ಕಾಪು ಮಾರಿಗುಡಿ ದೇವಸ್ಥಾನಕ್ಕೆ ಟೀಮ್ ಇಂಡಿಯಾ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಹಾಗೂ ಪತ್ನಿ ಭೇಟಿ.

ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಟಿ20 ವಿಶ್ವಕಪ್ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಈ ಹರಕೆ ತೀರಿಸಲು ಇದೀಗ ಕಾಪುವಿನ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ ಈ ವೇಳೆ […]
ಉಚಿತ ಉಪಕರಣ: ಅರ್ಜಿ ಆಹ್ವಾನ

ಉಡುಪಿ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಜಿಲ್ಲಾ ಔದ್ಯಮಿಕ ಕೇಂದ್ರ/ವೃತ್ತಿಪರ ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರಿಷಿಯನ್, ಕ್ಷೌರಿಕ, ಬ್ಯೂಟಿಪಾರ್ಲರ್ ಹಾಗೂ ಟೈಲರಿಂಗ್ ವೃತ್ತಿಯ ಗರಿಷ್ಟ ರೂ.8,000 ಮೊತ್ತದ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಉಪಕರಣಗಳನ್ನು ಪಡೆಯಲಿಚ್ಛಿಸುವ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಕುಶಲಕರ್ಮಿಗಳಿಂದ ವೆಬ್ಸೈಟ್ udupi.nic.in/zpudupi.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, ಬಿ […]
ನಾಳೆ “ಅವತಾರ ಸಿಲ್ಕ್”ನ 3ನೇ ಮಳಿಗೆ ಹೊನ್ನಾವರದಲ್ಲಿ ಶುಭಾರಂಭ

ಉತ್ತರ ಕನ್ನಡ ಜೆಲ್ಲೆಯ ಕಾರವಾರ, ಕುಮಟದ ಅತೀ ದೊಡ್ಡ ಮದುವೆ ಸೀರೆಗಳ ಸಂಗ್ರಹ ಮಳಿಗೆ ಎಂಬ ಹೆಗ್ಗಳಿಕೆಗೆ ಪಾತ್ರವಾದ “ಅವತಾರ ಸಿಲ್ಕ್” ನ 3ನೇ ಮಳಿಗೆಯು ನಾಳೆ ಹೊನ್ನಾವರ ಶರಾವತಿ ಸರ್ಕಲ್ ಬಳಿ ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ತರಹದ ಮಹಿಳೆಯರ ಉಡುಪುಗಳ ಬೃಹತ್ ಸಂಗ್ರಹವಿದೆ. ನುರಿತ ಗ್ರಾಹಕ ಸೇವಾ ಸಿಬ್ಬಂದಿಗಳು, ವಿಶಾಲ ಪಾರ್ಕಿಂಗ್ ವ್ಯವಸ್ಥೆ, ಉತ್ತಮ ಸೇವೆ ಹಾಗೂ ಉತ್ತಮ ಗುಣ ಮಟ್ಟದ ಬಟ್ಟೆಗಳು ಲಭ್ಯವಿದೆ. ಮಳಿಗೆಯಲ್ಲಿ ಆರಂಭಿಕ ಕೊಡುಗೆ ಮಹಿಳೆಯರ ಎಲ್ಲಾ ಬಟ್ಟೆಗಳ ಮೇಲೆ ಶೇಕಡಾ […]
ನಾಳೆ(ಜುಲೈ09) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ.

ಮಂಗಳೂರು: ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ನಾಳೆ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 09ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುನ್ನಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಕನ್ನರ್ಪಾಡಿಯಲ್ಲಿ ನೆರೆ ನೀರಿನ ಸೆಳೆತಕ್ಕೆ ಕೊಚ್ಚಿಹೋದ ಕಾರು: ಮೂವರು ಅಪಾಯದಿಂದ ಪಾರು

ಉಡುಪಿ: ನೆರೆ ನೀರಿನ ಸೆಳೆತಕ್ಕೆ ಕಾರೊಂದು ಕೊಚ್ಚಿಹೋದ ಘಟನೆ ಉಡುಪಿ ಕನ್ನರ್ಪಾಡಿಯಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆ ನೀರು ಸಾಗುವ ತೋಡಿನ ಸಮೀಪ ಸಾಗುತ್ತಿದ್ದ ಕಾರು ಏಕಾಏಕಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಕಾರಿನ ಬಾಗಿಲು ಒಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಕೊಚ್ಚಿಹೋದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.