ಮಧ್ವನಗರ: ಉಚಿತ ನೇತ್ರ ತಪಾಸಣೆ, ನೇತ್ರ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಮಸೂರ ಅಳವಡಿಕೆ ಶಿಬಿರ

ಉಡುಪಿ: ಯುವನಿಧಿ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಮೂಡುಬೆಟ್ಟು ಇದರ ವತಿಯಿಂದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಅಂಧತ್ವ ನಿವಾರಣಾ ವಿಭಾಗ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ‘ಉಚಿತ ನೇತ್ರ ತಪಾಸಣೆ, ನೇತ್ರ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಮಸೂರ (ಐಒಎಲ್) ಅಳವಡಿಕೆ ಶಿಬಿರ’ವು ಮಧ್ವನಗರದ ಜವಣೆರ ಕಟ್ಟೆಯ ಏಕತಾ ರಂಗಮಂಟಪದಲ್ಲಿ ನಡೆಯಿತು. […]
ಶೀಘ್ರವೇ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣವನ್ನು ಎಲ್ಲ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಇಲ್ಲಿ ಸ್ಪಷ್ಟನೆ ನೀಡಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು, ‘ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ. ಯೋಜನೆಗೆ ಹಣ ಫಲಾನುಭವಿಗಳ ಖಾತೆಗಳಿಗೆ ಜಮಾ […]
ಉಡುಪಿ:ಜಾತಿ, ಆದಾಯ ಪ್ರಮಾಣ ಪತ್ರ ಪಡೆಯಲು ಅಡಚಣೆ ಉಂಟಾದಲ್ಲಿ ಸಹಾಯವಾಣಿ ಸಂಪರ್ಕಿಸಿ

ಉಡುಪಿ: ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು / ಪಡೆಯಲು ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಅಡಚಣೆ ಉಂಟಾದಲ್ಲಿ ಈ ಕೆಳಕಂಡ ಜಿಲ್ಲಾಧಿಕಾರಿಯವರ ಕಛೇರಿ ಹಾಗೂ ತಹಶೀಲ್ದಾರರ ಕಛೇರಿಯ ಸಹಾಯವಾಣಿಯನ್ನು ಸಂರ್ಪಕಿಸಬಹುದಾಗಿದೆ. ಜಿಲ್ಲಾಧಿಕಾರಿ ಕಛೇರಿ ಸಹಾಯವಾಣಿ ಸಂಖ್ಯೆ: 0820-2574924, ತಹಶೀಲ್ದಾರರ ಕಛೇರಿಯ ಸಹಾಯವಾಣಿ ಸಂಖ್ಯೆಗಳಾದ ಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201. ಬ್ರಹ್ಮಾವರ ದೂ.ಸಂಖ್ಯೆ: 0820-2560494, ಬೈಂದೂರು ದೂ.ಸಂಖ್ಯೆ: 08254-251657, […]
ಉಡುಪಿ:ಯುವ ಪರಿವರ್ತಕರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳೀಸಲಾಗಿದ್ದು, ಈ ಯೋಜನೆ ಮೂಲಕ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲಾಗುತ್ತಿದೆ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನದ ಆಧಾರದ ಮೇರೆಗೆ ಯುವ ಪರಿವರ್ತಕರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ, ಕನಿಷ್ಠ 21 ರಿಂದ […]
ಕುಂದಾಪುರದ ಈ ಹೆಣ್ಣು ಮಗಳ ಚಿಕಿತ್ಸೆಗೆ ಬೇಕಿದೆ ನಿಮ್ಮ ನೆರವು:

ಅರಳಿ ಬಾಳಿನಲ್ಲಿ ಬೆಳಗುತ್ತಲೇ ಇರಬೇಕಾದ ಕನಸೊಂದು ಆಸ್ಪತ್ರೆಯಲ್ಲಿ ನರಳುತ್ತಿದೆ. ಕೆಲವರ ಬದುಕೇ ಹಾಗೆ ಎಷ್ಟೇ ಪ್ರಾಮಾಣಿಕರಾಗಿದ್ದರೂ ಪರೋಪಕಾರಿಯಾಗಿ ಬಾಳಿದರೂ ಕೂಡ ವಿಧಿ ಎಂಬ ನಿಷ್ಕರುಣಿ ಆಟವಾಡುತ್ತಿರುತ್ತದೆ. ಅಂದ ಹಾಗೆ ಈಕೆ ಅನುಷಾ ಶೆಟ್ಟಿ (ಪ್ರಾಯ 27) ಕುಂದಾಪುರ ತಾಲೂಕು ಹಾಲಾಡಿ ಗ್ರಾಮದ ಅಜಿತ್ ಶೆಟ್ಟಿ ಅವರ ಪತ್ನಿ ಹಾಗೂ ಒಂದೂವರೆ ವರ್ಷದ ಹೆಣ್ಣು ಮಗುವಿನ ತಾಯಿ. ಇವರು ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾದಾಗ ಕಿಡ್ನಿ ಕ್ಯಾನ್ಸರ್ (ಕೊನೆಯ ಹಂತ) ಇದೆ ಎಂದು ಡಾಕ್ಟರ್ ದೃಢ ಪಡಿಸುತ್ತಾರೆ. […]