ಉಡುಪಿ:ಪ.ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಸ್ವ-ಉದ್ಯೋಗ ಹೊಂದಲು ಹಾಗೂ ತರಬೇತಿಯೊಂದಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ IHM ಹಾಗೂ FCI ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಹಾಗೂ ಕೆ.ಎಸ್.ಟಿ.ಡಿ.ಸಿ ಸಂಸ್ಥೆಗಳ ಮೂಲಕ ಕನಿಷ್ಠ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ […]
ಉಡುಪಿ:ಹಾಡಿರೇ ರಾಗಗಳ ತೂಗಿರೇ ದೀಪಗಳ : ಸಂಗೀತ ಗಾಯನ ಕಾರ್ಯಕ್ರಮ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ಭಂಡಾರ್ಕರ್ಸ್ ಕಾಲೇಜು ಐ.ಕ್ಯೂ.ಎ.ಸಿ ವಿಭಾಗ, ಕುಂದಾಪುರ ಇವರ ಸಹಕಾರದೊಂದಿಗೆ ಹಾಡಿರೇ ರಾಗಗಳ ತೂಗಿರೇ ದೀಪಗಳ -ಸಂಗೀತ ಗಾಯನ ಕಾರ್ಯಕ್ರಮವು ಆಗಸ್ಟ್ 28 ರಂದು ಬೆಳಗ್ಗೆ 9.30 ಕ್ಕೆ ಕುಂದಾಪುರ ಭಂಡಾರ್ ಕರ್ಸ್ ಕಾಲೇಜು ಇಲ್ಲಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದು, ಭಂಡಾರ್ಕರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ […]
ಉಡುಪಿ:ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಆಗಸ್ಟ್ 30 ಮತ್ತು 31 ರಂದು ಸಂಘಟಿಸಲಾಗುವುದು. ತಾಲೂಕು ಮಟ್ಟದ ಕ್ರೀಡೆಗಳಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದವರು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಆ. 30 ರಂದು ಉಡುಪಿಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಶಟ್ಲ್ ಬ್ಯಾಡ್ಮಿಂಟನ್, […]
ಇಂದು ಗಣೇಶ ಚತುರ್ಥಿ ಹಬ್ಬದ ಸಂಭ್ರಮ; ಮೋದಕ ಪ್ರಿಯ ಗಣೇಶನ ಆರಾಧನೆ, ಮಹತ್ವ ಹೀಗಿದೆ!

ಇಂದು ಚತುರ್ಥಿ ಹಿಂದೂಗಳಿಗೆ ಗಣಪತಿಯ ಹಬ್ಬದ ದಿನ. ವಿಘ್ನವಿನಾಶ ಹಾಗೂ ಸಿದ್ಧಿ ಬುದ್ಧಿಗಳ ಅಭೀಷ್ಟದಾಯಕ ಶಕ್ತಿಯ ಆದಿದೈವ ಶ್ರೀ ಗಣಪತಿ. ‘ಕಲೌ ದುರ್ಗಿ ವಿನಾಯಕ’ ಕಲಿಯುಗದಲ್ಲಿ ಗಣಪತಿ ಹಾಗೂ ದುರ್ಗಿಯರು ಶೀಘ್ರವರವನ್ನು ನೀಡುವ ದೇವತೆಗಳು. ಈ ತಾಯಿ (ಗೌರಿ) ಮಗನನ್ನು ಆರಾಧಿಸಿದರೆ ಸಕಲ ಕಾರ್ಯ ಸಿದ್ಧಿ ಖಚಿತ. ಯಾವ ಶುಭಕಾರ್ಯವೇ ಆಗಲಿ, ಅದು ಗಣೇಶನ ಪೂಜೆಯೊಂದಿಗೇ ಪ್ರಾರಂಭವಾಗುತ್ತದೆ. ಗಣೇಶನಿಗೆ ಅಗ್ರಸ್ಥಾನ:ಗಣೇಶನ ಪೂಜೆ ಮಾಡದೇ ಹೋದರೆ ಬೇರೆ ಯಾವ ದೇವತೆಗಳ ಪೂಜೆಯೂ ಸಫಲವಾಗುವುದಿಲ್ಲ. ಶ್ರೀ ಗಣೇಶನು ಪ್ರಸನ್ನನಾಗದಿದ್ದರೆ ಬೇರೆ […]
ಉಡುಪಿ:ಕೃಷಿ ಪಂಡಿತ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ವಿನೂತನ / ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ರೈತರು ಹಾಗೂ ರೈತ ಮಹಿಳೆಯರು ಕೃಷಿ ಪಂಡಿತ ಪ್ರಶಸ್ತಿಗೆ ಕೆ-ಕಿಸಾನ್ ಪೋರ್ಟಲ್ನಡಿ […]