SSLC ಪರೀಕ್ಷಯ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ
ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್ಸೈಟ್ sslc.karnataka.gov.in ನಲ್ಲಿ ಪ್ರವೇಶಿಸಬಹುದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (KSEEB) SSLC (10 ನೇ ತರಗತಿ) ಪರೀಕ್ಷೆ 2023 ರ ಮರುಮೌಲ್ಯಮಾಪನ ಮತ್ತು ಮರು ಲೆಕ್ಕಾಚಾರದ ಫಲಿತಾಂಶಗಳನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ನಲ್ಲಿ ನಮೂದಿಸಿರುವಂತೆ ತಮ್ಮ ನೋಂದಣಿ ಸಂಖ್ಯೆಗಳು ಮತ್ತು ಜನ್ಮ ದಿನಾಂಕಗಳನ್ನು ನಮೂದಿಸಬೇಕಾಗುತ್ತದೆ. ಈ ವರ್ಷ ಒಟ್ಟು 8,35,102 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟಾರೆ ಉತ್ತೀರ್ಣ ಶೇಕಡಾ 83.89 ರಷ್ಟಿದ್ದು, […]
ಚೊಚ್ಚಲ ಬಾರಿಗೆ ಸೆಮೀಸ್ಗೇರಿದ ಬೆಲಾರಸ್ ಪ್ರತಿಭೆ: ಫ್ರೆಂಚ್ ಓಪನ್ ಮಹಿಳೆಯರ ಸಿಂಗಲ್ಸ್
ಪ್ಯಾರಿಸ್: ಫ್ರೆಂಚ್ ಓಪನ್ ಮಹಿಳಾ ಸಿಂಗಲ್ಸ್ನಲ್ಲಿ ಬೆಲಾರಸ್ನ ಅರೀನಾ ಸಬಲೆಂಕಾ 6-4, 6-4ರ ನೇರ ಸೆಟ್ಗಳಿಂದ ಉಕ್ರೇನ್ನ ಎಲಿನಾ ಸ್ವಿಟೋಲಿನಾ ಅವರನ್ನು ಮಣಿಸಿದರು. ಮಂಗಳವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ ವಿಶ್ವದ ಎರಡನೇ ಶ್ರೇಯಾಂಕದ ಆಟಗಾರ್ತಿ ಬೆಲಾರಸ್ನ ಅರೀನಾ ಸಬಲೆಂಕಾ ಅವರು ಉಕ್ರೇನ್ನ ಎಲಿನಾ ಸ್ವಿಟೋಲಿನಾ ಅವರನ್ನು 6-4, 6-4 ಸೆಟ್ಗಳಿಂದ ಸೋಲಿಸಿ ಫ್ರೆಂಚ್ ಓಪನ್ ಸೆಮಿಫೈನಲ್ ತಲುಪಿದರು. ಸಬಲೆಂಕಾ ಸೆಮಿಫೈನಲ್ನಲ್ಲಿ ಝೆಕ್ ಕರೋಲಿನಾ ಮುಚೋವಾ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯ ಹೆಚ್ಚು ಆಕರ್ಷಣೆಗೆ ಕಾರಣವಾಗಿತ್ತು. […]
ಸಾಧಕರ ಕುರ್ಚಿ ಏರಿದ ಡಿಸಿಎಂ ಡಿಕೆಶಿ:ವೀಕೆಂಡ್ ವಿತ್ ರಮೇಶ್
ವೀಕೆಂಡ್ ವಿತ್ ರಮೇಶ್’ ಅಪಾರ ಸಂಖ್ಯೆಯ ವೀಕ್ಷಕರನ್ನು ಸಂಪಾದಿಸಿರುವ ಕನ್ನಡದ ಜನಪ್ರಿಯ ಕಾರ್ಯಕ್ರಮ.ಅಂತಿಮ ಘಟ್ಟ ತಲುಪಿರುವ ವೀಕೆಂಡ್ ವಿತ್ ರಮೇಶ್ ಶೋನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆಗಮಿಸಲಿದ್ದಾರೆ ಕನ್ನಡಿಗರ ಮನೆಗೆದ್ದಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರು ಬಂದು ತಮ್ಮ ಸಾಧನೆಯ ಪುಟಗಳನ್ನು ಪ್ರೇಕ್ಷಕರ ಮುಂದೆ ತೆರೆದಿಡುತ್ತಾರೆ. ‘ವೀಕೆಂಡ್ ವಿತ್ ರಮೇಶ್’ ಶೋನ ಈ ವಾರದ ಪ್ರೋಮೋ ರಿಲೀಸ್ ಆಗಿದೆ. ಸೋಷಿಯಲ್ ಮೀಡಿಯಾಗಳಲ್ಲೂ ಪ್ರೋಮೋ ರಿಲೀಸ್ ಮಾಡಿರುವ ಜೀ ವಾಹಿನಿ, ”ರಾಜ್ಯ ಕಂಡ […]
ಮಾಜಿ IPS ಅಧಿಕಾರಿ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಲಖನೌದಲ್ಲಿ ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಲೈಸನ್ಸ್ ಹೊಂದಿದ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯ ರಾಜಧಾನಿ ಲಖನೌದಲ್ಲಿ ನಡೆದಿದೆ. “ನನ್ನ ಈ ಸಾವಿಗೆ ನಾನೇ ಹೊಣೆ” ಎಂದು ಮಾಜಿ ಅಧಿಕಾರಿ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್ನೋಟ್ ಸ್ಥಳದಲ್ಲಿ ದೊರೆತಿದೆ. ದಿನೇಶ್ ಕುಮಾರ್ ಶರ್ಮಾ (73) ಆತ್ಮಹತ್ಯೆಗೆ ಶರಣಾದ ಅಧಿಕಾರಿ. ಇಲ್ಲಿನ ಗೋಮತಿ […]
ISSF ಜೂನಿಯರ್ ವಿಶ್ವಕಪ್ ನಲ್ಲಿ 3ನೇ ಚಿನ್ನ ಗೆದ್ದ ಧನುಷ್ ಶ್ರೀಕಾಂತ್
ಜರ್ಮನಿ: ಐಎಸ್ಎಸ್ಎಫ್ ಜೂನಿಯರ್ ವಿಶ್ವಕಪ್ 2023 ಶೂಟಿಂಗ್ನಲ್ಲಿ ಧನುಷ್ ಶ್ರೀಕಾಂತ್ ಮೂರನೇ ಚಿನ್ನದ ಪದಕ ಗೆದ್ದರು. ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇಂಟರ್ನ್ಯಾಶನಲ್ ಶೂಟಿಂಗ್ ಸ್ಪೋರ್ಟ್ ಫೆಡರೇಶನ್ (ಐಎಸ್ಎಸ್ಎಫ್) ಜೂನಿಯರ್ ವಿಶ್ವಕಪ್ನಲ್ಲಿ ಧನುಷ್ ಶ್ರೀಕಾಂತ್ ಪುರುಷರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಸ್ಪರ್ಧೆಯ ಮೂರನೇ ದಿನ ಭಾರತ 6 ಪದಕಗಳಿಂದ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಗಿಟ್ಟಿಸಿಕೊಂಡಿತು. ಶೂಟಿಂಗ್ನಲ್ಲಿ ಭಾರತಕ್ಕೆ ದಕ್ಕಿದ ಮೂರನೇ ಚಿನ್ನದ ಪದಕ ಇದಾಗಿದೆ. ಶೂಟಿಂಗ್ ಫೈನಲ್ನಲ್ಲಿ ಧನುಷ್ 24 ಶಾಟ್ಗಳಲ್ಲಿ 249.4 […]