ಮೀನುಗಾರಿಕೆ, ಕೃಷಿ, ತೋಟಗಾರಿಕೆ, ಹೈನುಗಾರಿಕೆ ಅಭಿವೃದ್ಧಿಗೆ ಒತ್ತು ನೀಡಲಾಗುವುದು: ಜಯಪ್ರಕಾಶ್ ಹೆಗ್ಡೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕುರಿತು ಕಾಂಗ್ರೆಸ್‌ ಅಭ್ಯರ್ಥಿ ಹೊಂದಿರುವ ದೂರದೃಷ್ಟಿ, ಸಮಸ್ಯೆಗಳ ಪರಿಹಾರಕ್ಕೆ ಅವರಲ್ಲಿರುವ ಯೋಚನೆ, ಯೋಜನೆಗಳ ಬಗ್ಗೆ ಪತ್ರಕರ್ತರ ಜೊತೆಗೆ ಜಯಪ್ರಕಾಶ್ ಹೆಗ್ಡೆ ಮಾತನಾಡಿದ್ದಾರೆ. ಈ ಕ್ಷೇತ್ರ ವ್ಯಾಪ್ತಿಯಲ್ಲಿ ಕರಾವಳಿ, ಮಲೆನಾಡು, ಬಯಲುಸೀಮೆ ಹೀಗೆ ಮೂರು ವಿಭಾಗ ಬರುತ್ತದೆ. ಕರಾವಳಿಯಲ್ಲಿ ಮೀನುಗಾರರ, ರೈತರ ಸಮಸ್ಯೆ ಆದ್ಯತೆ ನೀಡುವ ಜತೆಗೆ ಬಯಲುಸೀಮೆ ಮತ್ತು ಮಲೆನಾಡಿನಲ್ಲಿ ಕಾಪಿ, ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವುದು ಆಗಬೇಕು. ಕೃಷಿ ಭೂಮಿಗೆ ಉಪ್ಪುನೀರು ಹರಿಯುವುದನ್ನು ತಡೆ ಯಲು ಚೆಕ್‌ಡ್ಯಾಮ್‌ಗಳು […]

ಭಾರತ-ಇರಾನ್ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಂದ ದ್ವಿಪಕ್ಷೀಯ ಸಹಕಾರಕ್ಕಾಗಿ ಎಂಒಯುಗೆ ಸಹಿ.

ಹವಾಮಾನ ಬದಲಾವಣೆ ಮತ್ತು ಆರೋಗ್ಯ ಸಂಶೋಧನಾ ಕೇಂದ್ರ, ಟೆಹ್ರಾನ್ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯ(TUMS)ವು ಹವಾಮಾನ ಬದಲಾವಣೆ ಮತ್ತು ಮಾನವನ ಸಾರ್ವಜನಿಕ ಆರೋಗ್ಯದ ಪರಿಣಾಮಗಳ ಕೇಂದ್ರಿತ ಶೈಕ್ಷಣಿಕ ಮತ್ತು ನೀತಿ ಆಧಾರಿತ ಸಂಶೋಧನೆಗಳನ್ನು ಉತ್ತೇಜಿಸಲು, ಭಾರತದ ಮಂಗಳೂರಿನ ಎಡ್ವರ್ಡ್ ಮತ್ತು ಸಿಂಥಿಯಾ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ (ECIPH) ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಎರಡು ಸಂಸ್ಥೆಗಳು. ಶೈಕ್ಷಣಿಕ ಮತ್ತು ನೀತಿ-ಆಧಾರಿತ ಉಪಕ್ರಮಗಳನ್ನು ಅನುಸರಿಸುತ್ತವೆ, ಇದರಲ್ಲಿ ಈ ಪ್ರದೇಶದಲ್ಲಿ ಹವಾಮಾನ ಬದಲಾವಣೆಯ ಅಪಾಯಗಳಿಗೆ ಸಂಬಂಧಿಸಿದಂತೆ ಆರೋಗ್ಯ ವ್ಯವಸ್ಥೆಗಳ ಒಗ್ಗೂಡುವಿಕೆ […]

ರಾಷ್ಟ್ರೀಯ ಭೂ ದಿನ: ಮರವಂತೆ ಬೀಚ್ ನಲ್ಲಿ ಸ್ವಚ್ಚತಾ ಕಾರ್ಯಕ್ರಮ.

