ಮದುವೆಯಾಗಲು ಖ್ಯಾತ ಟಿವಿ ನಿರೂಪಕನನ್ನು ಅಪಹರಿಸಿದ ಯುವತಿ..!

ಹೈದರಾಬಾದ್: ಮಹಿಳಾ ಉದ್ಯಮಿಯೊಬ್ಬಳು ಮದುವೆಯಾಗಲು ಖ್ಯಾತ ಟಿವಿ ನಿರೂಪಕನನ್ನು ಅಪಹರಿಸಿ ಜೈಲು ಸೇರಿದ ಘಟನೆ ಶುಕ್ರವಾರ ಹೈದರಾಬಾದ್ ನಲ್ಲಿ ನಡೆದಿದೆ. ಬಂಧಿತ ಭೋಗಿರೆಡ್ಡಿ ತ್ರಿಶಾ ಐದು ಸ್ಟಾರ್ಟಪ್ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕಿ ಎಂದು ತಿಳಿದು ಬಂದಿದೆ. ತ್ರಿಶಾ ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ನಲ್ಲಿ ಟಿವಿ ಆಂಕರ್ ಪ್ರಣವ್ ಎಂಬವರ ಪ್ರೊಫೈಲ್ ನೋಡಿ ಮದುವೆ ಪ್ರಸ್ತಾಪ ಮಾಡಿದ್ದಳು. ಈ ಪ್ರಸ್ತಾಪಕ್ಕೆ ಪ್ರಣವ್ ಕಡೆಯಿಂದಲೂ ಒಪ್ಪಿಗೆ ಸಿಕ್ಕಿತ್ತು. ಇದಾದ ಬಳಿಕ ಚಾಟಿಂಗ್ ಆರಂಭಿಸಿ ಹಲವು ತಿಂಗಳ ಬಳಿಕ ಅದು ನಕಲಿ […]
ಫೆ.27: ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಅಸೋಸಿಯೇಷನ್ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇರುವ ವಿವಿಧ ಕ್ಯಾಟರಿಂಗ್ ಮಾಲೀಕರು ಒಗ್ಗೂಡಿಸಿ ನೂತನವಾಗಿ ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಅಸೋಸಿಯೇಷನ್ ಸ್ಥಾಪಿಸಿದ್ದು, ಇದರ ಉದ್ಘಾಟನೆ ಸಮಾರಂಭವು ಇದೇ ಫೆ. 27ರಂದು ಉಡುಪಿ ಸಂತೆಕಟ್ಟೆಯ ಗ್ರೀನ್ ಎಕ್ರೆಸ್ ಒಪನ್ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ ತಿಳಿಸಿದರು. ಈ ಬಗ್ಗೆ ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದ ಅವರು, ಈಗಾಗಲೇ ಜಿಲ್ಲೆಯಾದ್ಯಂತ ಸುಮಾರು ಒಂದು ಸಾವಿರಕ್ಕೂ ಅಧಿಕ ಕ್ಯಾಟರಿಂಗ್ ಉದ್ಯಮ ನಡೆಸುತ್ತಿರುವ ಮಾಲೀಕರನ್ನು […]
ಮಾನವನು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಕ್ರಿಯಾಶೀಲರಾಗಿರಲು ಸಾಧ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಫೆಬ್ರವರಿ 23: ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನವನು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿ ಲವಲವಿಕೆಯಿಂದ ದೈನಂದಿನ ಕೆಲಸ ಕಾರ್ಯಗಳಲ್ಲಿ ಕ್ರಿಯಾಶೀಲರಾಗಿ ತೊಡಗಲು ಸಾಧ್ಯ. ಸರಕಾರಿ ನೌಕರರು ಪ್ರತಿದಿನ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಜಿಲ್ಲೆ ಇವರ […]
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ: ಅರ್ಜಿ ಆಹ್ವಾನ

ಉಡುಪಿ, ಫೆಬ್ರವರಿ 23: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಾರ್ಕಳ ಮತ್ತು ಕಾಪುವಿನ ಅಲ್ಪಸಂಖ್ಯಾತರ ಮೌಲಾನ ಅಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಯಲ್ಲಿ 6 ರಿಂದ 9ನೇ ತರಗತಿಗೆ ಉಚಿತ ಪ್ರವೇಶ ಪಡೆಯಲು ಅಲ್ಪಸಂಖ್ಯಾತ ಜನಾಂಗದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ಧರು, ಸಿಖ್ಖರು, ಪಾರ್ಸಿ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ದೂ.ಸಂ:0820-2573596, ಕಾರ್ಕಳ ಮೌಲಾನಾ ಆಜಾದ್ ಮಾದರಿ ಶಾಲೆ ಮುಖ್ಯೋಪಾಧ್ಯಾಯರ […]
ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಿರಿಸುವ ಅನುದಾನದಲ್ಲಿ ಶೀಘ್ರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ

ಉಡುಪಿ, ಫೆಬ್ರವರಿ 23: ಸರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಶ್ರೇಯೋಭಿವೃದ್ಧಿಗೆ ಮಿಸಲಿರಿಸಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ನಿಗದಿತ ಕಾಲಾವಧಿಯಲ್ಲಿ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿ ಯ ಜಿಲ್ಲಾಧಿಕಾರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಿತರಕ್ಷಣೆ ಹಾಗೂ ಕುಂದು ಕೊರತೆ ಸಭೆಯ ಅಧ್ಯಕ್ಷತೆ […]