ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು. ಬಳಿಕ ಸುದ್ದಿಗಾರರಿಗೆ ಬಜೆಟ್ ಮಂಡನೆಯ ಬಗ್ಗೆ ಮಾಹಿತಿ ನೀಡಿದರು. ವಿಧಾನಮಂಡಲ ಅಧಿವೇಶನ ಮಾರ್ಚ್ 3 ರಿಂದ ಪ್ರಾರಂಭವಾಗುತ್ತದೆ. ಬಜೆಟ್ ಮಾರ್ಚ್ 7ರಂದು ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ […]
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI): ಗೃಹ, ವಾಣಿಜ್ಯ, ಹಾಗೂ ವಾಹನ ಸಾಲದ ಬಡ್ಡಿ ಇಳಿತ.

ಮುಂಬೈ: ಸಾರ್ವಜನಿಕ ವಲ ಯದಲ್ಲಿ ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತನ್ನ ಸಾಲದ ಮೇಲಿನ ಬಡ್ಡಿದರ ವನ್ನು ಶೇ. 0.25ರಷ್ಟು ಇಳಿಕೆ ಮಾಡಿದೆ. ಇಳಿಕೆ ಫೆ.15 ರಿಂದಲೇ ಜಾರಿಗೆ ಬರಲಿದೆ ಎಂದು ಎಸ್ಬಿಐ ತಿಳಿಸಿದೆ. ಫೆ.7ರಂದು ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಶೇ.0.25ರಷ್ಟು ಕಡಿತಗೊಳಿಸಿ ಶೇ.6.25ಕ್ಕೆ ಇಳಿಕೆ ಮಾಡಿದ ಬೆನ್ನಲ್ಲೇ ಎಸ್ಬಿಐ ಈ ನಿರ್ಧಾರ ಪ್ರಕಟಿ ಸಿದೆ. ಹೀಗಾಗಿ ಗೃಹ, ವಾಹನ,ವೈಯಕ್ತಿಕ, ವಾಣಿಜ್ಯ ಸಾಲದ ಮೇಲಿನ ಸಾಲದ ಬಡ್ಡಿದರಗಳು ಇಳಿಕೆಯಾಗಲಿವೆ. […]
ಮೂಡಿಗೆರೆ:ಅಳಿಯ ನಿಂದಲೇ ಅತ್ತೆಯ ಹತ್ಯೆ; ಅಳಿಯ ಪರಾರಿ

ಚಿಕ್ಕಮಗಳೂರು: ತಲೆಗೆ ಸುತ್ತಿಗೆಯಿಂದ ಹೊಡೆದು ಅಳಿಯನೋರ್ವ ಅತ್ತೆಯನ್ನೇ ಹತ್ಯೆಗೈದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದ್ದು ಭಾನುವಾರ ವಿಚಾರ ಬೆಳಕಿಗೆ ಬಂದಿದೆ. ಯಮುನಾ(65) ಮೃತ ದುರ್ದೈವಿಯಾಗಿದ್ದು, ಅಳಿಯ ಶಶಿಧರ್ ಕೊಲೆ ಆರೋಪಿಯಾಗಿದ್ದಾನೆ. ಅತ್ತೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಹತ್ಯೆಗೈಯ್ಯಲಾಗಿದ್ದು ಘಟನೆಯ ಬಳಿಕ ಆರೋಪಿ ಶಶಿಧರ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಘಟನೆ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು ತಲೆಮರೆಸಿಕೊಂಡಿರುವ ಶಶಿಧರನ ಪತ್ತೆಗೆ […]
ಕುಂದಾಪುರದಲ್ಲಿ ಬ್ರಹ್ಮಾವರದ ಜನನಿ ಎಂಟರ್ ಪ್ರೈಸಸ್ ನ ಎರಡನೇ ಶಾಖೆಯ ಉದ್ಘಾಟನಾ ಸಮಾರಂಭ

ಕುಂದಾಪುರ: ಕುಂದಾಪುರವು ಅತಿವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಇಲ್ಲಿನ ಜನರಿಗೆ ಜನನಿ ಎಂಟರ್ಪ್ರೈಸಸ್ನ ಶಾಖೆ ಆರಂಭವಾದ ಕಾರಣ ಖರೀದಿಗೆ ಅನುಕೂಲವಾಗಲಿದೆ. ನಗರ ಹಾಗೂ ಗ್ರಾಮಾಂತರದ ಜನತೆ ಖರೀದಿಯ ಖುಷಿಯನ್ನು ಈ ಮಳಿಗೆಯ ಮೂಲಕ ಅನುಭವಿಸಲಿ ಎಂದು ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ ಹೇಳಿದರು. ಅವರು ರವಿವಾರ ಕುಂದಾಪುರದ ಹಂಗಳೂರಿನ ಯುನಿಟಿ ಹಾಲ್ ಬಳಿ ಯುವ ದ್ವೀಪ ವಸತಿ ಸಂಕೀರ್ಣದಲ್ಲಿ ಗೃಹೋಪಯೋಗಿ ಉಪಕರಣಗಳ ಪ್ರಸಿದ್ಧ ಮಳಿಗೆಯಾಗಿರುವ ಬ್ರಹ್ಮಾವರದ ಜನನಿ ಎಂಟರ್ ಪ್ರೈಸಸ್ ನ ಎರಡನೇ ಶಾಖೆ ಉದ್ಘಾಟನೆ ಸಮಾರಂಭದಲ್ಲಿ […]
ಕಾರ್ಕಳ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಮುಷ್ಕರಕ್ಕೆ ವಿ ಸುನಿಲ್ ಕುಮಾರ್ ಭೇಟಿ.

ಕಾರ್ಕಳ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಸಂಘದ ವತಿಯಿಂದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ಕಾರ್ಕಳ ಶಾಸಕರು, ಮಾಜಿ ಸಚಿವರಾದ ವಿ ಸುನಿಲ್ ಕುಮಾರ್ರವರು ಭೇಟಿ ನೀಡಿದರು. ವೇತನ ಹೆಚ್ಚಳ, ಮೂಲಭೂತ ಸೌಕರ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಸೇರಿದಂತೆ ಹತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಫೆ 10ರಿಂದ ಗ್ರಾಮ ಆಡಳಿತಾಧಿಕಾರಿಗಳು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇವರ ರಾಜ್ಯವ್ಯಾಪಿ ಮುಷ್ಕರ ಇದೀಗ ಶನಿವಾರ […]