ಕೆಜಿಎಫ್ 2 ದಾಖಲೆ ಹಿಂದಿಕ್ಕಿ ‘ಆದಿಪುರುಷ್’ ಮುಂಗಡ ಬುಕ್ಕಿಂಗ್ :ವಿದೇಶಗಳಲ್ಲಿ ಭರ್ಜರಿ ರೆಸ್ಪಾನ್ಸ್!
‘ಆದಿಪುರುಷ್’.. ಓಂ ರಾವುತ್ ನಿರ್ದೇಶನದ ‘ಆದಿಪುರುಷ್’ ಚಿತ್ರದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಇದು ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಬಿಡುಗಡೆಗೂ ಮುನ್ನವೇ ‘ಆದಿಪುರುಷ್’ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ನಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ನಲ್ಲಿ ಕೆಜಿಎಫ್-2 ದಾಖಲೆಯನ್ನು ‘ಆದಿಪುರುಷ್’ ಹಿಂದಿಕ್ಕಿದೆ. ಭೂಷಣ್ ಕುಮಾರ್ ನಿರ್ಮಾಣದ ಈ ಸಿನಿಮಾದಲ್ಲಿ ಪ್ರಭಾಸ್, ಕೃತಿ ಸನೋನ್, ಸೈಫ್ ಅಲಿ ಖಾನ್ ನಟಿಸಿದ್ದಾರೆ. ಇದೇ 16 ರಂದು ಚಿತ್ರ ತೆರೆ ಕಾಣಲಿದೆ. ಅದಕ್ಕೂ ಮುನ್ನವೇ ಆದಿಪುರುಷ್ ದೇಶ, […]
9ನೇ ಬಾರಿಗೆ ಐಸಿಸಿ ವಿಶ್ವ ಚಾಂಪಿಯನ್ ಪಟ್ಟಕ್ಕೆ ಪಾತ್ರವಾದ ಆಸ್ಟ್ರೇಲಿಯಾ
ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಕಪ್ ಗೆದ್ದು ಆಸ್ಟ್ರೇಲಿಯಾ ತಂಡ ದಾಖಲೆ ನಿರ್ಮಾಣ ಮಾಡಿದೆ. ಐಸಿಸಿ ನಡೆಸುವ ಎಲ್ಲಾ ಪ್ರತಿಷ್ಠಿತ ಕಪ್ಗಳನ್ನು ಗೆದ್ದ ತಂಡ ಎಂಬ ಖ್ಯಾತಿಗೆ ಆಸಿಸ್ ತಂಡ ಭಾಜನವಾಗಿದೆ. ಒಟ್ಟು 9 ಐಸಿಸಿ ಟ್ರೋಫಿ ಮತ್ತು ಎಲ್ಲಾ ಐಸಿಸಿ ಕಪ್ಗಳನ್ನು ಗೆದ್ದ ತಂಡ ಎಂಬ ಖ್ಯಾತಿಗೆ ಆಸ್ಟ್ರೇಲಿಯಾ ಭಾಜನವಾಗಿದೆ. ಪಂದ್ಯದ ಮೆಲುಕು.. ಟಾಸ್ ಗೆದ್ದು ಬೌಲಿಂಗ್ ತೆಗೆದುಕೊಂಡ ಭಾರತ ಮೊದಲ ಇನ್ನಿಂಗ್ಸ್ನಲ್ಲಿ ಆಸಿಸ್ನ್ನು 469 ರನ್ಗೆ ಆಲ್ಔಟ್ ಮಾಡಿತು. ಈ ಇನ್ನಿಂಗ್ಸ್ನಲ್ಲಿ ಟ್ರಾವೆಸ್ ಹೆಡ್ […]
ನಿರ್ದೇಶಕ , ಪಂಜಾಬಿ ನಟ ಮಂಗಲ್ ಧಿಲ್ಲೋನ್ ನಿಧನ
ದೀರ್ಘಕಾಲದಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು, ಸುಮಾರು ಒಂದು ತಿಂಗಳ ಕಾಲ ಪಂಜಾಬಿನ ಲೂಧಿಯಾನದ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲ ಕ್ಯಾನ್ಸರ್ನಿಂದ ಬಳಲುತ್ತಿದ್ದ ಪಂಜಾಬಿ ನಟ, ನಿರ್ದೇಶಕ, ನಿರ್ಮಾಪಕ ಮಂಗಲ್ ಧಿಲ್ಲೋನ್ ಇಂದು ಕೊನೆಯುಸಿರೆಳೆದಿದ್ದಾರೆ. ಮನರಂಜನಾ ಲೋಕದಿಂದ ಅತ್ಯಂತ ದುಃಖದ ಸುದ್ದಿಯೊಂದು ಹೊರಬಿದ್ದಿದೆ. ಜುನೂನ್ ಮತ್ತು ಬುನಿಯಾದ್ ಖ್ಯಾತಿಯ ಮಂಗಲ್ ಧಿಲ್ಲೋನ್ ನಿಧನರಾಗಿದ್ದಾರೆ. ಬಾಲಿವುಡ್ ನಟ ಯಶಪಾಲ್ ಶರ್ಮಾ ಅವರು ಮಂಗಲ್ ಸಾವನ್ನು ಖಚಿತಪಡಿಸಿದ್ದಾರೆ. ಮಂಗಲ್ ಧಿಲ್ಲೋನ್ ಇನ್ನು […]
ಮಧ್ಯಮ ವರ್ಗದವರ ಜೇಬಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಹಣ ಹಾಕುತ್ತೇವೆ ಎಂದ ಸಿಎಂ
ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು:ಇಂದಿನಿಂದ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಸಾಮಾನ್ಯ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು. ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷ ಗೇಲಿ ಮಾಡಿಕೊಂಡೇ ಇರಲಿ ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಶಕ್ತಿ ಯೋಜನೆ ಜಾರಿ ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ವಿರೋಧ ಪಕ್ಷದವರಿಗೆ ನಡುಕ ಹುಟ್ಟಿದೆ. ಅದಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರು […]
ಮುಂಬೈ ಮಂಗಳೂರು ಎರಡನೇ ದೈನಂದಿನ ವಿಮಾನ ಹಾರಾಟ ಆರಂಭಿಸಿದ ಏರ್ ಇಂಡಿಯಾ
ಮಂಗಳೂರು: ಏರ್ ಇಂಡಿಯಾದ ಎರಡನೇ ಮುಂಬೈ ಮಂಗಳೂರು ದೈನಂದಿನ ವಿಮಾನ ಹಾರಾಟ ಆರಂಭವಾಗಿದೆ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈಗೆ ಎರಡನೇ ದೈನಂದಿನ ವಿಮಾನ ಯಾನವನ್ನು ಆರಂಭಿಸಿದೆ. ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ ಜೂನ್ 10ರಿಂದ ಏರ್ ಇಂಡಿಯಾ ತನ್ನ ಎರಡನೇ ದೈನಂದಿನ ವಿಮಾನಯಾನ ಸೇವೆಯನ್ನು ಆರಂಭಿಸಿದೆ. ಮೇ 22 ರಂದು ಇಂಡಿಗೊ ಮುಂಬೈ-ಮಂಗಳೂರು ವಲಯದಲ್ಲಿ ಮೂರನೇ ದೈನಂದಿನ ವಿಮಾನವನ್ನು ಪ್ರಾರಂಭಿಸಿದ ನಂತರ ಈ ವಿಮಾನ ಸಂಚಾರ ಆರಂಭವಾಗಿದೆ. ಇದರೊಂದಿಗೆ, ಎರಡು […]