ಬ್ರಾಹ್ಮಣ ಮಹಾ ಸಭಾ ಕೊಡವೂರು: ವಿಪ್ರ ಮಹಿಳಾ ದಿನಾಚರಣೆ

ಕೊಡವೂರು: ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಕೊಡವೂರು ಬ್ರಾಹ್ಮಣ ಮಹಾ ಸಭಾದಿಂದ ಅಪರೂಪದ ಚುಕ್ಕಿ ಮಂಡಲ ಆರ್ಟ್ ಕಲಾವಿಭಾಗದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕಲಾವಿದೆ, ರಂಗವಲ್ಲಿ,ಸಂಗೀತ, ವಾರ್ಲಿ ಕಲೆ, ಫ್ಯಾಬ್ರಿಕ್ ಪೇಂಟಿಂಗ್, ಕಸೂತಿ ಹೀಗೆ ಲಲಿತ ಕಲೆಗಳ ವಿವಿಧ ಪ್ರಕಾರಗಳಲ್ಲಿ ಸಾಧನೆಗೈದ ಶ್ರೀಮತಿ ಅಶ್ವಿನಿ ಶ್ರೀನಿವಾಸ್ ಇವರನ್ನು ಅವರ ಸ್ವಗೃಹ ಶ್ರೀವಾಸದಲ್ಲಿ ಅಭಿನಂದಿಸಲಾಯಿತು. ಬ್ರಾಹ್ಮಣ ಮಹಾ ಸಭಾ ಕೊಡವೂರು ಇದರ ಅಧ್ಯಕ್ಷರಾದ ಶ್ರೀನಿವಾಸ ಉಪಾಧ್ಯಾಯ, ಕೋಶಾಧಿಕಾರಿ ಶ್ರೀಧರ ಶರ್ಮ, ಸದಸ್ಯರಾದ ರೋಹಿಣಿ ಬಾಯರಿ, ಸೌಮ್ಯಾ ಗಣೇಶ್, ಕೌಸ್ತುಭ […]
ಕೆಎಂಸಿ ಮಣಿಪಾಲದಿಂದ ಮಣಿಪಾಲ್ ಹಾಟ್ಸ್-ಹ್ಯಾಂಡ್ಸ್ ಆನ್ ಟ್ರೈನಿಂಗ್ ಸೆಷನ್ಸ್: ಗ್ಲುಕೋಮಾ ಡಯಾಗ್ನೋಸ್ಟಿಕ್ಸ್” ಕುರಿತು ಯಶಸ್ವಿ ಕಾರ್ಯಾಗಾರ

ಮಣಿಪಾಲ: ವಿಶ್ವ ಗ್ಲುಕೋಮಾ ಸಪ್ತಾಹ 2024 ರ ಸಂಭ್ರಮಾಚರಣೆಯಲ್ಲಿ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೇತ್ರಶಾಸ್ತ್ರ ವಿಭಾಗವು ಮಾರ್ಚ್ 10 ರಂದು ‘ಮಣಿಪಾಲ್ ಹಾಟ್ಸ್: ಹ್ಯಾಂಡ್ಸ್ ಆನ್ ಟ್ರೈನಿಂಗ್ ಸೆಷನ್ಸ್ – ಗ್ಲುಕೋಮಾ ಡಯಾಗ್ನೋಸ್ಟಿಕ್ಸ್’ ಎಂಬ ಒಳನೋಟವುಳ್ಳ ಕಾರ್ಯಾಗಾರವನ್ನು ಆಯೋಜಿಸಿತ್ತು. ಉಡುಪಿ ಜಿಲ್ಲಾ ಆಪ್ತಾಲ್ಮಿಕ್ ಸೊಸೈಟಿಯ ಅಧ್ಯಕ್ಷರಾದ ಡಾ. ಶ್ರೀನಾಥ್ ಕಾಮತ್ ಅವರು ಉದ್ಘಾಟಿಸಿದ ಕಾರ್ಯಕ್ರಮವು ಸ್ನಾತಕೋತ್ತರ ವಿದ್ಯಾರ್ಥಿಗಳಲ್ಲಿ ರೋಗನಿರ್ಣಯದ ಕೌಶಲ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿತ್ತು . ಸಂಸ್ಥೆಯ ಸಂಸ್ಥಾಪಕ ಡಾ.ಟಿ.ಎಂ.ಎ.ಪೈ ಅವರ 125ನೇ […]
ಬೈಂದೂರು: ವ್ಯಕ್ತಿ ನಾಪತ್ತೆ

ಬೈಂದೂರು: ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ನಿವಾಸಿ ಹನೀಫ್ (42) ಎಂಬ ವ್ಯಕ್ತಿಯು ಮಾರ್ಚ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 6 ಅಡಿ 5 ಇಂಚು ಎತ್ತರ, ಸದೃಢ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08254- 251033, ಮೊ.ನಂ: 9480805459 ಅಥವಾ ಬೈಂದೂರು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-251031, […]
ವಾಣಿಜ್ಯ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ, ತಪ್ಪಿದ್ದಲ್ಲಿ ಪರವಾನಿಗೆ ರದ್ದು: ಜಿಲ್ಲಾಧಿಕಾರಿ

ಉಡುಪಿ: ಸರಕಾರದ ಆದೇಶದ ಅನ್ವಯ ಸ್ಥಳೀಯ ಪ್ರಾಧಿಕಾರ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗಳಿಂದ ಅನುಮತಿ ಪಡೆದು ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ ಕಟ್ಟಡ, ಕೈಗಾರಿಕೆ, ಆಸ್ಪತ್ರೆ, ಪ್ರಯೋಗಾಲಯಗಳು, ಹೋಟೆಲ್ ಸೇರಿದಂತೆ ಮತ್ತಿತರ ವಾಣಜ್ಯ ಸಂಸ್ಥೆಗಳು ಅನಾವರಣಗೊಳಿಸಿರುವ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡದ ಭಾಷೆ ಬಳಕೆ ಕಡ್ಡಾಯವಾಗಿರಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಅಧಿಕೃತ ಭಾಷೆಯ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ […]
ಮಲ್ಪೆ: ಯುವಕ ನಾಪತ್ತೆ

ಉಡುಪಿ: ಮಲ್ಪೆಯ ಬೋಟ್ವೊಂದರಲ್ಲಿ ಕೆಲಸಮಾಡಿಕೊಂಡಿದ್ದ ಒರಿಸ್ಸಾ ಮೂಲದ ಅಲೋಕ್ ತಂತಿ (24) ಎಂಬಾತನು ಯುಬಿಎಂಸಿ ಚರ್ಚ್ ಎದುರು ಇರುವ ರಾಜ್ ಎಲೆಕ್ಟ್ರಿಕಲ್ಸ್ ರವರ ಬಾಡಿಗೆ ರೂಮಿನಲ್ಲಿ ವಾಸವಿದ್ದು, ಮಾರ್ಚ್ 3 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ ಹಾಗೂ ಒರಿಸ್ಸಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ನಂ: 9480805447, ಉಡುಪಿ […]