ಮಂಗಳೂರು: ಸಮುದ್ರದ ಅಲೆಗೆ ಮೂವರು ಯುವಕರು ನೀರುಪಾಲು

ಮಂಗಳೂರು: ಮಂಗಳೂರು ಪಣಂಬೂರು ಬೀಚ್ನಲ್ಲಿ ಮೂವರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ. ನಾಪತ್ತೆಯಾಗಿರುವವರನ್ನು ಮಿಲನ್ (20), ಲಿಖಿತ್ (18) ಮತ್ತು ನಾಗರಾಜ್ (24) ಎಂದು ಗುರುತಿಸಲಾಗಿದೆ. ಮಿಲನ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರೆ, ಲಿಖಿತ್ ಕೈಕಂಬದ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿ, ನಾಗರಾಜ್ ಬೈಕಂಪಾಡಿಯಲ್ಲಿರುವ ಕಂಪನಿಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರು. ಇವರು ಸ್ನೇಹಿತರಾಗಿದ್ದು, ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಬೃಹತ್ ಅಲೆ ಅಪ್ಪಳಿಸಿ ಕೊಚ್ಚಿಕೊಂಡು ಹೋಗಿದ್ದಾರೆ. […]
ಬಂಟ್ವಾಳ “ಮೂಡೂರು-ಪಡೂರು” ಜೋಡುಕರೆ ಕಂಬಳ ಕೂಟದ ಫಲಿತಾಂಶ.

ಬಂಟ್ವಾಳ: ಬಂಟ್ವಾಳದಲ್ಲಿ ಮಾ.02 ರಂದು ನಡೆದ “ಮೂಡೂರು – ಪಡೂರು” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 09 ಜೊತೆಅಡ್ಡಹಲಗೆ: 04 ಜೊತೆಹಗ್ಗ ಹಿರಿಯ: 15 ಜೊತೆನೇಗಿಲು ಹಿರಿಯ: 29 ಜೊತೆಹಗ್ಗ ಕಿರಿಯ: 20ಜೊತೆನೇಗಿಲು ಕಿರಿಯ: 105 ಜೊತೆಒಟ್ಟು ಕೋಣಗಳ ಸಂಖ್ಯೆ: 182 ಜೊತೆ••••••••••••••••••••••••••••••••••••••••••••••ಕನೆಹಲಗೆ:( ನೀರು ನೋಡಿ ಬಹುಮಾನ ) ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೊಹಲಗೆ […]
ಬ್ರಹ್ಮಾವರ: ಶೂಟೌಟ್ ಮಾಡಿ ಯುವಕನ ಹತ್ಯೆ.

ಬ್ರಹ್ಮಾವರ: ದುಷ್ಕರ್ಮಿಗಳ ತಂಡವೊಂದು ಶೂಟೌಟ್ ಮಾಡಿ ಯುವಕನನ್ನು ಹತ್ಯೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ 9:30 ಸುಮಾರಿಗೆ ಕೃಷ್ಣ ಅವರು ಮನೆಯಲ್ಲಿ ಊಟ ಮಾಡುತ್ತಿದ್ದರು. ಈ ವೇಳೆ ಏಕಾಏಕಿಯಾಗಿ ಮನೆಗೆ ದಾಳಿ ನಡೆಸಿದ ದುಷ್ಕರ್ಮಿಗಳ ತಂಡವು ಕೃಷ್ಣ ಅವರ ಮೇಲೆ ಫೈರಿಂಗ್ ನಡೆಸಿದೆ. ಬಳಿಕ ಅಲ್ಲಿಂದ ಪರಾರಿಯಾಗಿದೆ. ಎಂದು ತಿಳಿದುಬಂದಿದೆ. ಮಣಿಪಾಲದಲ್ಲಿ ಕೆಲಸ […]
ಇಂದು ಎಂ.ಸಿ.ಸಿ. ಬ್ಯಾಂಕಿನ ಹೊಸ ಬ್ರಹ್ಮಾವರ ಶಾಖೆಯ ಉದ್ಘಾಟನೆ.

ಬ್ರಹ್ಮಾವರ: ಬ್ರಹ್ಮಾವರ, ವಾರಂಬಳ್ಳಿಯ ಆಕಾಶವಾಣಿ ವೃತ್ತದ ಬಳಿ, ನೆಲಮಹಡಿ ಶೇಷಗೋಪಿ ಪ್ಯಾರಡೈಸ್ ನಲ್ಲಿ ಎಂ.ಸಿ.ಸಿ. ಬ್ಯಾಂಕಿನ ೧೭ನೇ ಹೊಸ ಶಾಖೆಯಾದ ಬ್ರಹ್ಮಾವರ ಶಾಖೆಯ ಉದ್ಘಾಟನೆಯು ಮಾ.೩ ರಂದು ಬೆಳಿಗ್ಗೆ ೧೧.೧೫ಕ್ಕೆ ಜರಗಲಿರುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಶ್ರೀ ಅನಿಲ್ ಲೋಬೊ, ಅಧ್ಯಕ್ಷರು, ಎಂ.ಸಿ.ಸಿ. ಬ್ಯಾಂಕ್ ಲಿ., ಮಂಗಳೂರು ನಡೆಸಲಿದ್ದು, ಶಾಖೆ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಸದಸ್ಯರಾದ ಶ್ರೀ ಯಶಪಾಲ್ ಸುವರ್ಣ ಅವರು ನಡೆಸಲಿದ್ದಾರೆ. ರೆ| ಫಾ| ಜಾನ್ ಫೆರ್ನಾಂಡಿಸ್, ಧರ್ಮಗುರುಗಳು, ಹೋಲಿ ಫ್ಯಾಮಿಲಿ ಚರ್ಚ್, ಬ್ರಹ್ಮಾವರ […]
ಉಡುಪಿ: ನೀರಿನ ಹಾಹಾಕಾರ ತಪ್ಪಿಸಲು ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಭವಿಷ್ಯದಲ್ಲಿ ನೀರಿನ ಹಾಹಾಕಾರ ತಪ್ಪಿಸಲು ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಜಮೀನುಗಳಲ್ಲಿ ಮಳೆ ನೀರಿನ ಕೊಯ್ಲು ಅಳವಡಿಸಿಕೊಳ್ಳುವುದು ಅತ್ಯಂತ ಸೂಕ್ತ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜನೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉದಯವಾಣಿ ಸಹಯೋಗದೊಂದಿಗೆ ನಡೆದ ಮಳೆ ನೀರು ಕೊಯ್ಲು ಕಾರ್ಯಗಾರವನ್ನು ಗಿಡಕ್ಕೆ ನೀರನ್ನು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಉಡುಪಿ ಜಿಲ್ಲೆಯು ಕರಾವಳಿ ಪ್ರದೇಶದಲ್ಲಿದ್ದು, ಸಮುದ್ರ […]