನ್ನು ನೀಡುವ ಕಾರ್ಯಕ್ರಮ ಇತ್ತೀಚಿಗೆ ಜರಗಿತು. ಮಾಜಿ ಅಸಿಸ್ಟೆಂಟ್ ಗವರ್ನರ್ ರೋ.ರಾಮಚಂದ್ರ ಉಪಾಧ್ಯಾಯರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತಾಡುತ್ತಾ ರೋಟರಿ ಉಡುಪಿಯ ಈ ಕಾರ್ಯಕ್ರಮಕ್ಕಾಗಿ ಅವರನ್ನು ಅಭಿನಂದಿಸಿ, ಈ ಸಹಾಯವು ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸ ಮುಂದುವರಿಸಲು ತುಂಬಾ ಸಹಕಾರಿಯಾಗಿದ್ದು ವಿದ್ಯಾರ್ಥಿಗಳು ಉತ್ತಮ ಪ್ರಗತಿಯನ್ನು ತೊರಿಸಬೇಕೆಂದು ಕರೆನೀಡಿದರು. […]
ಕನಕದಾಸ ಅಧ್ಯಯನ, ಸಂಶೋಧನಾ ಕೇಂದ್ರದ ಸದಸ್ಯರಾಗಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ನೇಮಕ.

ಉಡುಪಿ: ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸದಸ್ಯರನ್ನಾಗಿ ಉಡುಪಿಯ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರನ್ನು ಸರ್ಕಾರವು ನೇಮಕ ಮಾಡಿ ಆದೇಶ ಹೊರಡಿಸಿದೆ. ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರು ಸಾಹಿತ್ಯದ ಕಾವ್ಯ , ಕತೆ, ನಾಟಕ, ವಿಮರ್ಶೆ, ಅಂಕಣ ಬರಹ, ಅನುವಾದ, ಸಂಶೋಧನೆ ಮಂತಾದ ಪ್ರಕಾರಗಳಲ್ಲಿ ಈಗಾಗಲೇ ಸುಮಾರು 30ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ಕಾಯಕಾವ್ಯ, ಅವನು ಹೆಣ್ಣಾಗಬೇಕು, ನಕ್ಷತ್ರ ನಕ್ಕ ರಾತ್ರಿ, ಮುಂತಾದ ಕವನ ಸಂಗ್ರಹಗಳು, ತೊಗಲು ಗೊಂಬೆ ಕಾದಂಬರಿ, ಇರವಿನ […]
ಪಡುಬಿದ್ರಿ: ಮಗಳ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ತಂದೆ.

ಪಡುಬಿದ್ರಿ: ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣ, ವಿವಿಧ ವಾಟ್ಸಪ್ ಗ್ರೂಪ್ ಗಳಲ್ಲಿ ತನ್ನ ಮಗಳ ಖಾಸಗಿ ವಿಡಿಯೋಗಳನ್ನು ಹರಿಬಿಟ್ಟಿದ್ದು, ಇದೀಗ ಆತನ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ನಡುವೆ ಆರೋಪಿಯ ಪುತ್ರಿಯ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ವಿವರ:ಕಂಚಿನಡ್ಕದ ನಿವಾಸಿ ಆರೋಪಿ ಮಗಳು ಹಾಗೂ ತೀರ್ಥ ಹಳ್ಳಿಯ ಅವರ ಸಂಬಂಧಿ ತೌಸೀಫ್ ಪ್ರೀತಿಸುತ್ತಿದ್ದು, ಇದು ತಂದೆಗೆ ಇಷ್ಟವಿರಲಿಲ್ಲ. ಆರೋಪಿಯು ತೌಸೀಫ್ನನ್ನು ಮನೆಗೆ ಕರೆಸಿ ಆತನ ಮೇಲೆ ಹಲ್ಲೆ […]
ಉಪ್ಪಿನಂಗಡಿ: ಬೈಕ್ – ಪಿಕಪ್ ನಡುವೆ ಅಪಘಾತ: ಸವಾರ ಮೃತ್ಯು

ಉಪ್ಪಿನಂಗಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ಬೈಕ್ ಹಾಗೂ ಪಿಕಪ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಮಂಗಳೂರು ಕೋಡಿಕ್ಕಲ್ ನಿವಾಸಿ ಪ್ರಣಮ್ ಕೋಟ್ಯಾನ್ (23). ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಣಮ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇವರು ಮೆಡಿಕಲ್ ರೆಪ್ ಆಗಿದ್ದರು.
ಮಣಿಪಾಲ: ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿ ಮುಗಿಸಿ ತಾಂತ್ರಿಕ ಶಿಕ್ಷಣ ಆಸಕ್ತ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಶಿಕ್ಷಣ ಪ್ರವೇಶಾತಿಗಾಗಿ ಟಿ.ಎಂ.ಎ ಪೈ ಪಾಲಿಟೆಕ್ನಿಕ್ ನಲ್ಲಿ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಹಾಗೂ ತಕ್ಷಣವೇ ನೇರ ಪ್ರವೇಶಕ್ಕೆ ಅವಕಾಶ.

ಮಣಿಪಾಲ: ಇಂಜಿನಿಯರಿಂಗ್ ಪದವಿಯ ಕನಸು ಹೊತ್ತ ಆಸಕ್ತ ವಿದ್ಯಾರ್ಥಿಗಳ ಮೂರು ವರ್ಷಗಳ ಡಿಪ್ಲೊಮಾ ಪೂರೈಸಿದ ನಂತರ ಯಾವುದೇ ಪ್ರವೇಶ ಪರೀಕ್ಷೆಯ ಒತ್ತಡವಿಲ್ಲದೆ ಲ್ಯಾಟರಲ್ ಎಂಟ್ರಿ ಮೂಲಕ ಎಂ.ಐ.ಟಿ ಯಲ್ಲಿ ಇಂಜಿನಿಯರಿಂಗ್ ಎರಡನೇ ವರ್ಷಕ್ಕೆ ನೇರ ಪ್ರವೇಶ ಅವಕಾಶವನ್ನು ಸಂಸ್ಥೆಯ ಮೂಲಕ ಒದಗಿಸಲಾಗುತ್ತಿದೆ.ಲ್ಯಾಟರಲ್ ಎಂಟ್ರಿ ಪಡೆದ ವಿದ್ಯಾರ್ಥಿಗಳಿಗೆ ಎಂ.ಐ.ಟಿ ವಿದ್ಯಾ ಸಂಸ್ಥೆಯಲ್ಲಿ ಒಟ್ಟು ಶೇಕಡಾ ಎಪ್ಪತ್ತೈದರಷ್ಟು ಶುಲ್ಕವನ್ನು ರಿಯಾಯಿತಿ ನೀಡಲಾಗುತ್ತಿದ್ದು,ವಿದ್ಯಾರ್ಥಿ ವೇತನದ ಪ್ರಯೋಜನವನ್ನು ಪಡೆಯಬಹುದಾಗಿದೆ. ಐಟಿಐ ಶಿಕ್ಷಣ ಪೂರೈಸಿದ ಎನ್ಸಿವಿಟಿ ಅಥವಾ ಎನ್ಟಿಸಿ ಪರೀಕ್ಷೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ […]