ಜ್ಞಾನಸುಧಾ: ಜೆ.ಇ.ಇ. ಮೈನ್ – 2024 ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, 35 ವಿದ್ಯಾರ್ಥಿಗಳಿಗೆ ಗೌರವ ಒಟ್ಟು 2.89 ಲಕ್ಷ ರೂ. ನಗದು ಪುರಸ್ಕಾರ ವಿತರಣೆ

ಕಾರ್ಕಳ: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ವಿಭಾಗಕ್ಕೆ ಎನ್.ಟಿ.ಎ ನಡೆಸುವ ಜೆಇಇ ಮೈನ್ಸ್ ಪ್ರಥಮ ಹಂತದ ಪರೀಕ್ಷೆಯ ಫಲಿತಾಂಶದಲ್ಲಿ 97 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿದ ಜ್ಞಾನಸುಧಾದ 35 ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ 2.89 ಲಕ್ಷ ನಗದು ಪುರಸ್ಕಾರದೊಂದಿಗೆ ಗೌರವಿಸಲಾಯಿತು. ಉಡುಪಿ ಜಿಲ್ಲೆಯಲ್ಲೇ 99.7ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿದ ಎಲ್ಲಾ 3 ವಿದ್ಯಾರ್ಥಿಗಳು ಜ್ಞಾನಸುಧಾದವರಾಗಿದ್ದಾರೆ ಎಂಬುದು ಶ್ಲಾಘನೀಯ ಸಂಗತಿ. 99.7 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿದ ಮೂವರು ವಿದ್ಯಾರ್ಥಿಗಳಾದ ಪ್ರಿಯಾಂಶ್ ಎಸ್.ಯು (99.7 ಪರ್ಸಂಟೈಲ್), ಬಿಪಿನ್ […]
ಯುವಕ-ಯುವತಿಯರಿಗೆ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ

ಉಡುಪಿ: ನೆಹರು ಯುವ ಕೇಂದ್ರ ವತಿಯಿಂದ ಜಿಲ್ಲೆಯ 18 ರಿಂದ 25 ವರ್ಷ ಒಳಗಿನ ಯುವಕ-ಯುವತಿಯರಿಗೆ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ಸಂಸತ್ ಉತ್ಸವ (National Youth Parliament Festival-2024) ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಭಾಷಣ ಮಾಡಲು 5 ನಿಮಿಷಕ್ಕೆ ಕಾಲಾವಕಾಶವಿದ್ದು, ಹಿಂದಿ, ಇಂಗ್ಲಿಷ್ ಹಾಗೂ ಕನ್ನಡ ಭಾಷೆಗಳಲ್ಲಿ ಬಾಷಣ ಮಾಡಬಹುದಾಗಿದೆ. ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಯು ಆನ್ಲೈನ್, ವರ್ಚುವಲ್ ಮೂಲಕ ನಡೆಯಲಿದೆ. ರಾಷ್ಟ್ರಮಟ್ಟದಲ್ಲಿ ಅಗ್ರ ಮೂರು ವಿಜೇತರಿಗೆ ಕ್ರಮವಾಗಿ ರೂ.2 ಲಕ್ಷ, […]
ಜೆ.ಇ.ಇ ಮೈನ್ಸ್ ನಲ್ಲಿ BASE ವಿದ್ಯಾರ್ಥಿಗಳ ಅಮೋಘ ಸಾಧನೆ: 9 ವಿದ್ಯಾರ್ಥಿಗಳಿಗೆ 100 ಪರ್ಸೆಂಟೈಲ್

ಉಡುಪಿ: ಜೆ.ಇ.ಇ ಮೈನ್ಸ್ ಸೆಷನ್ 1 ನಲ್ಲಿ BASE ಸಂಸ್ಥೆಯ 9 ವಿದ್ಯಾರ್ಥಿಗಳು ಭೌತಶಾಸ್ತ್ರ,ರಸಾಯನಶಾಸ್ತ್ರ ಹಾಗೂ ಗಣಿತದಲ್ಲಿ 100 ಪರ್ಸೆಂಟೈಲ್ ಅಂಕಗಳಿಸಿದ್ದಾರೆ. 70 ವಿದ್ಯಾರ್ಥಿಗಳು 99% ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದ್ದರೆ, 266 ವಿದ್ಯಾರ್ಥಿಗಳು 95% ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕ, ಅಧ್ಯಾಪಕ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ರಾಜ್ಯದ 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ.

ಬೆಂಗಳೂರು: ರಾಜ್ಯದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಪ್ರವಾಸೋಧ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿದೆ. 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ ನಿರ್ಮಿಸಲಾಗುವುದು ಎಂದು ಹೇಳಿದರು. ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಗೆ 100 ಕೋಟಿ ರೂ.:ಕೊಪ್ಪಳ ಜಿಲ್ಲೆಯ […]
ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಗೆ ಕಿರಿಕ್ ಪಾರ್ಟಿ ‘ರಶ್ಮಿಕಾ ಮಂದಣ್ಣ’ ಹೆಸರು ಸೇರ್ಪಡೆ..!

ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಗೆ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೆಸರು ಸೇರ್ಪಡೆಗೊಂಡಿದೆ. ಮಂದಣ್ಣರ ವೃತ್ತಿಯ ಗ್ರಾಫು ವರ್ಷದಿಂದ ವರ್ಷಕ್ಕೆ ಏರುತ್ತಲೇ ಸಾಗುತ್ತಿದೆ. ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ನಟನೆ ಆರಂಭಿಸಿದ ರಶ್ಮಿಕಾ ಮಂದಣ್ಣ ಟಾಲಿವುಡ್ನ ಟಾಪ್ ನಟಿ ಎನಿಸಿಕೊಂಡು ಈಗ ಬಾಲಿವುಡ್ನಲ್ಲಿಯೂ ಹವಾ ಎಬ್ಬಿಸಿದ್ದಾರೆ. ಬಾಲಿವುಡ್ನ ಸ್ಟಾರ್ ನಟರುಗಳೊಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದೆಲ್ಲದರ ನಡುವೆ ಗೌರವವೊಂದಕ್ಕೆ ರಶ್ಮಿಕಾ ಮಂದಣ್ಣ ಭಾಜನರಾಗಿದ್ದಾರೆ. ಇದೀಗ ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಹೆಸರು ಸೇರ್ಪಡೆಗೊಂಡಿದೆ. ಪ್ರತಿಷ್ಠಿತ ಫೋರ್ಬ್ಸ್ […]