ಉಡುಪಿ: ದುಬೈನ ಹೊಟೇಲಿನಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ: ಆರೋಪಿಯ ಜಾಮೀನು ಆದೇಶ ರದ್ದು.

ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೊಟೇಲಿನಲ್ಲಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31) ಎಂಬಾತನಿಗೆ ಕೆಳಗಿನ ಎರಡು ನ್ಯಾಯಾಲಯಗಳು ನೀಡಿದ ಜಾಮೀನು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆರೋಪಿ ಉಡುಪಿಯ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದರಿಂದ 2023ರ ಆ.24ರಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಆದೇಶವನ್ನು ಸರಕಾರವು ೨ನೇ ಉಡುಪಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಯಲ್ಲಿ […]

ಉಡುಪಿ ಕಾಂಗ್ರೆಸ್ ಭವನದಲ್ಲಿ ವಿಧಾನಸಭೆ ಉಪಚುನಾವಣೆ ಕುರಿತು ಸಭೆ

ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ನಗರಸಭಾ ಸದಸ್ಯರು ಹಾಗೂ ಸ್ಥಳೀಯ ಮುಖಂಡರನ್ನು ಭೇಟಿಯಾಗಿ ಮತದಾನದ ಬಗ್ಗೆ ಚರ್ಚಿಸಲು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ವಿಧಾನಪರಿಷತ್ ಉಪಚುನಾವಣೆಯ ಅಭ್ಯರ್ಥಿಗಳಾದ ರಾಜು ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ವಿಧಾನಪರಿಷತ್ ಸದಸ್ಯರು ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ಮಾಜಿ […]

ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆಯ ಸನ್ನಿಧಾನದಲ್ಲಿ ಶರನ್ನವರಾತ್ರಿ ಮಹೋತ್ಸವ:ಸಾವಿರಾರು ಭಕ್ತರ ಆಗಮನ

ಉಡುಪಿ: ಉಡುಪಿ ದೊಡ್ಡಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ 18ನೇ ವರ್ಷದ ಶರನ್ನವರಾತ್ರಿ ಮಹೋತ್ಸವವು ಕ್ಷೇತ್ರದ ಧರ್ಮದ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ನೇತೃತ್ವದಲ್ಲಿ ನೆರವೇರುತ್ತಿದೆ.. ದಿನ ಪ್ರತಿ ಜೋಡಿ ಚಂಡಿಕಾಯಾಗ ದುರ್ಗಾ ನಮಸ್ಕಾರ ಪೂಜೆ ವಿಜಯದಶಮಿಯ ಪರ್ವಕಾಲದಲ್ಲಿ ತ್ರಿಲೋಕೇಶ್ವರಿ ಮಹಾಯಾಗ ಬಲಿ ಉತ್ಸವ ರಂಗ ಪೂಜಾ ಮಹೋತ್ಸವ ನಿರಂತರ ಮೃಷ್ಟಾನ್ನ ಸಂತರ್ಪಣೆ ಸಾಂಸ್ಕೃತಿಕ ವೈಭವ ಹೀಗೆ ಹತ್ತು ಹಲವು ಕಾರ್ಯಕ್ರಮಗಳೊಂದಿಗೆ ಕ್ಷೇತ್ರ ನವರಾತ್ರಿ ಸಂಭ್ರಮಕ್ಕೆ ಸಾಕ್ಷಿಭೂತವಾಗಿದೆ.. ಬರಡು […]

ಹರಿಯಾಣ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್‌ಗೆ ಭರ್ಜರಿ ಗೆಲುವು

ನವದೆಹಲಿ, ಅ.08: ಹರಿಯಾಣ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್ ಫೋಗಟ್ ಅವರು 5,000 ಹೆಚ್ಚು ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೂಲಾನಾ ಕ್ಷೇತ್ರದಲ್ಲಿ ವಿನೇಶ್ ಫೋಗಟ್‌ಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಅವರು ಕಣಕ್ಕಿಳಿದಿದ್ದರು. ಆರಂಭದ ಮತ ಎಣಿಕೆಯಲ್ಲಿ ವಿನೇಶ್ ಫೋಗಟ್ ಅವರಿಗೆ ಮುನ್ನಡೆ ಸಿಕ್ಕಿದ್ದು, ಬಳಿಕ ಯೋಗೇಶ್ ಕುಮಾರ್ ಅವರಿಗೆ ಮುನ್ನಡೆ ಸಿಕ್ಕಿತ್ತು. ಈ ಮೂಲಕ ಯೋಗೇಶ್ ಕುಮಾರ್ ಮತ್ತು ವಿನೇಶ್ ಫೋಗಟ್ ಮಧ್ಯೆ […]

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಖುಲಾಸೆ.

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪಿತ್ತಿದೆ. ಬೆಳ್ತಂಗಡಿಯ ಮಡಂತ್ಯಾರಿನಲ್ಲಿ 23-06-2023 ರಂದು ಆರೋಪಿ ಶಾಶ್ವತ್‌ ಬಾಲಕಿಯನ್ನು ಹುಟ್ಟುಹಬ್ಬದ ನೆಪದಲ್ಲಿ ತನ್ನ ಸಹೋದರನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸ್‌ ಠಾಣೆಯ ವೃತ್ತ ನಿರೀಕ್ಷಕ ನಾಗೇಶ್‌ ಪ್ರಕರಣದ ತನಿಖೆ ನಡೆಸಿ ಆರೋಪಿ […]