ಕುಂದಾಪುರ: ಏಪ್ರಿಲ್ 22 ರಾಷ್ಟ್ರೀಯ ಭೂ ದಿನದ ಅಂಗವಾಗಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು ಹಾಗೂ ಮಣಿಪಾಲದ ಮಾಹೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ಮರವಂತೆ ಬೀಚ್ ಸ್ವಚ್ಚತಾ ಕಾರ್ಯವನ್ನು ಆಯೋಜಿಸಲಾಯಿತು.ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮರವಂತೆ ಕಡಲ ಕಿನಾರೆಯ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದರು. ಈ ಕಾರ್ಯದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವ್ರಂದದವರು ಉಪಸ್ಥಿತರಿದ್ದರು.

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ನಡೆಸಲಾಯಿತು. ಕ್ರೀಡಾಕೂಟವನ್ನು ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಮತ್ತು ಪವರ್ ಲಿಫ್ಟರ್ ಶ್ರೀ ವಿನೋದ್ ಕುಮಾರ್ ರವರು ಉದ್ಘಾಟಿಸಿದರು. ತದನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಕ್ರೀಡೆಯ ಮಹತ್ವ ವನ್ನು ಸವಿಸ್ತಾರವಾಗಿ ವಿವರಿಸಿದರು, ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ, ಮತ್ತು ಇಂದಿನ ಯುವಪೀಳಿಗೆಯು ಕ್ರೀಡೆಯಲ್ಲಿ ಆಸಕ್ತಿ ಕಳೆದುಕೊಳ್ಳುತ್ತಿರುವುದು ದುರದೃಷ್ಟಕರ, ವಿದ್ಯಾರ್ಥಿಗಳಾದ ತಾವು ಕ್ರೀಡಾಕ್ಷೇತ್ರದಲ್ಲಿ ತಮ್ಮನ್ನು ತಾವು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ನುಡಿದರು. ಕಾರ್ಯಕ್ರಮದ […]

ಮಂಗಳೂರು: ಪಿ.ಎ ಕಾಲೇಜಿನಲ್ಲಿ ICEST 24 ಉದ್ಘಾಟನೆ

ಮಂಗಳೂರು: ಇಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನ-2024 (ಐಸಿಇಎಸ್ಟಿ-24) ಕುರಿತ ಅಂತರರಾಷ್ಟ್ರೀಯ ಮಟ್ಟದ ಸಮಾವೇಶದ ಉದ್ಘಾಟನೆಯು ಏಪ್ರಿಲ್ 23 ರಂದು ಬೆಳಿಗ್ಗೆ 9:30 ಕ್ಕೆ ಮಂಗಳೂರಿನ ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗನಲ್ಲಿ ನಡೆಯಿತು. ICEST-24 ಒಟ್ಟು ಆರು ಸಮ್ಮೇಳನಗಳನ್ನು ಒಳಗೊಂಡಿದ್ದು ವಿಭಿನ್ನ ಎಂಜಿನಿಯರಿಂಗ್ ವಿಭಾಗಗಳನ್ನು ಪ್ರತಿನಿಧಿಸುತ್ತದೆ. ಮುಖ್ಯ ಅತಿಥಿಯಾಗಿ ಆಗಮಿಸಿದ, ಮಂಗಳೂರಿನ ಇನ್ಫೋಸಿಸ್ನ ಹಿರಿಯ ಯೋಜನಾ ವ್ಯವಸ್ಥಾಪಕ ಶ್ರೀ ಸೋಹನ್ ಎಂ. ಅವರು ಮಾತನಾಡಿ ತಾಂತ್ರಿಕ ಶಿಕ್ಷಣದ ಪ್ರಗತಿಯಲ್ಲಿ ಬಹುಶಿಸ್ತೀಯ ವಿಧಾನಗಳ ಪ್ರಾಮುಖ್ಯತೆಯನ್ನು ವಿವರಿಸಿದರು. ಮುಖ್ಯ ಭಾಷಣ ಮಾಡಿದ […]