ಕುಂದಾಪುರ: ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಕೊಲೆಗೆ ಯತ್ನ: ಓರ್ವ ಆರೋಪಿಯ‌ ಬಂಧನ.

ಉಡುಪಿ: ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಅವರ ಕೊಲೆ ಮಾಡಲು ಇಬ್ಬರು‌ ದುಷ್ಕರ್ಮಿಗಳು ವಿಫಲಯತ್ನ ನಡೆಸಿದ ಘಟನೆ ಜು.7 ರಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ತಲೆಮರೆಸಿಕೊಂಡಿದ್ದಾನೆ. ಎಸ್‌ಎಸ್ಎಸ್ ಟ್ರಾವೆಲ್ಸ್ ಎಂಬ ಸಂಸ್ಥೆಯ ಮಾಲೀಕ ಸತೀಶ್ ಶೆಟ್ಟಿ (53) ಬಂಧಿತ ಆರೋಪಿಯಾಗಿದ್ದು, ಪುತ್ರ ಸನ್ನಿಧಿ ಶೆಟ್ಟಿ ತಲೆಮರೆಸಿಕೊಂಡಿದ್ದಾನೆ. ಸಹನಾ ಸುರೇಂದ್ರ ಶೆಟ್ಟಿ ಅವರ ಪತ್ನಿ ಕುಂದಾಪುರ ನಗರದ ಎ.ಎಸ್‌ ಟ್ರೇಡರ್‌ ಎಂಬ ಪ್ಲ್ಯಾಟ್ ನಲ್ಲಿ ಮಳೆ ನೀರಿಗೆ ಸಂಬಂಧಿಸಿದ […]

ಮನೆ ಊಟ ಪಡೆಯಲು ಅನುಮತಿ ನೀಡುವಂತೆ ನಟ ದರ್ಶನ್ ಹೈಕೋರ್ಟ್ ಗೆ ಮನವಿ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಮನೆಯಿಂದ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಅನುಮತಿ ಕೋರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ. ಇದರಿಂದ ಅತಿಸಾರ ಭೇದಿ ಆಗುತ್ತಿದೆ. ಜೈಲಿನ ಆಹಾರ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ ಹೀಗೆಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದರ್ಶನ್ ಪರ ವಕೀಲರು ಉಲ್ಲೇಖಿಸಿದ್ದಾರೆ. ದರ್ಶನ್ ಅವರ ದೇಹದ ತೂಕ ಕೂಡ […]

ಅವಕಾಶ ದೊರೆತಾಗ ಊರು, ದೇಶ, ಭಾಷೆ ಮರೆಯಬಾರದು: ಡಾ. ಎಂ ಮೋಹನ ಆಳ್ವ

ಮೂಡುಬಿದಿರೆ: ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣ ಮಾಡದೇ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವದ ಸಲುವಾಗಿ ನಡೆದ ಅಂಕುರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. […]

ಯುವ ಭಾರತೀಯ ಶಾಸ್ತ್ರೀಯ ಗಾಯಕರಿಗೆ ಪ್ರಪ್ರಥಮ ರಾಷ್ಟ್ರೀಯ ಸ್ಫರ್ಧೆಯನ್ನು ಆಯೋಜಿಸಿದ ಗ್ರೇಸ್ ಫೌಂಡೇಶನ್

ಜನಪ್ರಿಯ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತಗಾರ, ಪದ್ಮಭೂಷಣ ಪಂಡಿತ್ ಸಿ.ಆರ್.ವ್ಯಾಸ್ ಅವರ ಜನ್ಮಶತಮಾನೋತ್ಸವದ ಸಂದರ್ಭದಲ್ಲಿ ಗುಣಿಜಾನ್ ರಿಸರ್ಚ್‌ ಆರ್ಟ್ ಕಲ್ಚರ್ ಆಂಡ್ ಎಜುಕೇಶನ್ (ಗ್ರೇಸ್) ಫೌಂಡೇಶನ್‌ ‘ಗುಣಿಜಾನ್ ಬಂದಿಶ್‌ ಪ್ರತಿಯೋಗಿತ” ಎಂಬ ಅಖಿಲ ಭಾರತ ಶಾಸ್ತ್ರೀಯ ಗಾಯನ ಸ್ಫರ್ಧೆಯನ್ನು ಆರಂಭಿಸಿದೆ.ಗ್ರೇಸ್ ಫೌಂಡೇಶನ್‌ನ ಸಂಸ್ಥಾಪಕ ಮತ್ತು ಪಂಡಿತ್ ಸಿ.ಆರ್.ವ್ಯಾಸ್ ಅವರ ಪುತ್ರ ಶಶಿ ವ್ಯಾಸ್ ಅವರು ಈ ಪ್ರತಿಭಾ ಶೋಧ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಮತ್ತು ಈ ಕಾರ್ಯಕ್ರಮದ ರೂಪುರೇಷೆಯು ಪಂಡಿತ್ ಸಿ.ಆರ್.ವ್ಯಾಸ್ ಅವರ ಹಿರಿಯ ಶಿಷ್ಯೆ ಅಪರ್ಣಾ ಕೇಳ್ಕರ್ ನಿರ್ವಹಿಸಿದ್ದಾರೆ. […]

ನಾಟ ( NATA) ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾಳಿಗೆ ರಾಜ್ಯ ಮಟ್ಟದಲ್ಲಿ 195 ನೇ ರ್ಯಾಂಕ್.

ಕುಂದಾಪುರ: ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾ. ಎಸ್ ರಾಜ್ಯಕ್ಕೆ 195 ನೇ ರ್ಯಾಂಕ್ ಪಡೆಯುವುದರ ಮೂಲಕ ಉತ್ತಮ ಸಾಧನೆ ಮೆರೆದಿದ್ದಾರೆ. ಈ ಮೂಲಕ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆದಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.