SSLC ಪರೀಕ್ಷಯ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ

ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ sslc.karnataka.gov.in ನಲ್ಲಿ ಪ್ರವೇಶಿಸಬಹುದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (KSEEB) SSLC (10 ನೇ ತರಗತಿ) ಪರೀಕ್ಷೆ 2023 ರ ಮರುಮೌಲ್ಯಮಾಪನ ಮತ್ತು ಮರು ಲೆಕ್ಕಾಚಾರದ ಫಲಿತಾಂಶಗಳನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್‌ನಲ್ಲಿ ನಮೂದಿಸಿರುವಂತೆ ತಮ್ಮ ನೋಂದಣಿ ಸಂಖ್ಯೆಗಳು ಮತ್ತು ಜನ್ಮ ದಿನಾಂಕಗಳನ್ನು ನಮೂದಿಸಬೇಕಾಗುತ್ತದೆ. ಈ ವರ್ಷ ಒಟ್ಟು 8,35,102 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟಾರೆ ಉತ್ತೀರ್ಣ ಶೇಕಡಾ 83.89 ರಷ್ಟಿದ್ದು, […]

ಚೊಚ್ಚಲ ಬಾರಿಗೆ ಸೆಮೀಸ್‌ಗೇರಿದ ಬೆಲಾರಸ್‌ ಪ್ರತಿಭೆ: ಫ್ರೆಂಚ್ ಓಪನ್ ಮಹಿಳೆಯರ ಸಿಂಗಲ್ಸ್‌

ಪ್ಯಾರಿಸ್‌: ಫ್ರೆಂಚ್ ಓಪನ್ ಮಹಿಳಾ ಸಿಂಗಲ್ಸ್​ನಲ್ಲಿ ಬೆಲಾರಸ್‌ನ ಅರೀನಾ ಸಬಲೆಂಕಾ 6-4, 6-4ರ ನೇರ ಸೆಟ್‌ಗಳಿಂದ ಉಕ್ರೇನ್‌ನ ಎಲಿನಾ ಸ್ವಿಟೋಲಿನಾ ಅವರನ್ನು ಮಣಿಸಿದರು. ಮಂಗಳವಾರ ನಡೆದ ಮಹಿಳೆಯರ ಸಿಂಗಲ್ಸ್​ ವಿಭಾಗದ ಪಂದ್ಯದಲ್ಲಿ ವಿಶ್ವದ ಎರಡನೇ ಶ್ರೇಯಾಂಕದ ಆಟಗಾರ್ತಿ ಬೆಲಾರಸ್‌ನ ಅರೀನಾ ಸಬಲೆಂಕಾ ಅವರು ಉಕ್ರೇನ್‌ನ ಎಲಿನಾ ಸ್ವಿಟೋಲಿನಾ ಅವರನ್ನು 6-4, 6-4 ಸೆಟ್‌ಗಳಿಂದ ಸೋಲಿಸಿ ಫ್ರೆಂಚ್ ಓಪನ್ ಸೆಮಿಫೈನಲ್ ತಲುಪಿದರು. ಸಬಲೆಂಕಾ ಸೆಮಿಫೈನಲ್​ನಲ್ಲಿ ಝೆಕ್ ಕರೋಲಿನಾ ಮುಚೋವಾ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯ ಹೆಚ್ಚು ಆಕರ್ಷಣೆಗೆ ಕಾರಣವಾಗಿತ್ತು. […]

