ಕೊರ್ಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಮತದಾನ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಮತದಾನ ಮಾಡಿದರು.ಕೊರ್ಗಿಯ ಗಿರಿಜಾ ಚಂದ್ರಶೇಖರ ಹೆಗ್ಡೆ ಸರಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಕುಟುಂಬ ಸಮೇತರಾಗಿ ಬಂದು ತಮ್ಮ ಹಕ್ಕು ಚಲಾಯಿಸಿದರು.ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಗ್ಡೆ ಅವರು, ಒಳ್ಳೆಯ ವಾತಾವರಣ ಇದೆ. ತುಂಬಾ ಚೆನ್ನಾಗಿ ಪ್ರಚಾರ ಕಾರ್ಯ ನಡೆಸಿದ್ದೇನೆ. ಕಾರ್ಯಕರ್ತರ ಮನೆ ಮನೆಗೆ ಹೋಗಿದ್ದೇನೆ. ಖುದ್ದಾಗಿ ಮತದಾರರನ್ನು ಭೇಟಿಯಾಗಿದ್ದೇನೆ. ನಾನು ಮಾಡಿದ ಕೆಲಸ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳು ಗೆಲುವಿಗೆ ನೆರವಾಗಲಿವೆ. […]

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಮತದಾನ

ರಾಷ್ಟ್ರದ ಐಕ್ಯತೆಗಾಗಿ ಶಾಂತಿ ನೆಮ್ಮದಿಗಾಗಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು; ಕೋಟಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ನ ಮತಗಟ್ಟೆ ಸಂಖ್ಯೆ 165ರಲ್ಲಿ ಮತದಾನ ಮಾಡಿದರು.ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿದ ಅವರು, ಸರತಿ ಸಾಲಿನಲ್ಲಿ ನಿಂತು ಪತ್ನಿ ಶಾಂತ ಹಾಗೂ ಪುತ್ರಿ ಶೃತಿ ಅವರೊಂದಿಗೆ ಮತದಾನ ಮಾಡಿದರು.ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೋಟ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ […]

ಬ್ರಹ್ಮಾವರ: ಎಸ್ಎಮ್ಎಸ್ ಕಾಲೇಜು 2024- 25ಕ್ಕೆ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ.

ಎಸ್ಎಮ್ಎಸ್ ಕಾಲೇಜು ಬ್ರಹ್ಮಾವರ 2024- 25ಕ್ಕೆ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಕೋರ್ಸ್ಗಳು ಲಭ್ಯವಿದ್ದು ಕೋರ್ಸ್ ಗಳ ವಿವರ ಈ ಕೆಳಗಿನಂತಿದೆ. ವಿಜ್ಞಾನ ವಿಭಾಗ:ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ (PCMB)ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಕಂಪ್ಯೂಟರ್. ವಿಜ್ಞಾನ (PCMC)ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಸಂಖ್ಯಾಶಾಸ್ತ್ರ. ವಾಣಿಜ್ಯ ವಿಭಾಗ:ಇತಿಹಾಸ, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ (HEBA)ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನಗಳು, ಅಕೌಂಟೆನ್ಸಿ, ಕಂಪ್ಯೂಟರ್. ವಿಜ್ಞಾನ (EBACS)ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನಗಳು, ಲೆಕ್ಕಶಾಸ್ತ್ರ, ಅಂಕಿಅಂಶಗಳು (ಇಬಿಎಎಸ್)ವ್ಯಾಪಾರ ಅಧ್ಯಯನಗಳು, ಅಕೌಂಟೆನ್ಸಿ, ಸಂಖ್ಯಾಶಾಸ್ತ್ರ, ಕಂಪ್ಯೂಟರ್. […]

ಜೆ.ಇ.ಇ ಮೈನ್ ಫಲಿತಾಂಶ ಪ್ರಕಟ: ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ

ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ದುರ್ಗಾಶ್ರೀ ಎಮ್ 99.1312779, ನೇಹಾ ಕೆ ಉದಪುಡಿ 98.9485981, ಪ್ರಣವ್ ಟಿ ಎಮ್ 98.6313992, ಆದಿತ್ಯ ಅಲಗೌಡ ಪಾಟೀಲ್ 98.5573008, ಯುವರಾಜ್ ಬಿ ಕೆ 98.287914, ಅಕುಲ್ ಕೃಷ್ಣ ಎಮ್ ಎಸ್ 98.0229479, ಪಾರ್ಥ ಎ ಬಿ 98.0229479 ಪರ್ಸಂಟೈಲ್ ಗಳಿಸಿರುತ್ತಾರೆ. ಈ […]

ಜನರ ಜೊತೆ ಬೆರೆತು ಕೆಲಸ ಮಾಡಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡದೇ ಇದ್ದ ಬರ ಪರಿಹಾರಕ್ಕೆ ಸುಪ್ರೀಂಕೋರ್ಟ್ ಅಸ್ತು ಹೇಳುವ ಮೂಲಕ ನ್ಯಾಯ ನೀಡಿದೆ. ಬರ ಪರಿಹಾರ ಸಿಗದಿದ್ದಾಗ ರಾಜ್ಯ ಸರ್ಕಾರ ದೆಹಲಿಯಲ್ಲಿ ಪ್ರತಿಭಟನೆ ಮಾಡಿತ್ತು. ರಾಜ್ಯ ಸರ್ಕಾರದ ಪರ ನ್ಯಾಯ ಇದ್ದ ಕಾರಣ ಈ ತೀರ್ಪು ಬಂದಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.ಅವರು ಮಂಗಳವಾರ, ಕಾಪು ಪೇಟೆಯಲ್ಲಿ ನಡೆದ ಬಹಿರಂಗ ಮತ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಜನರ ಪ್ರತಿನಿಧಿಯಾಗಿ ಆರಿಸಲ್ಪಟ್ಟವರಿಗೆ ಜನರ ಕೆಲಸ ಮಾಡುವ ರೀತಿ […]