ಮದುವೆಯಾದ 1 ದಿನದಲ್ಲಿ ಭೀಕರ ಅಪಘಾತ: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ; ವರ ಮೃತ್ಯು.

ಉತ್ತರಪ್ರದೇಶ: ಮದುವೆ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಮೌನ ಆವರಿಸಿದೆ, ಆಗತಾನೆ ಮದುವೆಯಾದ ಯುವಕ ಚಿರ ನಿದ್ರೆಗೆ ಜಾರಿದ್ದಾನೆ, ಹೌದು ಇದು ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆ. ಏನಿದು ಘಟನೆ:ಉತ್ತರ ಪ್ರದೇಶದ ಬರೇಲಿಯ ಸತೀಶ್ ಎಂಬ ಯುವಕ ಸ್ವಾತಿ ಎಂಬ ಯುವತಿಯ ಜೊತೆ ಬುಧವಾರ ವಿವಾಹವಾಗಿದ್ದ ಇದೇ ಖುಷಿಯಲ್ಲಿ ಮನೆಯಲ್ಲಿದ್ದ ಸಂಬಂಧಿಕರಿಗೆ ಏನಾದರೂ ಸ್ವೀಟ್ ತರೋಣ ಎಂದು ತನ್ನ ಮೂವರು ಸ್ನೇಹಿತರ ಜೊತೆ ಸೇರಿ ಸತೀಶ್ ಕಾರಿನಲ್ಲಿ ಪಟ್ಟಣದ ಕಡೆಗೆ ಹೊರಟಿದ್ದಾರೆ ಈ ವೇಳೆ ರಸ್ತೆ […]

ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜ್: ಜೆಇಇ ಮೈನ್ಸ್ 2025 ಪ್ರವೇಶ ಪರೀಕ್ಷೆಯಲ್ಲಿ 98 ಪರ್ಸಂಟೈಲ್ ಗಿಂತ ಅಧಿಕ ಅಂಕಗಳು.

ಹೆಮ್ಮಾಡಿ:ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2025ರ ಮೊದಲನೇ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿ ಗಿರೀಶ್ ಪೈ 98.921 ಪರ್ಸಂಟೈಲ್, ನಿಶ್ಚಿತ್ 98.674 ಪರ್ಸಂಟೈಲ್, ಆಕಾಶ್ ಹೆಬ್ಬಾರ್ 98.078 ಪರ್ಸಂಟೈಲ್, ಧೀರಜ್ ಜಿ.ಡಿ.97.787 ಪರ್ಸಂಟೈಲ್,ಚಿರಂತನ್ 95.866 […]

ಬ್ರಹ್ಮಾವರ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಟ್ಟಡ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ನಡೆಯಲಿದೆ. ಸಾವಿರ ವರ್ಷಗಳ ಇತಿಹಾಸ ಇರುವ ದೇಗುಲ ಮುಂದಿನ ಎರಡು ವರ್ಷಗಳಲ್ಲಿ ಸಂಪೂರ್ಣ ಜೀರ್ಣೋದ್ಧಾರ ಆಗಲಿದೆ. ಕ್ಷೇತ್ರಕ್ಕೆ ಈಗಾಗಲೇ 60 ಅಡಿ ಎತ್ತರದ ಧ್ವಜಸ್ತಂಭ ಮರ ಆಗಮಿಸಿದ್ದು ಇದೀಗ, ಜೀರ್ಣೋದ್ಧಾರ ಸಮಿತಿಯ ಕಟ್ಟಡದ ಉದ್ಘಾಟನೆ ನಡೆದಿದೆ. ಶಾಸಕ ಯಶ್ ಪಾಲ್ ಸುವರ್ಣ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದ್ದಾರೆ. ಅಂದಾಜು 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ದೇಗುಲದ ನೀಲನಕಾಶೆಯನ್ನು ತ್ರೀಡಿ ವೀಡಿಯೋದಲ್ಲಿ ಬಿಡುಗಡೆಗೊಳಿಸಲಾಯ್ತು. ಜೀರ್ಣೋದ್ಧಾರದ ಕೆಲಸ […]

ಮದ್ಯವಸನಿ ಪಾಲಕರ ಮಕ್ಕಳಲ್ಲಿ‌ ಶಾಶ್ವತ ಖಿನ್ನತೆ, ಆತಂಕ

ಉಡುಪಿ: ಇಂದು ಕುಡಿತ ಎಂಬುದು ಪ್ರತಿಷ್ಠೆಯ ವಿಚಾರವಾಗಿದೆ. ಸಂಘಸಂಸ್ಥೆಗಳು ಪಾರ್ಟಿಯ ನೆಪದಲ್ಲಿ ಕುಡಿತವನ್ನು ಪ್ರೇರೆಪಿಸುತ್ತಿವೆ. ಇದರ ಪರಿಣಾಮ ಸಮಾಜದ ಕಟ್ಟಕಡೆಯ ವ್ಯಕ್ತಿಯವರೆಗೂ ಮದ್ಯವ್ಯಸನ ಹಬ್ಬಿದೆ ಎಂದು ಚಾಮರಾಜನಗರದ ದೀನಬಂಧು ಮಕ್ಕಳ ಮನೆಯ ಸಂಸ್ಥಾಪಕ ಹಾಗೂ ಶಿಕ್ಷಣ ತಜ್ಞ ಪ್ರೊ.ಜಯದೇವ್ ಜಿ.ಎಸ್. ಆತಂಕ‌ ವ್ಯಕ್ತಪಡಿಸಿದರು. ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಮುಂಬಯಿ ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಬೆಂಗಳೂರು ಒನ್ ಗುಡ್ ಸ್ಟೆಪ್, ಮಣಿಪಾಲ ರೋಟರಿ ಕ್ಲಬ್ ಹಾಗೂ ಉಡುಪಿ ಯಕ್ಷಗಾನ ಕಲಾರಂಗದ ಸಂಯುಕ್ತ ಆಶ್ರಯದಲ್ಲಿ ಮದ್ಯ […]