ಸಾಧಕರ ಕುರ್ಚಿ ಏರಿದ ಡಿಸಿಎಂ ಡಿಕೆಶಿ:ವೀಕೆಂಡ್​ ವಿತ್​ ರಮೇಶ್

ವೀಕೆಂಡ್​ ವಿತ್​ ರಮೇಶ್​’ ಅಪಾರ ಸಂಖ್ಯೆಯ ವೀಕ್ಷಕರನ್ನು ಸಂಪಾದಿಸಿರುವ ಕನ್ನಡದ ಜನಪ್ರಿಯ ಕಾರ್ಯಕ್ರಮ.ಅಂತಿಮ ಘಟ್ಟ ತಲುಪಿರುವ ವೀಕೆಂಡ್​ ವಿತ್​ ರಮೇಶ್​ ಶೋನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​ ಆಗಮಿಸಲಿದ್ದಾರೆ ಕನ್ನಡಿಗರ ಮನೆಗೆದ್ದಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರು ಬಂದು ತಮ್ಮ ಸಾಧನೆಯ ಪುಟಗಳನ್ನು ಪ್ರೇಕ್ಷಕರ ಮುಂದೆ ತೆರೆದಿಡುತ್ತಾರೆ. ‘ವೀಕೆಂಡ್​ ವಿತ್​ ರಮೇಶ್​’ ಶೋನ ಈ ವಾರದ ಪ್ರೋಮೋ ರಿಲೀಸ್​ ಆಗಿದೆ. ಸೋಷಿಯಲ್​ ಮೀಡಿಯಾಗಳಲ್ಲೂ ಪ್ರೋಮೋ ರಿಲೀಸ್​ ಮಾಡಿರುವ ಜೀ ವಾಹಿನಿ, ”ರಾಜ್ಯ ಕಂಡ […]

ಮಾಜಿ IPS​ ಅಧಿಕಾರಿ ರಿವಾಲ್ವರ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಲಖನೌದಲ್ಲಿ ಮಾಜಿ ಐಪಿಎಸ್​ ಅಧಿಕಾರಿಯೊಬ್ಬರು ರಿವಾಲ್ವರ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಮಾಜಿ ಐಪಿಎಸ್​ ಅಧಿಕಾರಿಯೊಬ್ಬರು ತಮ್ಮ ಲೈಸನ್ಸ್ ಹೊಂದಿದ ರಿವಾಲ್ವರ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯ ರಾಜಧಾನಿ ಲಖನೌದಲ್ಲಿ ನಡೆದಿದೆ. “ನನ್ನ ಈ ಸಾವಿಗೆ ನಾನೇ ಹೊಣೆ” ಎಂದು ಮಾಜಿ ಅಧಿಕಾರಿ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್​ನೋಟ್ ಸ್ಥಳದಲ್ಲಿ ದೊರೆತಿದೆ. ದಿನೇಶ್ ಕುಮಾರ್ ಶರ್ಮಾ (73) ಆತ್ಮಹತ್ಯೆಗೆ ಶರಣಾದ ಅಧಿಕಾರಿ. ಇಲ್ಲಿನ ಗೋಮತಿ […]

ISSF​ ಜೂನಿಯರ್ ವಿಶ್ವಕಪ್ ನಲ್ಲಿ 3ನೇ ಚಿನ್ನ ಗೆದ್ದ ಧನುಷ್ ಶ್ರೀಕಾಂತ್

ಜರ್ಮನಿ: ಐಎಸ್​ಎಸ್​ಎಫ್​ ಜೂನಿಯರ್ ವಿಶ್ವಕಪ್ 2023 ಶೂಟಿಂಗ್‌ನಲ್ಲಿ ಧನುಷ್ ಶ್ರೀಕಾಂತ್ ಮೂರನೇ ಚಿನ್ನದ ಪದಕ ಗೆದ್ದರು. ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇಂಟರ್‌ನ್ಯಾಶನಲ್ ಶೂಟಿಂಗ್ ಸ್ಪೋರ್ಟ್ ಫೆಡರೇಶನ್ (ಐಎಸ್‌ಎಸ್‌ಎಫ್) ಜೂನಿಯರ್ ವಿಶ್ವಕಪ್‌ನಲ್ಲಿ ಧನುಷ್ ಶ್ರೀಕಾಂತ್ ಪುರುಷರ 10 ಮೀಟರ್ ಏರ್ ರೈಫಲ್​ ಸ್ಪರ್ಧೆಯಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಸ್ಪರ್ಧೆಯ ಮೂರನೇ ದಿನ ಭಾರತ 6 ಪದಕಗಳಿಂದ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಗಿಟ್ಟಿಸಿಕೊಂಡಿತು. ಶೂಟಿಂಗ್​ನಲ್ಲಿ ಭಾರತಕ್ಕೆ ದಕ್ಕಿದ ಮೂರನೇ ಚಿನ್ನದ ಪದಕ ಇದಾಗಿದೆ. ಶೂಟಿಂಗ್ ಫೈನಲ್‌ನಲ್ಲಿ ಧನುಷ್ 24 ಶಾಟ್‌ಗಳಲ್ಲಿ 249.4 […]