ಕಟಪಾಡಿ:ತ್ರಿಶಾ ವಿದ್ಯಾ ಕಾಲೇಜು: “ಬಲೆ ತುಲು ಲಿಪಿ ಕಲ್ಪುಗ” ತುಳು ಭಾಷಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

ಕಟಪಾಡಿ:ತುಳುನಾಡಿನ ಪಂಚ ವರ್ಣದ ಮಣ್ಣಿನ ಮಕ್ಕಳು ನಾವೆಲ್ಲರೂ. ನಮ್ಮ ಸಂಸ್ಕೃತಿ ಆಚಾರ ವಿಚಾರ ಜೊತೆಗೆ ನಮ್ಮ ಭಾಷೆಯನ್ನು ಕೂಡ ಕಲಿಯುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅಕ್ಟೋಬರ್ 5 ರಂದು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ “ಬಲೆ ತುಲು ಲಿಪಿ ಕಲ್ಪುಗ” ಅನ್ನುವ ತುಳು ಭಾಷಾ ತರಬೇತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ತರಗತಿಗೆ ಚಾಲನೆಯನ್ನು ನೀಡಲಾಯಿತು. ಉದ್ಘಾಟನೆ ನೆರವೇರಿಸಿದ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ನಾರಾಯಣ್ ರಾವ್ ರವರು ಇಂದು ಭಾಷೆಯನ್ನು ಕಲಿಯಲು ಹಲವಾರು ಆಧುನಿಕ ತಂತ್ರಜ್ಞಾನಗಳಿವೆ ಆದರೆ […]
ಉಡುಪಿ:ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್ ಮತ್ತುಮಲ್ಟಿಪಲ್ ಸ್ಕ್ಲಿರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತೀ ಮಾಹೆ ರೂ. 1,000/- ಪ್ರೋತ್ಸಾಹಧನನೀಡುವ ಸಲುವಾಗಿ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲಿರೋಸಿಸ್ ಕಾಯಿಲೆಯಿಂದ ಬಳಲುತ್ತಿರುವವ್ಯಕ್ತಿಗಳು ವಿಶಿಷ್ಟ ಗುರುತಿನ ಚೀಟಿ ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಅಂಗವಿಕಲತೆಯ ಪ್ರಮಾಣ ಶೇ. 75 ಮತ್ತು ಅದಕ್ಕಿಂತಹೆಚ್ಚಿರಬೇಕು. ವಯಸ್ಸಿನ ಹಾಗೂ ಆದಾಯ ಮಿತಿ ಇರುವುದಿಲ್ಲ. ಜಿಲ್ಲಾ […]
ಉಡುಪಿ:ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಜೋಡಿ ಚಂಡಿಕಾಯಾಗ ಸಂಪನ್ನ

ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನವರಾತ್ರಿಯ 4ನೇ ದಿನವೂ ಕೂಡ ಜೋಡಿ ಚಂಡಿಕಾ ಯಾಗ ಸಂಪನ್ನಗೊಂಡಿತು. ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಹಾಗೂ ನೇತೃತ್ವದಲ್ಲಿ ಮುಂಬೈಯ ಸಂತೋಷ್ ಜನ್ನ ಮತ್ತು ಶ್ರೀಮತಿ ರಜಿತಾ ಸಂತೋಷ್ ಜನ್ನಾ ದಂಪತಿಗಳು ಹಾಗೂ ಶಿವಮೊಗ್ಗದ ಶ್ರೀ ಸುದೀಪ್ ಮತ್ತು ಶ್ರೀಮತಿ ಪ್ರೀತಿ ಸುದೀಪ್ ದಂಪತಿಗಳಿಂದ ಕೃತಜ್ಞತಾ ಪೂರ್ವಕವಾಗಿ ಈ ಸೇವೆ ಏಕಕಾಲದಲ್ಲಿ ಸಮರ್ಪಿಸಲ್ಪಟ್ಟಿತು.. […]
ಕುಂದಾಪುರ: ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ ಬಾಲಕಿಯರ ಟೆನ್ನಿಕ್ವಾಯ್ಟ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಐಶು ಖಾರ್ವಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು ಬಾರ್ಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ […]
ಮುರುಡೇಶ್ವರ: ಸಮುದ್ರದ ಅಲೆಗೆ ಸಿಲುಕಿ ವಿದ್ಯಾರ್ಥಿ ಮೃತ್ಯು, ಓರ್ವನ ರಕ್ಷಣೆ.

ಮುರುಡೇಶ್ವರ: ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲತೀರದಲ್ಲಿ ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ಮೂಲದ ಪ್ರವಾಸಿ ವಿದ್ಯಾರ್ಥಿ ಓರ್ವ ಮೃತಪಟ್ಟಿದ್ದು, ಇನ್ನೋರ್ವ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಬೆಂಗಳೂರಿನ ವಿಧ್ಯಾಸೌದ ಪ್ರಥಮ ದರ್ಜೆ ಕಾಲೇಜಿನ ಗೌತಮ್ (17) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಒಟ್ಟೂ 220 ವಿದ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದರು ಸಮುದ್ರದ ಅಲೆಯಲ್ಲಿ ಮೋಜು ಮಸ್ತಿ ಮಾಡುವ ಸಂದರ್ಭ ಗೌತಮ್ ಹಾಗೂ ಧನುಶ್ ಅಲೆಯ ರಭಸಕ್ಕೆ ಕೊಚ್ಚಿ ಹೋಗಿರುವ ಪರಿಣಾಮಧನುಶ್ ಎಂಬಾತನನ್ನ ಸ್ಥಳೀಯ ಲೈಪ್ […]