ದಕ್ಷಿಣ ಕನ್ನಡ, ಉಡುಪಿಗೆ ಚಡ್ಡಿ ಗ್ಯಾಂಗ್ ಎಂಟ್ರಿ: ಕಳ್ಳರ ಕೃತ್ಯ ಸಿಸಿ ಕೆಮರಾದಲ್ಲಿ ಸೆರೆ.

ಮಂಗಳೂರು: ಮಂಗಳೂರು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‘ಚಡ್ಡಿ ಗ್ಯಾಂಗ್’ ಎಂಬ ಕಳ್ಳರ ತಂಡ ಶನಿವಾರ ರಾತ್ರಿ ಕೋಡಿಕಲ್ನ ಮನೆಯೊಂದರಲ್ಲಿ ಕಳ್ಳತನ ಘಟನೆ ನಡೆದಿದ್ದು, ಇದೇ ತಂಡ ಕೃತ್ಯವೆಸಗಿರುವ ಬಗ್ಗೆ ಪೊಲೀಸರು ಸಂದೇಹ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್, ಮಧ್ಯಪ್ರದೇಶ, ರಾಜಸ್ಥಾನ ಮೊದಲಾದೆಡೆಗಳ ಕಳ್ಳರನ್ನು ಹೊಂದಿರುವ ಚಡ್ಡಿ ಗ್ಯಾಂಗ್, ಈ ಹಿಂದೆಯೂ ದ.ಕ., ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮನೆ ಕಳ್ಳತನ ಕೃತ್ಯ ನಡೆಸಿದೆ. ಕಳ್ಳರು ಮೈಮೇಲೆ ಚಡ್ಡಿ, ಬನಿಯಾನ್, ತಲೆ ಮೇಲೊಂದು ಬಟ್ಟೆ ಸುತ್ತಿಕೊಂಡಿದ್ದು, ಗ್ಯಾಂಗ್ನ ಸದಸ್ಯರು ಸೊಂಟದಲ್ಲಿ […]
Kidzee ಮಣಿಪಾಲ್ ನಲ್ಲಿ ಟೀಚರ್ ಹುದ್ದೆಗಳು ಖಾಲಿ

ಮಣಿಪಾಲ: ಅನಂತನಗರದಲ್ಲಿರುವ Kidzee ಮಣಿಪಾಲ್ ನಲ್ಲಿ ಟೀಚರ್ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಯು ಇಂಗ್ಲೀಷ್ ಬಲ್ಲವರಾಗಿರಬೇಕು. ಆಸಕ್ತರು ಸಿವಿ ಮತ್ತು ರೆಸ್ಯೂಮ್ ಅನ್ನು [email protected] ಗೆ ಇ ಮೇಲ್ ಮಾಡಬಹುದು. ಸಂಪರ್ಕ: 9591982777
ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

ಕಾರ್ಕಳ: ದಕ್ಷಿಣ ಆಫ್ರಿಕಾದ ಪೊಟ್ಚೆಫ್ಸ್ಟ್ರೂಮ್ ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್ಲಿಫ್ಟಿಂಗ್ ಮತ್ತು ಚಾಂಪಿಯನ್ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಬೋಳ ಅವರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸೀನಿಯರ್ಸ್ ಸ್ಪರ್ಧಿಸಿದ್ದ ಅಕ್ಷತಾ ಪೂಜಾರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದವರು. ಸೀನಿಯರ್ಸ್ ವಿಭಾಗದ 52 ಕೆಜಿ ವಿಭಾಗದಲ್ಲಿ ಅಕ್ಷತಾ ಪೂಜಾರಿ ಬೋಳ ಈ ಸಾಧನೆ ಮಾಡಿದ್ದಾರೆ. ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಹಲವು ಸಾಧನೆ ಮಾಡಿರುವ ಅಕ್ಷತಾ ಪೂಜಾರಿ ಬೋಳ ಅವರು ಹಲವಾರು ಚಿನ್ನದ ಪದಕ […]
ಸಮುದಾಯದ ಸಹಕಾರದಿಂದ ಡೆಂಗ್ಯು ನಿಯಂತ್ರಣ ಸಾಧ್ಯ: ಡಾಕ್ಟರ್ ಶಮ

ಕಾರ್ಕಳ: ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ನೀರು ನಿಲ್ಲದಂತೆ ನೋಡಿಕೊಳ್ಳುವುದು. ನಿಂತ ನೀರಿನಲ್ಲಿ ಈಡಿಸ್ ಸೊಳ್ಳೆ ಉತ್ಪತ್ತಿಯಾಗಿ ಅದು ಮನುಷ್ಯರಿಗೆ ಕಚ್ಚುವ ಮೂಲಕ ಡೆಂಗ್ಯು ಹರಡುತ್ತದೆ. ಜ್ವರ ಬಂದಾಗ ಅದನ್ನು ನಿರ್ಲಕ್ಷಿಸದೆ ವೈದ್ಯರ ಬಳಿ ತೆರಳಿ ಪರೀಕ್ಷಿಸಿ ಸೂಕ್ತ ಔಷಧಿಯನ್ನು ತೆಗೆದುಕೊಳ್ಳಬೇಕು. ಸಮುದಾಯದ ಸಹಕಾರದಿಂದ ಡೆಂಗ್ಯು ನಿಯಂತ್ರಣ ಸಾಧ್ಯ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ಹಿರ್ಗಾನದ ವೈದ್ಯಾಧಿಕಾರಿಯಾಗಿರುವ ಡಾಕ್ಟರ್ ಶಮ ರವರು ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ […]
ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿಗೆ ಯುಜಿಸಿಯಿಂದ ಸ್ವಾಯತ್ತ ಸ್ಥಾನಮಾನದ ಮಾನ್ಯತೆ (ಅಟೋನೋಮಸ್)

ಮೂಡುಬಿದಿರೆ: ಕಲೆ, ಸಂಸ್ಕೃತಿ, ಕ್ರೀಡೆಯ ಮೂಲಕ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಮೂಡುಬಿದಿರೆ ತಾಲ್ಲೂಕಿನ ಮಿಜಾರಿನ ಪ್ರಕೃತಿಯ ಮಡಿನಲ್ಲಿರುವ ‘ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು’ (ಎಐಇಟಿ) ಸ್ವಾಯತ್ತ ಸ್ಥಾನಮಾನ ಪಡೆದಿದ್ದು, 2034-35ನೇ ಸಾಲಿನ ವರೆಗೆ ಅನ್ವಯಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವೈಶಿಷ್ಟ್ಯಗಳು:‘ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ನ್ಯಾಕ್ನ ಮೊದಲ ಸೈಕಲ್ ನಲ್ಲೇ A+ […]