ಕಾಪು: ಮುಖದಲ್ಲಿ ತಂಪು ಪಾನೀಯದ ಟಿನ್ ಸಿಲುಕಿಕೊಂಡು ಒದ್ದಾಡಿದ ಉಡ; ಉರಗ ತಜ್ಞರಿಂದ ರಕ್ಷಣೆ

ಉಡುಪಿ: ಆಹಾರ ಅರಸಿ ಬಂದ ಉಡವೊಂದರ ಮುಖಕ್ಕೆ ತಂಪು ಪಾನೀಯದ ಟಿನ್ ಸಿಲುಕಿಕೊಂಡಿತ್ತು. ಇದರ ಪರಿಣಾಮ ಕಳೆದ ಎರಡು ದಿನಗಳಿಂದ ಅತ್ತಿಂದಿತ್ತ ಅಲೆಯುತ್ತಿದ್ದ ಉಡವು ತನ್ನ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿತ್ತು. ಕಾಪುವಿನ ದಂಡ ತೀರ್ಥ ನಡಿಕೆರೆ ರತ್ನಕರ ಶೆಟ್ಟಿ ಅವರ ಜಮೀನಿನಲ್ಲಿ ಈ ಘಟನೆ ನಡೆದಿತ್ತು. ಕಾಪುವಿನ ಸ್ಥಳೀಯ ಉರಗ ರಕ್ಷಕ ಪ್ರಶಾಂತ್ ಪೂಜಾರಿ ಹಾಗೂ ಶಿವಾನಂದ ಪೂಜಾರಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಉಡವನ್ನು ಹಿಡಿದು ಅದರ ಮುಖಕ್ಕೆ ಅಂಟಿಕೊಂಡ ತಂಪು ಪಾನೀಯದ ಟಿನ್ಅನ್ನು ಸುರಕ್ಷಿತವಾಗಿ ಬಿಡಿಸಿದರು. […]
ಬೆಳ್ತಂಗಡಿ: ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಮೃತ್ಯು.

ಬೆಳ್ತಂಗಡಿ: ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಫಿಯಾ (6) ಮೃತ ಬಾಲಕಿ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದು, ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಿಸಿದ್ದರು. ಈ ಸಂದರ್ಭದಲ್ಲಿ ಮಗು ಅದರ […]
ಉಡುಪಿ: ಗಗನಕ್ಕೇರಿದ ತೆಂಗಿನಕಾಯಿ ದರ; ಗ್ರಾಹಕರು ಕಂಗಾಲು

ಉಡುಪಿ: ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿವೆ. ನವರಾತ್ರಿಯ ಹೊಸ್ತಿಲಲ್ಲಿ ತೆಂಗಿನ ದರ ಗಗನಕ್ಕೇರಿದೆ. ಪ್ರತಿ ಕೆಜಿ ತೆಂಗಿನಕಾಯಿಗೆ 50 ರೂಪಾಯಿ ನೀಡಬೇಕಾಗಿದೆ. ಪ್ರತಿಕೂಲ ಹವಾಮಾನ ಹಾಗೂ ರೋಗ ಬಾಧೆಗಳಿಂದ ತೆಂಗಿನ ಇಳುವರಿಗೆ ಹಿನ್ನಡೆಯಾಗಿದೆ. ಇನ್ನು ಕೆಲವು ದಿನಗಳಲ್ಲಿ ತೆಂಗಿನ ದರ ಮತ್ತಷ್ಟು ಏರುವ ಸಾಧ್ಯತೆಗಳಿವೆ. ತೆಂಗಿನಕಾಯಿಗೆ ಕೆಜಿಗೆ 50 ರೂಪಾಯಿ ತಲುಪಿದ್ದು ಕರಾವಳಿಯಲ್ಲಿ ಇದೇ ಮೊದಲು. ಈವರೆಗೆ ಅತಿಹೆಚ್ಚೆಂದರೆ 42 ರೂಪಾಯಿ ದರ ಇತ್ತು. ಹಿಂದೆಂದೂ ಕಂಡಿರದ ದರ ಏರಿಕೆ ಗ್ರಾಹಕನ್ನು ಕಂಗಾಲು ಮಾಡಿದೆ.ಪ್ರತಿಕೂಲ ಹವಾಮಾನದಿಂದ ತೆಂಗಿನ […]
ವೈಭವದ ‘ಉಡುಪಿ- ಉಚ್ಚಿಲ ದಸರಾ-2024’ ಕ್ಕೆ ವಿದ್ಯುಕ್ತ ಚಾಲನೆ

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ-ಉಚ್ಚಿಲ ದಸರಾ ಮಹೋತ್ಸವಕ್ಕೆ ಇಂದು ಚಾಲನೆ ನೀಡಲಾಯಿತು.ದೇವಸ್ಥಾನದ ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಸಭಾಂಗಣದಲ್ಲಿ ಆಕರ್ಷಕವಾಗಿ ನಿರ್ಮಿಸಲಾಗಿರುವ ಮಂಟಪದಲ್ಲಿ ನವದುರ್ಗೆಯರ ಮತ್ತು ಶ್ರೀ ಶಾರದಾ ಮಾತೆಯ ವಿಗ್ರಹಗಳನ್ನು ಕ್ಷೇತ್ರದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ಪ್ರಧಾನ ಪುರೋಹಿತರಾದ ಕೆವಿ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಪ್ರತಿಷ್ಠಾಪಿಸಲಾಯಿತು. ಪುರೋಹಿತರಾದ ಕೆವಿ ರಾಘವೇಂದ್ರ ಉಪಾಧ್ಯಾಯರು ಪ್ರತಿಷ್ಠಾಪನಾ ಪೂಜೆ ನೆರವೇರಿಸಿ […]
ಉಡುಪಿ: ಬಿಜೆಪಿ ಯುವಮೋರ್ಚಾದಿಂದ ಸದಸ್ಯತ್ವ ಅಭಿಯಾನ

ಉಡುಪಿ: ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ನೇತೃತ್ವದಲ್ಲಿ ಉಡುಪಿ ನಗರದ ಮೀನು ಮಾರುಕಟ್ಟೆ, ರಿಕ್ಷಾನಿಲ್ದಾಣ ಹಾಗೂ ಅಂಗಡಿ ಮುಗ್ಗಟ್ಟುಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ 300ಕ್ಕೂ ಹೆಚ್ಚು ಸಾರ್ವಜನಿಕರು ಮಿಸ್ ಕಾಲ್ ನೀಡಿ ಬಿಜೆಪಿ ಸದಸ್ಯತ್ವ ಪಡೆದರು.ಯುವಮೋರ್ಚಾ ಪ್ರಭಾರಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಕಾಪು ,ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಶಶಾಂಕ್ ಶಿವತ್ತಾಯ, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ಗಜೇಂದ್ರ ಎಸ್ ಬೇಲೆಮನೆ, ಉಡುಪಿ […]