ಕುಂದಾಪುರ: ಎಂ ಐ ಟಿ ಕೆ ಯಲ್ಲಿ ಕಾರ್ಯಾಗಾರ

ಕುಂದಾಪುರ: ಎಂ ಐ ಟಿ ಕುಂದಾಪುರ ಇಲ್ಲಿನ ಎಂ.ಬಿ.ಎ ವಿಭಾಗದಲ್ಲಿ ನ್ಯಾವಿಗೇಟಿಂಗ್ ದಿ ಡಿಜಿಟಲ್ ಫ್ರಾಂಟಿಯರ್: ದಿ ಫ್ಯೂಚರ್ ಆಫ್ ಟೆಕ್-ಡ್ರೈವನ್ ಎಂಟರ್‌ಪ್ರೈಸಸ್ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಅನೀಶ್ ಬಿ., ಬಿಸಿನೆಸ್ ಅನಾಲಿಸ್ಟ್, ಟಿಎಟೊಎವ್ರಿ, ಬೆಂಗಳೂರು ಇವರು ಆಗಮಿಸಿ ಪ್ರಥಮ ವರ್ಷದ ಎಂ.ಬಿ.ಎ ವಿದ್ಯಾರ್ಥಿಗಳಿಗೆ ಐಟಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ, ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಯುಗದಲ್ಲಿ ಎಂ.ಬಿ.ಎ ಪದವೀಧರರ ಪಾತ್ರದ ಬಗ್ಗೆ ತಿಳಿಸಿದರು. ಹಾಗೆಯೇ ಕೆಲವೊಂದು ಕೇಸ್ ಸ್ಟಡಿಗಳ ಉದಾಹರಣೆ ನೀಡಿ ವಿದ್ಯಾರ್ಥಿಗಳು […]

ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಪ್ರಕರಣ ದಾಖಲು

ಉಡುಪಿ: ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಆರೋಪಿ ಶರಣ್ ಪಂಪ್ ವೆಲ್ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ತನಿಖೆಯು ಪೂರ್ಣಗೊಳ್ಳುವ ಮೊದಲೇ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ […]

ಎನ್ ಸಿಬಿಯಿಂದ ಕಾರ್ಯಾಚರಣೆ: ಮಣಿಪಾಲದಲ್ಲಿ ಡ್ರಗ್ ವ್ಯವಹಾರಕ್ಕಾಗಿ ಕಾಲ್ ಸೆಂಟರ್ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ಉಡುಪಿ: ಮಾದಕ ವಸ್ತು ನಿಯಂತ್ರಣ ಸಂಸ್ಥೆ (ಎನ್‌ಸಿಬಿ) ‘ಆಪರೇಷನ್‌ ಮೆಡ್ ಮ್ಯಾಕ್ಸ್‌’ ಹೆಸರಿನಲ್ಲಿ ಈಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಡ್ರಗ್ಸ್‌ ವ್ಯವಹಾರಕ್ಕಾಗಿ ಮಣಿಪಾಲದಲ್ಲಿ ಕಾಲ್‌ ಸೆಂಟರ್‌ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.ಮಣಿಪಾಲದ ಹಯಗ್ರೀವ ನಗರದಲ್ಲಿ ಕಾಲ್‌ಸೆಂಟರ್‌ ನಡೆಸುತ್ತಿದ್ದ ಸುರೇಶ್‌ ಕುಮಾರ್‌ ಬಂಧಿತ ಆರೋಪಿ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ‘ಈ ಕಾಲ್‌ ಸೆಂಟರ್‌ನಲ್ಲಿ ಹತ್ತು ಮಂದಿ ಕೆಲಸ ಮಾಡುತ್ತಿದ್ದು, ಅವರಿಗೆ ಈ ವ್ಯವಹಾರದ ಬಗ್ಗೆ ಮಾಹಿತಿ ಇರಲಿಲ್ಲ. ಇದು ದೆಹಲಿ ಕೇಂದ್ರಿತ ಡ್ರಗ್ಸ್‌ ಜಾಲವಾಗಿದ್ದು, ಇದರ ಗ್ರಾಹಕರು ವಿದೇಶಿಯರಾಗಿದ್ದರು. ಉಡುಪಿ […]

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಾನಾದ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’

ಅಕ್ರಾ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಾನಾದ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಐದು ದೇಶಗಳ ಪ್ರವಾಸ ಕೈಗೊಂಡಿರುವ ಪ‍್ರಧಾನಿ ಮೋದಿ ಮೊದಲಿಗೆ ಘಾನಾಕ್ಕೆ ಬಂದಿಳಿದರು. ಘಾನಾ ಅಧ್ಯಕ್ಷ ಜಾನ್‌ ಡ್ರಾಮಾನಿ ಅವರೇ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡು, ಸ್ವಾಗತಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಾನಾದ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’ ನೀಡಿ ಗೌರವಿಸಲಾಗಿದ್ದು, ‘ವಿಶಿಷ್ಟ ರಾಜನೀತಿ ಹಾಗೂ ಜಾಗತಿಕ ಪ್ರಭಾವಿ ನಾಯಕತ್ವ’ವನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ದಿ ಆಫೀಸರ್‌ […]

ಉಡುಪಿ: ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ; ರಮೇಶ್ ಕಾಂಚನ್ ಆಗ್ರಹ

ಉಡುಪಿ: ಬ್ರಹ್ಮಾವರದ ಕುಂಜಾಲಿನಲ್ಲಿ ಗೋ ಹತ್ಯೆ ಮಾಡಿ ಅದರ ರುಂಡ ಮತ್ತು ಕಾಲುಗಳನ್ನು ರಸ್ತೆಗೆ ಎಸೆದ ಕೃತ್ಯದ ಹಿಂದೆ ಜಿಹಾದಿ ವ್ಯಕ್ತಿಗಳ ಕೈವಾಡ ಇದೆ ಎಂದು ಹೇಳಿರುವ ವಿಶ್ವ ಹಿಂದೂ ಪರಿಷದ್ ನಾಯಕ ಶರಣ್ ಪಂಪ್ ವೆಲ್ ಅವರನ್ನು ಕೂಡಲೇ ಬಂಧಿಸಿ ಅವರ ಹೇಳಿಕೆ ಕುರಿತು ಇರುವ ಮಾಹಿತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪಡೆಯಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ. ಶರಣ್ ಪಂಪ್ ವೆಲ್ ಅವರು ಈಗಾಗಲೇ ತಮ್ಮ ಕೋಮು ಪ್ರಚೋದನಾತ್ಮಕ […]